ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ 
ಸಿನಿಮಾ ಸುದ್ದಿ

ಸಿನಿಮಾ ನೋಡಿ ರಾಜ್ ಶೆಟ್ಟಿಗೆ ಕರೆ ಮಾಡಿದ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್: ಮುಂಬೈಗೆ ಆಹ್ವಾನ

ಅನುರಾಗ್ ಕಶ್ಯಪ್ ದನಿ ಕೇಳುತ್ತಲೇ ರೋಮಾಂಚನಗೊಂಡೆ ಎಂದ 'ಗರುಡ ಗಮನ ವೃಷಭ ವಾಹನ' ನಿರ್ದೇಶಕ ನಟ ರಾಜ್ ಬಿ. ಶೆಟ್ಟಿ ಅನುರಾಗ್ ಕಶ್ಯಪ್ ಜೊತೆಗಿನ ಫೋನ್ ಸಂಭಾಷಣೆ ಕುರಿತು ವಿವರ ಬಿಚ್ಚಿಟ್ಟಿದ್ದಾರೆ.

ರಾಜ್ ಬಿ. ಶೆಟ್ಟಿ ಬರೆದು, ನಿರ್ದೇಶಿಸಿ, ನಟಿಸಿರುವ 'ಗರುಡ ಗಮನ ವೃಷಭ ವಾಹನ' ಸಿನಿಮಾ ನವೆಂಬರ್ 19ರಂದು ತೆರೆಕಂಡು ಸಿನಿಮಾರಸಿಕರ ಮೆಚ್ಚುಗೆಗೆ ಪಾತ್ರವಾಗುತ್ತಿದೆ.

ಈ ಹೊತ್ತಿನಲ್ಲಿ ಬಾಲಿವುಡ್ ನ ಹೆಸರಾಂತ ಪ್ರಯೋಗಾತ್ಮಕ ನಿರ್ದೇಶಕ ಅನುರಾಗ್ ಕಶ್ಯಪ್ ಗರುಡ ಗಮನ ವೃಷಭ ವಾಹನ ಸಿನಿಮಾ ನೋಡಿ ಒಳ್ಳೆಯ ಮಾತುಗಳನ್ನಾಡಿರುವುದು ಚಿತ್ರತಂಡದ ಹುಮ್ಮಸ್ಸನ್ನು ಹೆಚ್ಚಿಸಿದೆ. 

ಗರುಡ ಗಮನ ವೃಷಭ ವಾಹನ ಸಿನಿಮಾ ಸೃಷ್ಟಿಸಿದ buzzನಿಂದ ಸಿನಿಮಾ ನೋಡಿದ ಅನುರಾಗ್ ಕಶ್ಯಪ್ ಸಿನಿಮಾ ಮುಗಿದ ನಂತರ ರಾಜ್ ಬಿ. ಶೆಟ್ಟಿ ಜೊತೆ ಕರೆ ಮಾಡಿ ಮಾತನಾಡಿದ್ದಾರೆ. 

ಅನುರಾಗ್ ಕಶ್ಯಪ್ ದನಿ ಕೇಳುತ್ತಲೇ ರೋಮಾಂಚನಗೊಂಡೆ ಎಂದ ರಾಜ್ ಬಿ. ಶೆಟ್ಟಿ ಅನುರಾಗ್ ಕಶ್ಯಪ್ ಜೊತೆಗಿನ ಫೋನ್ ಸಂಭಾಷಣೆ ಕುರಿತು ವಿವರ ಬಿಚ್ಚಿಟ್ಟಿದ್ದಾರೆ. ಗರುಡ ಗಮನ ವೃಷಭ ವಾಹನ ಸಿನಿಮಾವನ್ನು ಕೇವಲ 32 ದಿನಗಳಲ್ಲಿ ಶೂಟ್ ಮಾಡಿದ್ದೆಂದು ತಿಳಿದು ಅನುರಾಗ್ ತೀವ್ರ ಅಚ್ಚರಿಗೊಂಡರು. 

ಗರುಡ ಗಮನ ವೃಷಭ ವಾಹನ ಸಿನಿಮಾ ಸುಬ್ರಮಣ್ಯಪುರಂ, ಅಂಗಮಾಲಿ ಡೈರೀಸ್ ಮತ್ತು ತಮ್ಮದೇ ಗ್ಯಾಂಗ್ಸ್ ಆಫ್ ವಸೇಪುರ್ ಸಿನಿಮಾಗಳಿಗಿಂತ ಭಿನ್ನವಾದುದು ಎಂದು ಅನುರಾಗ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಎಲ್ಲಕ್ಕಿಂತ ಹೆಮ್ಮೆಯ ಸಂಗತಿ ಎಂದರೆ ರಾಜ್ ಶೆಟ್ಟಿ ಅವರ ಸಿನಿಮಾ ಮೇಕಿಂಗ್ ಶೈಲಿಯ ಕುರಿತು ಮಾತುಕತೆ ನಡೆಸಲು ಅನುರಾಗ್ ಅವರು ರಾಜ್ ರನ್ನು ಮುಂಬೈಗೆ ಆಹ್ವಾನಿಸಿರುವುದು.

ಸಿನಿಮಾದಲ್ಲಿ ರಾಜ್ ಶೆಟ್ಟಿ, ರಿಷಬ್ ಶೆಟ್ಟಿ, ಗೋಪಾಲಕೃಷ್ಣ ದೇಶಪಾಂಡೆ, ವಿನೀತ್ ಕುಮಾರ್, ದೀಪಕ್ ರೈ ಪಾಣಾಜೆ ಅಭಿನಯಕ್ಕೆ ಪ್ರೇಕ್ಷಕರು ವ್ಯಾಪಕ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಸಂಗೀತ ನಿರ್ದೇಶಕ ಮಿದುನ್ ಮುಕುಂದನ್, ಸಿನಿಮೆಟೊಗ್ರಾಫರ್- ಎಡಿಟರ್ ಪ್ರವೀಣ್ ಶ್ರಿಯಾನ್ವರ ನೈಪುಣ್ಯಕ್ಕೂ ಮೆಚ್ಚುಗೆ ವ್ಯಕ್ತವಾಗಿದೆ. 

ಗರುಡ ಗಮನ ವೃಷಭ ವಾಹನ ಸಿನಿಮಾ ರಕ್ಷಿತ್ ಶೆಟ್ಟಿಯವರ ಪರಂವಾಹ್ ಸ್ಟುಡಿಯೋಸ್ ಬ್ಯಾನರ್ ಅಡಿ ಮೂಡಿ ಬಂದಿದ್ದು ಕೆ ಆರ್ ಜಿ ಸ್ಟುಡಿಯೋಸ್ ನಿರ್ಮಾಣ ಮಾಡಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT