ಡಾ ಹಂಸಲೇಖ 
ಸಿನಿಮಾ ಸುದ್ದಿ

'ಸಂಗೀತ ಕಲಹವನ್ನು ತಪ್ಪಿಸುತ್ತದೆ, ಶೀಘ್ರವೇ ಸರಿಗಮಪ ತಂಡವನ್ನು ಸೇರಿಕೊಳ್ಳುತ್ತೇನೆ': ಡಾ. ಹಂಸಲೇಖ

ಪೇಜಾವರ ಮಠದ ಹಿರಿಯ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗಳು ದಲಿತ ಕೇರಿಗಳಿಗೆ ಹೋಗುತ್ತಿದ್ದ ಬಗ್ಗೆ ಮತ್ತು ಅವರ ಆಹಾರ ಪದ್ಧತಿ ಬಗ್ಗೆ ಮೈಸೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಹಿರಿಯ ಸಂಗೀತ ನಿರ್ದೇಶಕ ಡಾ ಹಂಸಲೇಖ ಇಂದು ಅಭಿಮಾನಿಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು: ಪೇಜಾವರ ಮಠದ ಹಿರಿಯ ಶ್ರೀ ವಿಶ್ವೇಶ ತೀರ್ಥ(Pejawar shree) ಸ್ವಾಮೀಜಿಗಳು ದಲಿತ ಕೇರಿಗಳಿಗೆ ಹೋಗುತ್ತಿದ್ದ ಬಗ್ಗೆ ಮತ್ತು ಅವರ ಆಹಾರ ಪದ್ಧತಿ ಬಗ್ಗೆ ಮೈಸೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಹಿರಿಯ ಸಂಗೀತ ನಿರ್ದೇಶಕ ಡಾ ಹಂಸಲೇಖ(Hamsalekha) ಇಂದು ಅಭಿಮಾನಿಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ಹಂಸಲೇಖ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ ಇತ್ತೀಚೆಗೆ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಸಹ ಹಾಜರಾಗಿದ್ದರು. ಈ ಬೆಳವಣಿಗೆಗಳಿಂದ ನೊಂದು ಅವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿತ್ತು.

ಸೋಷಿಯಲ್ ಮೀಡಿಯಾದಲ್ಲಿ ಹಂಸಲೇಖ ಪರ ಮತ್ತು ವಿರೋಧ ಅಭಿಯಾನಗಳು ಆರಂಭವಾಗಿ ಸರಿಗಮಪ ರಿಯಾಲಿಟಿ ಶೋದಿಂದ ಅವರು ಹೊರಬಂದಿದ್ದಾರೆ, ಅವರನ್ನು ಶೋನ ತೀರ್ಪುಗಾರರ ಸ್ಥಾನದಿಂದ ತೆಗೆದುಹಾಕಬೇಕೆಂಬ ಒತ್ತಾಯಗಳೂ ಸಹ ಕೇಳಿಬಂದಿತ್ತು.

ಇದಕ್ಕೆಲ್ಲಾ ಇಂದು ತೆರೆ ಎಳೆದಿರುವ ಹಂಸಲೇಖ, ನನ್ನ ಆರೋಗ್ಯ ಸ್ಥಿರವಾಗಿದ್ದು, ಸರಿಗಮಪ ಸಂಗೀತ ರಿಯಾಲಿಟಿ ಶೋ ನನ್ನ ಪ್ರೀತಿಯ ಭೂಮಿಕೆ, ಮನಸ್ಸು-ಮನಸ್ಸುಗಳನ್ನು ನೇಯುವ ವೇದಿಕೆ, ತೊರೆಯುವುದಿಲ್ಲ, ಸದ್ಯದಲ್ಲಿಯೇ ತಂಡಕ್ಕೆ ಬೇಗ ಸೇರಿಕೊಳ್ಳುತ್ತೇನೆ ಎಂದು ಫೇಸ್ ಬುಕ್ ಮೂಲಕ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

9 ವರ್ಷಗಳ ಬಳಿಕ ಇಸ್ರೇಲ್ ಗೆ ಪ್ರಧಾನಿ ಮೋದಿ ಭೇಟಿ; ಅದ್ದೂರಿ ರೆಡ್ ಕಾರ್ಪೆಟ್ ಸ್ವಾಗತ

India to Israel: ಪ್ರಧಾನಿ ಮೋದಿ ಪಯಣಿಸಿದ್ದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

ವಿರೋಶ್ ಮದುವೆ: ಹಳದಿ ಶಾಸ್ತ್ರ ಆರಂಭ; ಫೋಟೋ ಹಂಚಿಕೊಂಡ ವಿಜಯ್ ದೇವರಕೊಂಡ, ಆಶಿಕಾ

ಪಾಕಿಸ್ತಾನದ ಮುಸ್ಲಿಮ್ ಉಮ್ಮಾ ಗೆ ಕಾಡ್ತಿದೆ ಇಸ್ರೇಲ್- ಭಾರತದ Hexagon Alliance ಗುಮ್ಮಾ!

ರಾಜ್ಯ ಸರ್ಕಾರದಿಂದ ಕಬ್ಬು ಬೆಳೆಗಾರರಿಗೆ 300 ಕೋಟಿ ರೂ ಬಿಡುಗಡೆ; ಪ್ರತಿ ಟನ್‌ಗೆ 50 ರೂ ನೇರ ವರ್ಗಾವಣೆ

SCROLL FOR NEXT