ಅರುಣ್ ಸಾಗರ್ ಪುತ್ರಿ ಅದಿತಿ ಸಾಗರ್ 
ಸಿನಿಮಾ ಸುದ್ದಿ

ಶಿವರಾಜ್ ಕುಮಾರ್ 125 ನೇ ಸಿನಿಮಾ "ವೇದ"ದಲ್ಲಿ ಅರುಣ್ ಸಾಗರ್ ಪುತ್ರಿ ಅದಿತಿ ಸಾಗರ್ ಪ್ರಮುಖ ಪಾತ್ರ

ಶಿವರಾಜ್ ಕುಮಾರ್ ಅವರ 125 ನೇ ಸಿನಿಮಾ "ವೇದ"ಗೆ ಸರಳ ಕಾರ್ಯಕ್ರಮವೊಂದರಲ್ಲಿ ಚಾಲನೆ ನೀಡಲಾಗಿದೆ. 

ಶಿವರಾಜ್ ಕುಮಾರ್ ಅವರ 125 ನೇ ಸಿನಿಮಾ "ವೇದ"ಗೆ ಸರಳ ಕಾರ್ಯಕ್ರಮವೊಂದರಲ್ಲಿ ಚಾಲನೆ ನೀಡಲಾಗಿದೆ. ಎ ಹರ್ಷ ನಿರ್ದೇಶನದ ಸಿನಿಮಾ ಇದಾಗಿದ್ದು, ಡಿಸೆಂಬರ್ ನಿಂದ ಚಿತ್ರೀಕರಣ ಪ್ರಾರಂಭ ಮಾಡುವ ಯೋಜನೆ ಇದೆ. ಬೆಂಗಳೂರಿನಲ್ಲಿ ನಿರ್ಮಾಣವಾಗಲಿರುವ ಬೃಹತ್ ಸೆಟ್ ನಲ್ಲಿ ಮೊದಲ ಶೆಡ್ಯೂಲ್ ಚಿತ್ರೀಕರಣ ನಡೆಯಲಿದೆ. 

ನಿರ್ದೇಶಕ ತಾರಾಗಣದ ಆಯ್ಕೆಯನ್ನು ಅಂತಿಮಗೊಳಿಸುತ್ತಿದ್ದು, ಸಿನಿಮಾ ಎಕ್ಸ್ ಪ್ರೆಸ್ ಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಶಿವರಾಜ್ ಕುಮಾರ್ ನಟನೆಯ ಸಿನಿಮಾದ ಮೂಲಕ ಗಾಯಕಿ ಅದಿತಿ ಸಾಗರ್ ನಟನೆಗೆ ಪ್ರವೇಶಿಸುತ್ತಿದ್ದಾರೆ. ನಟ-ಕಲಾ ನಿರ್ದೇಶಕ ಅರುಣ್ ಸಾಗರ್ ಅವರ ಪುತ್ರಿಯಾಗಿರುವ ಅದಿತಿ ಸಾಗರ್, ರ್ಯಾಂಬೋ 2 ನ ದಮ್ ಮಾರೋ ದಮ್ ಮೂಲಕ ಗಾಯನ ಕ್ಷೇತ್ರಕ್ಕೆ ಪ್ರವೇಶಿಸಿದ್ದರು. ಅದಿತಿ ಸಾಗರ್ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಶೀಘ್ರವೇ ವಿವರಗಳು ಬಹಿರಂಗಗೊಳ್ಳಲಿವೆ. 

ಶಿವರಾಜ್ ಕುಮಾರ್ ಬೈರಾಗಿ ಹಾಗೂ ನೀ ಸಿಗುವವರೆಗೂ ಸಿನಿಮಾಗಳಲ್ಲಿ ನಟಿಸಲಿದ್ದಾರೆ. ಗೀತಾ ಪಿಕ್ಚರ್ಸ್ ನ ಹೋಮ್ ಪ್ರೊಡಕ್ಷನ್ ನ ಮೊದಲ ನಿರ್ಮಾಣದ ಚಿತ್ರವಾಗಿರಲಿದೆ ವೇದ ಸಿನಿಮಾ.

ವೇದ ಸಿನಿಮಾಗೆ ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಜೆ ಸ್ವಾಮಿ ಸಿನಿಮೆಟೋಗ್ರಾಫಿ, ದೀಪು ಎಸ್ ಕುಮಾರ್ ಸಂಕಲನ ಇರಲಿದೆ. ಭಜರಂಗಿ-2 ಸಿನಿಮಾ ನಿರ್ದೇಶನ ಮಾಡಿದ್ದ ಹರ್ಷ ವೇದಾ ಸಿನಿಮಾಗೂ ನಿರ್ದೇಶಕರಾಗಿದ್ದಾರೆ. ವಜ್ರಕಾಯ, ಭಜರಂಗಿ, ಭಜರಂಗಿ-2 ಸಿನಿಮಾಗಳ ನಂತರ ಹರ್ಷ ನಿರ್ದೇಶನದ್ಲಲಿ ಶಿವರಾಜ್ ಕುಮಾರ್ ನಟಿಸುತ್ತಿರುವ 4 ನೇ ಸಿನಿಮಾ ಇದಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT