ಸಿನಿಮಾ ಸುದ್ದಿ

ವಿಜಯ್ ಪ್ರಕಾಶ್ ಹಾಡಿರುವ ಕಲಾವಿದನ ಸೋಲು ಗೆಲುವು ಕುರಿತ 'ಆರಾಮ್ಸೆ' ಆಲ್ಬಂ ಸಾಂಗ್ ವೈರಲ್

ಕನಸುಗಳನ್ನು ಹೊತ್ತು  ಚಿತ್ರರಂಗಕ್ಕೆ ಬರುವ ಕಲಾವಿದನ ಮನಸ್ಸಿನ ತೊಳಲಾಟವನ್ನು ವಿವರಿಸುವ ವಿಡಿಯೋ ಆಲ್ಬಮ್ ಆರಾಮ್ಸೆ (Aaramse)  ಸದ್ಯ ಯೂಟ್ಯೂಬ್‍ನಲ್ಲಿ (You Tube) ವೈರಲ್ ಆಗಿದೆ.

ಬೆಂಗಳೂರು: ಮಾಯಾನಗರಿ ಎಂದು ಕರೆಸಿಕೊಳ್ಳುವ ಸಿನಿಮಾ ರಂಗದಲ್ಲಿ ಕೆಲವರು ರಾತ್ರೋರಾತ್ರಿ ಸ್ಟಾರ್ ಆದರೆ, ಇನ್ನು ಕೆಲವರು ಪ್ರತಿಭೆ ಇದ್ದರೂ ಅವಕಾಶ ಸಿಗದೇ ಕಣ್ಮರೆಯಾಗುತ್ತಾರೆ. ಹೀಗೆ ಕನಸುಗಳನ್ನು ಹೊತ್ತು  ಚಿತ್ರರಂಗಕ್ಕೆ ಬರುವ ಕಲಾವಿದನ ಮನಸ್ಸಿನ ತೊಳಲಾಟವನ್ನು ವಿವರಿಸುವ ವಿಡಿಯೋ ಆಲ್ಬಮ್ ಆರಾಮ್ಸೆ (Aaramse)  ಸದ್ಯ ಯೂಟ್ಯೂಬ್‍ನಲ್ಲಿ (You Tube) ವೈರಲ್ ಆಗಿದೆ.

ಅಭಿಷೇಕ್ ಮಠದ್ ಅವರು ಈ ಹಾಡನ್ನು ನಿರ್ದೇಶಿಸಿ, ನಿರ್ಮಾಣ ಮಾಡಿದ್ದಾರೆ. 'ಜೀವನದಲ್ಲಿ ಎಷ್ಟೋ ತಿರಸ್ಕಾರಗಳು ಬರುತ್ತವೆ. ಅಂದ ಮಾತ್ರಕ್ಕೆ ಬದುಕನ್ನು ಕೈಬಿಡಬಾರದು. ಇಲ್ಲಿಯೇ ಮುಂದುವರಿಯಬೇಕು ಎನ್ನುವ ಅಂಶ ಹಾಡಿನಲ್ಲಿದೆ. 

ಸ್ಯಾಂಡಲ್‌ವುಡ್‌ ಸೇರಿದಂತೆ ಬಹುಭಾಷೆಯಲ್ಲಿ ಗಾಯಕರಾಗಿ ಗುರುತಿಸಿಕೊಂಡಿರುವ ವಿಜಯ ಪ್ರಕಾಶ್, ಈ ಹಾಡಿಗೆ ಧ್ವನಿ ನೀಡಿದ್ದಾರೆ.  

'ಈ ಹಾಡಿನ ಸಾಹಿತ್ಯ ವಿಜಯ್ ಪ್ರಕಾಶ್ ಅವರಿಗೆ ಇಷ್ಟವಾಗಿ, ಅವರು ಖುಷಿಯಿಂದ ಹಾಡಿದರು. ನಂತರ ಈ ಹಾಡನ್ನು ಚಿತ್ರೀಕರಣ ಮಾಡಿದ ರೀತಿಗೆ ಅವರು ಸಂತಸ ವ್ಯಕ್ತಪಡಿಸಿದರು. ಗಾಯಕ ವಿಜಯ್​ ಪ್ರಕಾಶ್ ನಮಗೆ ಬಹಳ ಬೆಂಬಲ ನೀಡಿದರು' ಎನ್ನುತ್ತಾರೆ ಅಭಿಷೇಕ ಮಠದ್.

ಅಭಿಷೇಕ್ ಈ ಹಿಂದೆ ದಿಗಂತ್ ಜೊತೆಗೆ ಒಂದು ಮ್ಯೂಸಿಕ್ ವಿಡಿಯೋ ಮಾಡಿದ್ದರು. ಅದಕ್ಕೆ ಅವರೇ ನೃತ್ಯ ನಿರ್ದೇಶನ ಮಾಡಿದ್ದರು. ನಂತರ ಚಂದನ್ ಶೆಟ್ಟಿ ಜೊತೆಗೆ ಟಕಿಲಾ, ಬಡಪಾಯಿ ಕುಡುಕ ಸಾಂಗ್‌ಗಳನ್ನು ಮಾಡಿದ್ದಾರೆ. ಈಚೆಗೆ ಅದಿತಿ ಪ್ರಭುದೇವ ಅವರೊಂದಿಗೆ ಪರ್ಫೆಕ್ಟ್ ಗರ್ಲ್ ಎಂಬ ಸಾಂಗ್ ಮಾಡಿದ್ದರು ಅಭಿಷೇಕ್‌. ಸದ್ಯ ಬಳೆಪೇಟೆ ಮತ್ತು ಸಮುದ್ರಂ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT