ಶಿವರಾಜ್ ಕುಮಾರ್ (ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

'ಅಪ್ಪು' ಅಗಲಿಕೆಯ ನೋವಲ್ಲೇ ಕೆಲಸಕ್ಕೆ ಮರಳಿದ ಶಿವಣ್ಣ: ನವೆಂಬರ್ 21ಕ್ಕೆ 'ವೇದ' ಸಿನಿಮಾ ಮೂಹೂರ್ತ!

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನದ ದುಃಖದ ನಡುವೆಯೂ ನಟ ಶಿವರಾಜಕುಮಾರ್ ನಿಧಾನಕ್ಕೆ ಕೆಲಸಕ್ಕೆ ಮರಳಿದ್ದಾರೆ.

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನದ ದುಃಖದ ನಡುವೆಯೂ ನಟ ಶಿವರಾಜಕುಮಾರ್ ನಿಧಾನಕ್ಕೆ ಕೆಲಸಕ್ಕೆ ಮರಳಿದ್ದಾರೆ.

ಇತ್ತೀಚೆಗೆ ಬಿಡುಗಡೆಯಾದ ಭಜರಂಗಿ-2 ಸಿನಿಮಾವನ್ನು ಶಿವರಾಜ್ ಕುಮಾರ್ ಭಾನುವಾರ ಅನುಪಮಾ ಚಿತ್ರಮಂದಿರಲ್ಲಿ ಅಭಿಮಾನಿಗಳ ಜೊತೆ ವೀಕ್ಷಿಸಿದರು.

ಹರ್ಷ ನಿರ್ದೇಶನದ ಸಿನಿಮಾವನ್ನು ಜಯಣ್ಣ ಫಿಲ್ಮ್ಸ್ ನಿರ್ಮಾಣ ಮಾಡಿತ್ತು. ಅಕ್ಟೋಬರ್ 29 ರಂದು ಸಿನಿಮಾ ರಿಲೀಸ್ ಆಗಿತ್ತು, ಆದರೆ ಅದೇ ದಿನ ಪುನೀತ್ ಅಕಾಲಿಕ ಮರಣಕ್ಕೆ ತುತ್ತಾದ ಹಿನ್ನೆಲೆಯಲ್ಲಿ ಪ್ರದರ್ಶನ ಸ್ಥಗಿತಗೊಳಿಸಲಾಗಿತ್ತು. ಇದೀಗ ಶಿವಣ್ಣ ತಮ್ಮ 125ನೇ ಸಿನಿಮಾವನ್ನು ನವೆಂಬರ್ 21 ರಂದು ಸರಳ ಮುಹೂರ್ತದೊಂದಿಗೆ ಪ್ರಾರಂಭಿಸಲಿದ್ದಾರೆ.

ವೇದ ಎಂಬ ಟೈಟಲ್ ಹೊಂದಿರುವ ಈ ಸಿನಮಾಗೆ 'ದಿ ಬ್ರೂಟಲ್ 1960s' ಎಂಬ ಅಡಿಬರಹವಿದೆ.  ಈ ಚಿತ್ರವು ಶಿವರಾಜಕುಮಾರ್ ಅವರ ಹೋಮ್ ಬ್ಯಾನರ್ ಗೀತಾ ಪಿಕ್ಚರ್ಸ್‌ನ ಮೊದಲ ಸಿನಿಮವಾಗಿದೆ. ವೇದ 1960 ರ ದಶಕದಲ್ಲಿ ನಡೆಯುವ ಗ್ರಾಮೀಣ ಭಾಗದ ಕಥೆ ಹೊಂದಿರುವ ಚಿತ್ರ ಎಂದು ಹೇಳಲಾಗುತ್ತದೆ.  ಈ ಹಿಂದೆ ವಜ್ರಕಾಯ, ಭಜರಂಗಿ, ಭಜರಂಗಿ 2 ಚಿತ್ರಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದ ಶಿವಣ್ಣ ಮತ್ತು ಹರ್ಷ ನಾಲ್ಕನೇ ಬಾರಿಗೆ ಕೈ ಜೋಡಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT