ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

'ಜಮಾಲಿಗುಡ್ಡ' ಕ್ಕೆ ಬರ್ತಿದ್ದಾರೆ ಡಾಲಿ ಧನಂಜಯ್ ಮತ್ತು ಅದಿತಿ ಪ್ರಭುದೇವ!

'ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ' ಎಂಬ ಹೊಸ ಚಿತ್ರದಲ್ಲಿ ಡಾಲಿ ಧನಂಜಯ್ ಹಾಗೂ ಅದಿತಿ ಪ್ರಭುದೇವ ನಟಿಸುತ್ತಿದ್ದಾರೆ.

'ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ' ಎಂಬ ಹೊಸ ಚಿತ್ರದಲ್ಲಿ ಡಾಲಿ ಧನಂಜಯ್ ಹಾಗೂ ಅದಿತಿ ಪ್ರಭುದೇವ ನಟಿಸುತ್ತಿದ್ದಾರೆ.

ಶೇ. 30 ರ್ಷಟು ಈಗಾಗಲೇ ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಚಿತ್ರದ ಟೈಟಲ್ ಪೋಸ್ಟರ್  ರಿಲೀಸ್ ಆಗಿದೆ. ಬಿಡುಗಡೆಯಾಗಿರುವ ಟೈಟಲ್ ಪೋಸ್ಟರ್ ವಿಭಿನ್ನವಾಗಿದ್ದು, ನೀರಿನ ದಡದಲ್ಲಿ ಧನಂಜಯ್ ಒಂದು ಹೆಣ್ಣು ಮಗುವಿನೊಂದಿಗೆ ಕುಳಿತು ಏನೋ ಯೋಚನೆ ಮಾಡುತ್ತಾ ಕುಳಿತಿರುವ ದೃಶ್ಯ ಪೋಸ್ಟರ್‌ನಲ್ಲಿದೆ. ಚಿತ್ರಕ್ಕೆ ಕುಶಾಲ್ ಗೌಡ  ಅವರು ಆ್ಯಕ್ಷನ್​ ಕಟ್ ಹೇಳಿದ್ದು, ಇದಕ್ಕೂ ಮುನ್ನ 'ಕನ್ನಡಕ್ಕಾಗಿ ಒಂದನ್ನು ಒತ್ತಿ'  ಚಿತ್ರವನ್ನು ನಿರ್ದೇಶಿಸಿದ್ದರು.

ಬಾಬಾಬುಡನ್ ಗಿರಿ, ಚಿಕ್ಕಮಗಳೂರು, ಕುದುರೆಮುಖ ಸೇರಿದಂತೆ ಅನೇಕ ಸುಂದರ ಸ್ಥಳಗಳಲ್ಲಿ ಚಿತ್ರದ ಚಿತ್ರೀಕರಣ ನಡೆದಿದೆ. ಅದಿತಿ ಪ್ರಭುದೇವ ಕೂಡಾ ಈ ಚಿತ್ರದ ಕಥೆ ಹಾಗೂ ತಮ್ಮ ಪಾತ್ರವನ್ನು ಬಹಳ ಮೆಚ್ಚಿರುವುದಾಗಿ ಹೇಳಿಕೊಂಡಿದ್ದಾರೆ. 'ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ' ಚಿತ್ರದ ಹಾಡುಗಳಿಗೆ ಅರ್ಜುನ್ ಜನ್ಯಾ ಸಂಗೀತ ಸಂಯೋಜನೆಯಿದೆ. 'ಟಗರು', 'ಸಲಗ' ಖ್ಯಾತಿಯ ಮಾಸ್ತಿ  ಈ ಚಿತ್ರಕ್ಕೆ ಸಂಭಾಷಣೆ ಬರೆಯುತ್ತಿದ್ದಾರೆ.

ಯಶ್ವಂತ್ ಶೆಟ್ಟಿ, ಹಿರಿಯ ನಟಿ ಭಾವನಾ, ತ್ರಿವೇಣಿ ರಾವ್, ಪ್ರಕಾಶ್ ಬೆಳವಾಡಿ ಹಾಗೂ ಇನ್ನಿತರರು ಚಿತ್ರದ ತಾರಾಬಳಗದಲ್ಲಿದ್ದಾರೆ.  ಸದ್ಯ ಧನಂಜಯ್ ಅಭಿನಯದ 'ಬಡವ ರಾಸ್ಕಲ್'ಚಿತ್ರ ಡಿಸೆಂಬರ್ 24 ಕ್ರಿಸ್‌ಮಸ್  ಹಬ್ಬದಂದು ಬಿಡುಗಡೆಯಾಗಲಿದ್ದು, ಮಾನ್ಸೂನ್ ರಾಗ  ಸೇರಿದಂತೆ ಹೆಡ್​ ಬುಷ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

ಡಾಲಿ ಧನಂಜಯ್ ಅಭಿನಯದ 'ಹೆಡ್​ ಬುಷ್'​ ಸಿನಿಮಾಕ್ಕೆ ಅಗ್ನಿ ಶ್ರೀಧರ್ ಕತೆ ಬರೆದಿದ್ದು, ಶೂನ್ಯ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ. ಹಾಗೂ ಅಲ್ಲು ಅರ್ಜುನ್ ಅಭಿನಯದ 'ಪುಷ್ಪ'  ಚಿತ್ರದಲ್ಲಿ ಧನಂಜಯ್ ನೆಗೆಟಿವ್ ರೋಲ್‌ನಲ್ಲಿ ಕಾಣಿಸಿಕೊಂಡಿದ್ದು ಡಿಸೆಂಬರ್ 17 ಕ್ಕೆ ರಿಲೀಸ್ ಆಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT