ಸಿನಿಮಾ ಪೋಸ್ಟರ್ 
ಸಿನಿಮಾ ಸುದ್ದಿ

ಗರುಡ ಗಮನ ಋಷಭ ವಾಹನಕ್ಕೆ ಲಾಕ್ ಡೌನ್ ವರವಾಗಿ ಪರಿಣಮಿಸಿತು: ರಾಜ್ ಬಿ. ಶೆಟ್ಟಿ

ಸಿನಿಮಾ ನವೆಂಬರ್ 19ರಂದು ತೆರೆ ಕಾಣುತ್ತಿರುವ ಗರುಡ ಗಮನ ಋಷಭ ವಾಹನ ಸಿನಿಮಾ ಬಗ್ಗೆ ಕಾತರ ಹೆಚ್ಚಾಗುತ್ತಿದೆ. ಈ ಗ್ಯಾಂಗ್ ಸ್ಟರ್ ಡ್ರಾಮಾ ಸಿನಿಮಾ ರಾಜ್ ಬಿ.ಶೆಟ್ಟಿ ಅವರ ಎರಡನೇ ನಿರ್ದೇಶನದ ಸಿನಿಮಾ.

ಬೆಂಗಳೂರು: ರಾಜ್ ಬಿ. ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಗರುಡ ಗಮನ ಋಷಭ ವಾಹನ ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಸಿನಿಮಾ ನವೆಂಬರ್ 19ರಂದು ತೆರೆ ಕಾಣುತ್ತಿರುವ ಈ ಹೊತ್ತಿನಲ್ಲಿ ಕಾತರ ಹೆಚ್ಚಾಗುತ್ತಿದೆ. ಈ ಗ್ಯಾಂಗ್ ಸ್ಟರ್ ಡ್ರಾಮಾ ಸಿನಿಮಾ ರಾಜ್ ಬಿ.ಶೆಟ್ಟಿ ಅವರ ಎರಡನೇ ನಿರ್ದೇಶನದ ಸಿನಿಮಾ ಆಗಿದೆ. ಮೊದಲು ಅವರು ಒಂದು ಮೊಟ್ಟೆಯ ಕತೆ ಸಿನಿಮಾದಲ್ಲಿ ನಿರ್ದೇಶಕನ ಕ್ಯಾಪ್ ಧರಿಸಿದ್ದರು. 

ರಾಜ್. ಬಿ. ಶೆಟ್ಟಿ ಜೊತೆ ರಿಷಬ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದು ಒಟ್ಟು 40ಕ್ಕೂ ಹೆಚ್ಚು ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ. ನಟ ರಕ್ಷಿತ್ ಶೆಟ್ಟಿ ಅವರ ಪರಂವಾಹ್ ಸ್ಟುಡಿಯೋಸ್ ಅಡಿ ಬಿಡುಗಡೆಯಾಗಲಿರುವ ಈ ಸಿನಿಮಾವನ್ನು ಕೆ. ಆರ್. ಜಿ ನಿರ್ಮಿಸಿದೆ. 

ಕೊರೊನಾ ಕಾಲದ ನಂತರ ವಿಶ್ವದ ಹಲವೆಡೆ ತೆರೆ ಕಾಣುತ್ತಿರುವ ಮೊದಲ ಕನ್ನಡ ಸಿನಿಮಾ ಗರುಡ ಗಮನ ಋಷಭ ವಾಹನ. ಭಾರತ ಹೊರತುಪಡಿಸಿ ಅಮೆರಿಕ, ಯುಎಇ, ಸಿಂಗಪೂರ್ ಮತ್ತು ಕೆನಡಾ ದೇಶಗಳಲ್ಲಿಯೂ ಗರುಡ ಗಮನ ಋಷಭ ವಾಹನ ಸಿನಿಮಾ ಬಿಡುಗಡೆಯಾಗುತ್ತಿದೆ.  

ಕೊರೊನಾ ಕಾಲದಲ್ಲಿ ತಯಾರಾದ ಈ ಸಿನಿಮಾ ನಿರ್ಮಾಣ ಮಾಡುವಾಗ ಅವಸರ ಮಾಡಬೇಕಾಗಿ ಬರಲಿಲ್ಲ ಎನ್ನುವುದೇ ವರದಾನವಾಯಿತು. ಲಾಕ್ ಡೌನ್ ಹಿನ್ನೆಲೆಯಲ್ಲಿ ಎಲ್ಲಾ ಚಟುವಟಿಕೆಗಳು ಸ್ಥಗಿತವಾದ್ದರಿಂದ ಸಿನಿಮಾದ ಹಲವು ವಿಭಾಗಗಳನ್ನು ಮರುಪರಿಶೀಲಿಸಿ ಇಂಪ್ರೊವೈಸ್ ಮಾಡಿಕೊಳ್ಲಲು ಸಾಕಷ್ಟು ಕಾಲವಕಾಶ ದೊರೆತಿದ್ದಾಗಿ ರಾಜ್ ಬಿ. ಶೆಟ್ಟಿ ಹೇಳಿದ್ದಾರೆ. ಆ ನಿಟ್ಟಿನಲ್ಲಿ ಲಾಕ್ ಡೌನ್ ಗರುಡ ಗಮನ ಋಷಭ ವಾಹನ ಸಿನಿಮಾಗೆ ವರವಾಯಿತು ಎನ್ನುವ ಮಾತನ್ನು ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?