ಸಕತ್ ಚಿತ್ರೀಕರಣ ವೇಳೆ ನಿರ್ದೇಶಕ ಸುನಿ ಮತ್ತು ನಟ ಗಣೇಶ್ 
ಸಿನಿಮಾ ಸುದ್ದಿ

ಗೋಲ್ಡನ್ ಸ್ಟಾರ್ ಗಣೇಶ್ ಸಿನಿಮಾ ಸಕತ್ ಗೂ ಅಂಧಾಧುನ್ ಗೂ ಸಂಬಂಧವಿಲ್ಲ: ನಿರ್ದೇಶಕ ಸುನಿ

ನ್ಯಾಯಾಲಯದ ಯಾವುದೇ ವಿಚಾರಣೆಯಲ್ಲಿ ಐವಿಟ್ನೆಸ್ ಪ್ರಧಾನ ಪಾತ್ರ ವಹಿಸುತ್ತಾರೆ. ಆದರೆ ಒಬ್ಬ ಕಣ್ಣು ಕಾಣದ ಕುರುಡ ಐವಿಟ್ನೆಸ್ ಆದರೆ ಏನಾಗುತ್ತದೆ ಎನ್ನುವುದೇ 'ಸಕತ್' ಸ್ಕ್ರಿಪ್ಟ್ ಗೆ ಮೂಲ ಪ್ರೇರಣೆ. 'ಸಕತ್' ನವೆಂಬರ್ 26ರಂದು ತೆರೆಕಾಣುತ್ತಿದೆ. 

ಬೆಂಗಳೂರು: ನವಿರಾದ ಪ್ರೀತಿ, ತಮಾಷೆಭರಿತ ಸಿನಿಮಾಗಳಿಗೆ ಹೆಸರಾದ ಕನ್ನಡ ಚಿತ್ರ ನಿರ್ದೇಶಕ ಸುನಿ ಫ್ರೆಶ್ ಮತ್ತು ಪ್ರಯೋಗಾತ್ಮಕ ಸಿನಿಮಾಗಳಿಗೆ ತೆರೆದುಕೊಂಡವರು. ಅವರು ನಿರ್ದೇಶಿಸಿರುವ ಹೊಸ ಸಿನಿಮಾ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 'ಸಕತ್' ನವೆಂಬರ್ 26ರಂದು ತೆರೆಕಾಣುತ್ತಿದೆ. 

ಕಾಮಿಡಿ- ಕೋರ್ಟ್ ರೂಮ್ ಡ್ರಾಮ ಸಿನಿಮಾ ಆಗಿರುವ ಸಕತ್ ಸಿನಿಮಾ ಯಾವುದೇ ರೀತಿಯಲ್ಲೂ ಬಾಲಿವುಡ್ ನ ಅಂಧಾಧುನ್ ಸಿನಿಮಾಗೆ ಹೋಲುವುದಿಲ್ಲ ಎಂದು ಸುನಿ ಸ್ಪಷ್ಟ ಪಡಿಸಿದ್ದಾರೆ. 

ನ್ಯಾಯಾಲಯದ ಯಾವುದೇ ವಿಚಾರಣೆಯಲ್ಲಿ ಐವಿಟ್ನೆಸ್ ಪ್ರಧಾನ ಪಾತ್ರ ವಹಿಸುತ್ತಾರೆ. ಆದರೆ ಒಬ್ಬ ಕಣ್ಣು ಕಾಣದ ಕುರುಡ ಐವಿಟ್ನೆಸ್ ಆದರೆ ಏನಾಗುತ್ತದೆ ಎನ್ನುವುದೇ ನನ್ನ ಸ್ಕ್ರಿಪ್ಟ್ ಗೆ ಮೂಲ ಪ್ರೇರಣೆ.

ಹಾಲಿವುಡ್ ನಲ್ಲಿ ತೆರೆಕಂಡು ಸೂಪರ್ ಹಿಟ್ ಆಗಿದ್ದ ಅಂಧಾಧುನ್ ಸಿನಿಮಾವನ್ನು ಶ್ರೀರಾಮ್ ರಾಘವನ್ ನಿರ್ದೇಶಿಸಿ ಆಯುಷ್ಮಾನ್ ಖುರಾನ, ತಬು ಮತ್ತು ರಾಧಿಕಾ ಆಪ್ಟೆ ನಟಿಸಿದ್ದರು. ಅದರಲ್ಲಿ ಆಯುಷ್ಮಾನ್ ಕುರುಡನ ಪಾತ್ರದಲ್ಲಿ ಮಿಂಚಿದ್ದರು.

ಸಕತ್ ಸಿನಿಮಾದಲ್ಲಿ ಗಣೇಶ್ ಅವರ ಲುಕ್ ಅಂಧಾಧುನ್ ಸಿನಿಮಾದ ನಾಯಕನ ಪಾತ್ರವನ್ನು ಹೋಲುತ್ತಿದ್ದುದರಿಂದ ಇದು ಅಂಧಾಧುನ್ ಸಿನಿಮಾದಿಮ್ದ ಪ್ರೇರಣೆ ಪಡೆದುಕೊಂಡಿರಬಹುದು ಎನ್ನುವ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. 

ಆದರೆ ಸಕತ್ ಸಿನಿಮಾ ನೂರಕ್ಕೆ ನೂರು ಪ್ರತಿಶತ ಅಂಧಾಧುನ್ ಗಿಂತ ಭಿನ್ನವಾಗಿದೆ ಎಂದು ಸುನಿ ಗ್ರಾರಂಟಿ ಕೊಡುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT