ಸಿರಿವೆನ್ನಲ ಸೀತಾರಾಮ ಶಾಸ್ತ್ರಿ 
ಸಿನಿಮಾ ಸುದ್ದಿ

ಖ್ಯಾತ ಸಿನಿ ಗೀತರಚನೆಕಾರ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ನಿಧನ

ತೆಲುಗಿನ ಖ್ಯಾತ ಸಿನಿ ಗೀತ ರಚನೆಕಾರ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ಅವರು ಇಂದು ನಿಧನರಾಗಿದ್ದು ಅವರಿಗೆ 66 ವರ್ಷ ವಯಸ್ಸಾಗಿತ್ತು.

ಹೈದರಾಬಾದ್: ತೆಲುಗಿನ ಖ್ಯಾತ ಸಿನಿ ಗೀತ ರಚನೆಕಾರ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ಅವರು ಇಂದು ನಿಧನರಾಗಿದ್ದು ಅವರಿಗೆ 66 ವರ್ಷ ವಯಸ್ಸಾಗಿತ್ತು.

ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರನ್ನು ಇದೇ ತಿಂಗಳ 24ರಂದು ನ್ಯುಮೋನಿಯಾದಿಂದ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುನಲ್ಲಿ ಕೃತಕ ಉಸಿರಾಟದ ವ್ಯವಸ್ಥೆಯ ಬೆಂಬಲದೊಂದಿಗಿದ್ದ ಅವರು ಇಂದು (ಮಂಗಳವಾರ) ಸಂಜೆ 4 ಗಂಟೆಗೆ ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ.

ಚೆಂಬೋಲು ಸೀತಾರಾಮಶಾಸ್ತ್ರಿಗಳು ಮೇ 20, 1955 ರಂದು ವಿಶಾಖಪಟ್ಟಣಂ ಜಿಲ್ಲೆಯಲ್ಲಿ ಡಾ. ಅನಕಾಪಲ್ಲಿಗೆ ಜನಿಸಿದರು. ಅವರ ತಂದೆ ಸಿವಿ ಯೋಗಿ ಮತ್ತು ತಾಯಿ ಸುಬ್ಬಲಕ್ಷ್ಮಿ. ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದ ಅವರು ಹತ್ತನೇ ತರಗತಿಯವರೆಗೆ ಅನಕಾಪಲ್ಲಿಯಲ್ಲಿ ಓದಿದ್ದರು. ಅವರು ಕಾಕಿನಾಡ ಮತ್ತು ಆಂಧ್ರ ವಿಶ್ವಕಲಾ ಪರಿಷತ್‌ನಲ್ಲಿ ಇಂಟರ್‌ ಮತ್ತು ಬಿಎ ಮುಗಿಸಿದರು. ಅದೇ ಸಮಯದಲ್ಲಿ 10ನೇ ತರಗತಿ ವಿದ್ಯಾರ್ಹತೆಯೊಂದಿಗೆ ಬಿಎಸ್‌ಎನ್‌ಎಲ್‌ನಲ್ಲಿ ಉದ್ಯೋಗ ಪಡೆದು ರಾಜಾಜಿನಗರದಲ್ಲಿ ಕೆಲಕಾಲ ಕೆಲಸ ಮಾಡಿದರು.

ಖ್ಯಾತ ನಿರ್ದೇಶಕ ಕೆ.ವಿಶ್ವನಾಥ್ ಅವರ ನಿರ್ದೇಶನದ ‘ಸಿರಿವೆನ್ನೆಲ’ ಚಿತ್ರದಲ್ಲಿ ‘ವಿಧಾತ ತಲಪುನ’ ಹಾಡಿನ ಮೂಲಕ ತಮ್ಮ ಸಿನಿಮಾ ಜೀವನ ಆರಂಭಿಸಿದ ಸೀತಾರಾಮಶಾಸ್ತ್ರಿ ಅವರು ಅದೇ ಚಿತ್ರದ ಹೆಸರನ್ನು ತಮ್ಮ ಹೆಸರಿಗೆ ಸೇರಿಸಿಕೊಂಡು ಪ್ರಸಿದ್ಧರಾದರು. ಸುಮಾರು 800 ಚಿತ್ರಗಳ ಸುಮಾರು 3,000 ಗೀತೆಗಳು ಅವರಿಂದ ರಚಿತವಾಗಿವೆ. ಚಿತ್ರರಂಗಕ್ಕೆ ಅವರ ಸೇವೆಯನ್ನು ಗುರುತಿಸಿ ಕೇಂದ್ರ ಸರ್ಕಾರ 2019ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.

11 ಬಾರಿ ನಂದಿ ಪ್ರಶಸ್ತಿ
ಸೀತಾರಾಮಶಾಸ್ತ್ರಿಯವರ ಹಾಡಿಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿತ್ತು. ಅವರ ಹಾಡಿಗೆ ಪುಷ್ಠಿ ನೀಡುವಂತೆ ಪ್ರಶಸ್ತಿ ಪುರಸ್ಕಾರಗಳು ಹರಿದು ಬಂದವು. ಸಿರಿವೆನ್ನೆಲ ಸೀತಾರಾಮಶಾಸ್ತ್ರಿ ಅವರು ಒಟ್ಟು 11 ಬಾರಿ ಆಂಧ್ರ ಪ್ರದೇಶ ಸರ್ಕಾರ ನೀಡುವ ಅತ್ಯುನ್ನತ ನಂದಿ ಪ್ರಶಸ್ತಿಗಳನ್ನು ಪಡೆದಿದ್ದಾರೆ. ನಾಲ್ಕು ಬಾರಿ ಫಿಲ್ಮ್‌ಫೇರ್ ಅತ್ಯುತ್ತಮ ಗೀತರಚನೆಕಾರ ಪ್ರಶಸ್ತಿಯನ್ನು ಪಡೆದಿದ್ದಾರೆ. ಅಂತೆಯೇ ‘ಕಂಚೆ’ ಚಿತ್ರಕ್ಕಾಗಿ ಸೈಮಾ ಅತ್ಯುತ್ತಮ ಗೀತರಚನೆಕಾರ ಪ್ರಶಸ್ತಿ ಪಡೆದಿದ್ದರು. ಇತ್ತೀಚೆಗೆ ನಟ ಅಲ್ಲು ಅರ್ಜುನ್ ಅಭಿನಯದ ಬ್ಲಾಕ್ ಬಸ್ಟರ್ ಚಿತ್ರ ಅಲಾ ವೈಕುಂಠಪುರಮುಲೋ ಚಿತ್ರಕ್ಕೂ ಸಿತಾರಾಮಶಾಸ್ತ್ರಿ ಅವರು ಗೀತರಚನೆ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT