ಡಾ ಹಂಸಲೇಖ 
ಸಿನಿಮಾ ಸುದ್ದಿ

'ಸಂಗೀತ ಕಲಹವನ್ನು ತಪ್ಪಿಸುತ್ತದೆ, ಶೀಘ್ರವೇ ಸರಿಗಮಪ ತಂಡವನ್ನು ಸೇರಿಕೊಳ್ಳುತ್ತೇನೆ': ಡಾ. ಹಂಸಲೇಖ

ಪೇಜಾವರ ಮಠದ ಹಿರಿಯ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗಳು ದಲಿತ ಕೇರಿಗಳಿಗೆ ಹೋಗುತ್ತಿದ್ದ ಬಗ್ಗೆ ಮತ್ತು ಅವರ ಆಹಾರ ಪದ್ಧತಿ ಬಗ್ಗೆ ಮೈಸೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಹಿರಿಯ ಸಂಗೀತ ನಿರ್ದೇಶಕ ಡಾ ಹಂಸಲೇಖ ಇಂದು ಅಭಿಮಾನಿಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು: ಪೇಜಾವರ ಮಠದ ಹಿರಿಯ ಶ್ರೀ ವಿಶ್ವೇಶ ತೀರ್ಥ(Pejawar shree) ಸ್ವಾಮೀಜಿಗಳು ದಲಿತ ಕೇರಿಗಳಿಗೆ ಹೋಗುತ್ತಿದ್ದ ಬಗ್ಗೆ ಮತ್ತು ಅವರ ಆಹಾರ ಪದ್ಧತಿ ಬಗ್ಗೆ ಮೈಸೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಹಿರಿಯ ಸಂಗೀತ ನಿರ್ದೇಶಕ ಡಾ ಹಂಸಲೇಖ(Hamsalekha) ಇಂದು ಅಭಿಮಾನಿಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ಹಂಸಲೇಖ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ ಇತ್ತೀಚೆಗೆ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಸಹ ಹಾಜರಾಗಿದ್ದರು. ಈ ಬೆಳವಣಿಗೆಗಳಿಂದ ನೊಂದು ಅವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿತ್ತು.

ಸೋಷಿಯಲ್ ಮೀಡಿಯಾದಲ್ಲಿ ಹಂಸಲೇಖ ಪರ ಮತ್ತು ವಿರೋಧ ಅಭಿಯಾನಗಳು ಆರಂಭವಾಗಿ ಸರಿಗಮಪ ರಿಯಾಲಿಟಿ ಶೋದಿಂದ ಅವರು ಹೊರಬಂದಿದ್ದಾರೆ, ಅವರನ್ನು ಶೋನ ತೀರ್ಪುಗಾರರ ಸ್ಥಾನದಿಂದ ತೆಗೆದುಹಾಕಬೇಕೆಂಬ ಒತ್ತಾಯಗಳೂ ಸಹ ಕೇಳಿಬಂದಿತ್ತು.

ಇದಕ್ಕೆಲ್ಲಾ ಇಂದು ತೆರೆ ಎಳೆದಿರುವ ಹಂಸಲೇಖ, ನನ್ನ ಆರೋಗ್ಯ ಸ್ಥಿರವಾಗಿದ್ದು, ಸರಿಗಮಪ ಸಂಗೀತ ರಿಯಾಲಿಟಿ ಶೋ ನನ್ನ ಪ್ರೀತಿಯ ಭೂಮಿಕೆ, ಮನಸ್ಸು-ಮನಸ್ಸುಗಳನ್ನು ನೇಯುವ ವೇದಿಕೆ, ತೊರೆಯುವುದಿಲ್ಲ, ಸದ್ಯದಲ್ಲಿಯೇ ತಂಡಕ್ಕೆ ಬೇಗ ಸೇರಿಕೊಳ್ಳುತ್ತೇನೆ ಎಂದು ಫೇಸ್ ಬುಕ್ ಮೂಲಕ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT