ಸಖತ್ ಪ್ರೀ ರಿಲೀಸ್ ಇವೆಂಟ್ 
ಸಿನಿಮಾ ಸುದ್ದಿ

'ಸಖತ್' ಪ್ರೀ ರಿಲೀಸ್ ಇವೆಂಟ್, ಗಣೇಶ್-ಪ್ರೇಮ್ ಹಾಡಿನ ಜುಗಲ್ ಬಂಧಿ!

ಗೋಲ್ಡನ್ ಸ್ಟಾರ್ ಗಣೇಶ್ ನಟಿಸಿರುವ ಬಹುನಿರೀಕ್ಷಿತ  “ಸಖತ್” ತೆರೆಯಲ್ಲಿ ವಿಜೃಂಭಿಸಲು ಇನ್ನು ಮೂರೇ ದಿನ ಬಾಕಿಯಿದೆ. ಈಗಾಗಲೇ ಫಸ್ಟ್ ಲುಕ್, ಟೀಸರ್ ಹಾಗೂ ಹಾಡು ಮೂಲಕ ಕುತೂಹಲದ ಚಿಟ್ಟೆಯಾಗಿರುವ ಸಖತ್ ಸಿನಿಮಾ ಬಳಗ ನಿನ್ನೆ ಅದ್ಧೂರಿಯಾಗಿ ಪ್ರೀ-ರಿಲೀಸ್ ಇವೆಂಟ್ ಹಮ್ಮಿಕೊಂಡಿತ್ತು. 

ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ನಟಿಸಿರುವ ಬಹುನಿರೀಕ್ಷಿತ  “ಸಖತ್” ತೆರೆಯಲ್ಲಿ ವಿಜೃಂಭಿಸಲು ಇನ್ನು ಮೂರೇ ದಿನ ಬಾಕಿಯಿದೆ. ಈಗಾಗಲೇ ಫಸ್ಟ್ ಲುಕ್, ಟೀಸರ್ ಹಾಗೂ ಹಾಡು ಮೂಲಕ ಕುತೂಹಲದ ಚಿಟ್ಟೆಯಾಗಿರುವ ಸಖತ್ ಸಿನಿಮಾ ಬಳಗ ನಿನ್ನೆ ಅದ್ಧೂರಿಯಾಗಿ ಪ್ರೀ-ರಿಲೀಸ್ ಇವೆಂಟ್ ಹಮ್ಮಿಕೊಂಡಿತ್ತು. 

 ಚಿತ್ರದ ನಾಯಕ ನಟ ಗೋಲ್ಡನ್ ಸ್ಟಾರ್ ಗಣೇಶ್, ನಿರ್ದೇಶಕ ಸಿಂಪಲ್ ಸುನಿ, ನಾಯಕಿಯರಾದ ನಿಶ್ವಿಕಾ ನಾಯ್ಡು, ಸುರಭಿ, ನಿರ್ಮಾಪಕರಾದ ಸುಪ್ರಿತ್-ನಿಶಾ, ಹಿರಿಯ ಕಲಾವಿದ ರಂಗಾಯಣ ರಘು ಸೇರಿದಂತೆ ಸ್ಯಾಂಡಲ್ ವುಡ್ ನ ಹಲವು ತಾರಾಬಳಗ ಸಖತ್ ಪ್ರೀ-ರಿಲೀಸ್ ಇವೆಂಟ್ ಗೆ ಸಾಕ್ಷಿಯಾದರು. 

ನಿರ್ದೇಶಕ ಕಮ್ ನಟ ಜೋಗಿ ಪ್ರೇಮ್, ಬೈ ಟು ಲವ್ ಬ್ಯೂಟಿ ಶ್ರೀಲೀಲಾ ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಖತ್ ಸಿನಿಮಾಗೆ ಶುಭ ಹಾರೈಸಿದರು. ಒಟ್ಟಿಗೆ ವೇದಿಕೆ ಏರಿದ ಗಣೇಶ್ ಮತ್ತು ಪ್ರೇಮ್,  ಎಕ್ಸ್ ಕ್ಯೂಸ್ ಮೀ ಸಿನಿಮಾದ ಬ್ರಹ್ಮ ವಿಷ್ಣು ಹಾಡು ಹಾಡಿದರು.

 ಇದಕ್ಕೂ ಮೊದಲು ಮಾತಾಡಿದ ಗೋಲ್ಡನ್ ಸ್ಟಾರ್ ಗಣೇಶ್, ಅಪ್ಪುಗೆ ನಮನ ಸಲ್ಲಿಸಿ,  ಪವರ್ ಸ್ಟಾರ್ ಕನ್ನಡ ಚಿತ್ರರಂಗ ಇರುವವರೆಗೂ ನಂಬರ್-1 ಸ್ಟಾರ್ ಅಂತ ಮನದ ಮಾತು ಬಿಚ್ಚಿಟ್ಟರು. ಬಳಿಕ ತಮ್ಮ ಚಂದದ ಮಾತಿನ ಮೂಲಕ ಎಲ್ಲರನ್ನೂ ನಕ್ಕು ನಲಿಸಿ ಸಖತ್ ಸಿನಿಮಾ ಎಲ್ಲರೂ ನೋಡಿ ಅಂತಾ ಮನವಿ ಮಾಡಿಕೊಂಡರು.  

ಚಿತ್ರದ ನಾಯಕಿ ನಿಶ್ವಿಕಾ ನಾಯ್ಡು, ನಿರ್ದೇಶಕ ಸಿಂಪಲ್ ಸುನಿ, ಸಂಗೀತ ನಿರ್ದೇಶಕ ಜೂಡಾ ಸ್ಯಾಂಡಿ, ಹಾಸ್ಯನಟ ಧರ್ಮಣ್ಣ ಕಡೂರು, ರಂಗಾಯಣ ರಘು ಸಖತ್ ಸಿನಿಮಾದಲ್ಲಿನ ಜರ್ನಿ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು. 

ಟಿವಿ ರಿಯಾಲಿಟಿ ಶೋ ಸುತ್ತ ಎಣೆದಿರೋ ಸಖತ್ ಸಿನಿಮಾಕ್ಕೆ ಸುಪ್ರಿತ್ ಹಾಗೂ ನಿಶಾ ಬಂಡವಾಳ ಹೂಡಿದ್ದು, ಈಗಾಗ್ಲೇ ಸೆನ್ಸಾರ್ ಮುಗಿಸಿರೋ ಸಖತ್ ಸಿನಿಮಾ ಇದೇ 26ಕ್ಕೆ ಥಿಯೇಟರ್ ಗೆ ಗ್ರ್ಯಾಂಡ್ ಎಂಟ್ರಿ ಕೊಡ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT