ಶಾಲೂ ಚೌರಾಸಿಯಾ 
ಸಿನಿಮಾ ಸುದ್ದಿ

ತೆಲುಗು ನಟಿಯ ಮೇಲೆ ಅಪರಿಚಿತನಿಂದ ಹಲ್ಲೆ: ಮೊಬೈಲ್ ಕಸಿದು ಪರಾರಿ

ವ್ಯಕ್ತಿಯೊಬ್ಬ  ಬಂದು ತನ್ನ ಬಳಿಯಿದ್ದ ಬೆಲೆಬಾಳುವ ವಸ್ತು ನೀಡುವಂತೆ ಕೇಳಿದ್ದಾನೆ, ಆದರೆ ನೀಡಲು ಆಕೆ ನಿರಾಕರಿಸಿದಾಗ ಆಕೆಯ ಮುಖಕ್ಕೆ ಕೈಯಿಂದ ಗುದ್ದಿದ್ದಾನೆ ಜೊತೆಗೆ ಕಲ್ಲು ಎಸೆದು ಮೊಬೈಲ್ ಫೋನ್ ಕಸಿದುಕೊಂಡು ಪರಾರಿಯಾಗಿದ್ದಾನೆ.

ಹೈದರಾಬಾದ್: ಅಪರಿಚಿತ ವ್ಯಕ್ತಿ ನಡೆಸಿದ ದಾಳಿಯಿಂದಾಗಿ ತೆಲುಗು ನಟಿ ಶಾಲೂ ಚೌರಾಸಿಯಾ ಗಾಯಗೊಂಡಿದ್ದಾರೆ.

ನವೆಂಬರ್ 14 ರಂದು ಭಾನುವಾರ ರಾತ್ರಿ ಬಂಜಾರಾ ಹಿಲ್ಸ್ ನಲ್ಲಿರುವ ಕೆಬಿಆರ್ ಪಾರ್ಕ್ ನಲ್ಲಿ ಘಟನೆ ನಡೆದಿದೆ. ರಾತ್ರಿ ಸುಮಾರು 8.30ರ ವೇಳೆ ಓಡಾಡುತ್ತಿದ್ದ ವೇಳೆ ಆಕೆಯ ಮೇಲೆ ಹಲ್ಲೆ ಮಾಡಿ ಮೊಬೈಲ್ ಕಸಿದುಕೊಂಡಿದ್ದಾರೆ.

ವ್ಯಕ್ತಿಯೊಬ್ಬ ಬಂದು ತನ್ನ ಬಳಿಯಿದ್ದ ಬೆಲೆಬಾಳುವ ವಸ್ತು ನೀಡುವಂತೆ ಕೇಳಿದ್ದಾನೆ, ಆದರೆ ನೀಡಲು ಆಕೆ ನಿರಾಕರಿಸಿದಾಗ ಆಕೆಯ ಮುಖಕ್ಕೆ ಕೈಯಿಂದ ಗುದ್ದಿದ್ದಾನೆ ಜೊತೆಗೆ ಕಲ್ಲು ಎಸೆದು ಮೊಬೈಲ್ ಫೋನ್ ಕಸಿದುಕೊಂಡು ಪರಾರಿಯಾಗಿದ್ದಾನೆ ಎಂದು ನಟಿ ಶಾಲೂ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮುಖ ಮತ್ತು ಕತ್ತಿಗೆ ಗಾಯಗಳಾಗಿದ್ದು ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಟಿಯ ದೂರಿನ ಮೇರೆಗೆ ಬಂಜಾರ ಹಿಲ್ಸ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಆರೋಪಿಗಳನ್ನು ಪತ್ತೆ ಹಚ್ಚಲು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

ಕೆಬಿಆರ್ ಪಾರ್ಕ್‌ಗೆ ಸೆಲೆಬ್ರಿಟಿಗಳು, ಉದ್ಯಮಿಗಳು ಮತ್ತು ರಾಜಕೀಯ ಮುಖಂಡರು ಬೆಳಿಗ್ಗೆ ಅಥವಾ ಸಂಜೆ ವಾಯುವಿಹಾರಕ್ಕಾಗಿ ಬರುತ್ತಾರೆ. ಉದ್ಯಾನದ ಸುತ್ತಮುತ್ತ ಈ ಹಿಂದೆ ಚೈನ್ ಸ್ನ್ಯಾಚಿಂಗ್ ಪ್ರಕರಣಗಳು ವರದಿಯಾಗಿದ್ದವು.  2014 ರಲ್ಲಿ, ಅರಬಿಂದೋ ಫಾರ್ಮಾ ಎಕ್ಸಿಕ್ಯೂಟಿವ್ ಕೆ. ನಿತ್ಯಾನಂದ ರೆಡ್ಡಿ ಅವರು ಬೆಳಗಿನ ವಾಕ್ ಮುಗಿಸಿ ಕಾರಿನಲ್ಲಿ ಕುಳಿತಿದ್ದಾಗ ಎಕೆ-47 ನಿಂದ ವ್ಯಕ್ತಿಯೊಬ್ಬ ಅವರ ಮೇಲೆ ಗುಂಡು ಹಾರಿಸಿದ್ದ. ಅದೃಷ್ಟವಶಾತ್ ರೆಡ್ಡಿ ಪ್ರಾಣಾಪಾಯದಿಂದ ಪಾರಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT