ಸಿನಿಮಾ ಪೋಸ್ಟರ್ 
ಸಿನಿಮಾ ಸುದ್ದಿ

ಡಾಲಿ ಧನಂಜಯ್ ನಟನೆಯ ರತ್ನನ್ ಪ್ರಪಂಚ, ಅಕ್ಟೋಬರ್ 22 ರಂದು ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆ

ಕೆ ಆರ್ ಜಿ ಸ್ಟುಡಿಯೋಸ್ ನಿರ್ಮಿಸಿದ ಈ ಚಿತ್ರವನ್ನು ರೋಹಿತ್ ಪದಕಿ ನಿರ್ದೇಶಿಸಿದ್ದಾರೆ. ಧನಂಜಯ್ ಹಾಗೂ ರೆಬಾ ಮೋನಿಕಾ ಜಾನ್ ಅವರು ರತ್ನಾಕರ ಹಾಗೂ ಮಯೂರಿ ಪಾತ್ರದಲ್ಲಿ ನಟಿಸಿದ್ದಾರೆ. 

ಬೆಂಗಳೂರು: ಟ್ರೇಲರ್ ಮೂಲಕ ಕನ್ನಡ ಸಿನಿಪ್ರೇಕ್ಷಕರಲ್ಲಿ ತೀವ್ರ ನಿರೀಕ್ಷೆ ಹುಟ್ಟಿಸಿದ್ದ ರತ್ನನ್ ಪ್ರಪಂಚ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಒಟಿಟಿ ತಾಣವಾದ ಅಮೇಜಾನ್ ಪ್ರೈಮ್ ನಲ್ಲಿ ರತ್ನನ್ ಪ್ರಪಂಚ ಅಕ್ಟೋಬರ್ 22 ರಂದು ತೆರೆ ಕಾಣುತ್ತಿದೆ. ಕೆ ಆರ್ ಜಿ, ಸ್ಟುಡಿಯೋಸ್ ಬ್ಯಾನರ್ ಅಡಿ ಕಾರ್ತಿಕ್ ಮತ್ತು ಯೋಗಿ ಜಿ ರಾಜ್ ನಿರ್ಮಿಸಿರುವ ಟ್ರಾವೆಲ್ ಕಾಮಿಡಿ-ಡ್ರಾಮಾ ರತ್ನನ್ ಪ್ರಪಂಚವನ್ನು ರೋಹಿತ್ ಪದಕಿ ನಿರ್ದೇಶಿಸಿದ್ದಾರೆ. ಡಾಲಿ ಧನಂಜಯ್, ರೆಬಾ ಮೋನಿಕಾ ಜಾನ್ ಮುಖ್ಯ ಪಾತ್ರದಲ್ಲಿ ನಟಿಸಿದ್ದು, ಉಮಾಶ್ರೀ, ರವಿಶಂಕರ್, ಅನು ಪ್ರಭಾಕರ್, ಪ್ರಮೋದ್, ವೈನಿಧಿ ಜಗದೀಶ್, ಅಚ್ಯುತ್ ಕುಮಾರ್ ಮತ್ತು ಶ್ರುತಿ ಕೃಷ್ಣ ತಾರಾಗಣದಲ್ಲಿದ್ದಾರೆ. 

ರತ್ನನ್ ಪ್ರಪಂಚ ರತ್ನಾಕರನ ಜೀವನ ಮತ್ತು ಪ್ರಯಾಣದ ಸುತ್ತ ಕೇಂದ್ರೀಕೃತವಾದ ಒಂದು ವಿನೂತನ ಟ್ರಾವೆಲ್ ಕಾಮಿಡಿ ಡ್ರಾಮಾ ಸಿನಿಮಾ ಇದಾಗಿದೆ. ಜೀವನದ ಕಷ್ಟ ಸುಖಗಳನ್ನು ಎದುರುಗೊಳ್ಳುತ್ತಲೇ ತನ್ನ ಅಸ್ತಿತ್ವ ಮತ್ತು ಮೂಲವನ್ನು ಹುಡುಕುವ ವ್ಯಕ್ತಿ ರತ್ನಾಕರ. ಜೀವನದ ಪಯಣದಲ್ಲಿ ಹಲವು ಸಂದಿಗ್ಧತೆಗಳಿಗೆ ಅವನು ಸಾಕ್ಷಿಯಾಗುತ್ತಾನೆ. ಈ ಪ್ರಯಾಣದಲ್ಲಿ, ಆತನ ಜೊತೆಯಲ್ಲಿ ಪತ್ರಕರ್ತೆ ಮಯೂರಿ ಜೊತೆಯಾಗುತ್ತಾರೆ.

"ಶ್ರೇಷ್ಠ ಕಥೆಗಳು ಯಾವುದೇ ಗಡಿಗಳನ್ನು ಹೊಂದಿಲ್ಲ. 240 ದೇಶಗಳು ಮತ್ತು ಪ್ರಾಂತ್ಯಗಳಲ್ಲಿ ಹರಡಿರುವ ಪ್ರೈಮ್ ವೀಡಿಯೋ ಗ್ರಾಹಕರಿಗೆ ಸ್ಥಳೀಯ ಕಥೆಗಳನ್ನು ನೀಡುತ್ತಾ ರಂಜಿಸಿದೆ. ರತ್ನನ್ ಪ್ರಪಂಚ ಕೂಡಾ ಅಂಥಾ ಪ್ರಯತ್ನಗಳಲ್ಲಿ ಒಂದು' ಎಂದು ಅಮೇಜಾನ್ ಪ್ರೈಮ್ ಇಂಡಿಯಾದ ಮಾರ್ಕೆಟಿಂಗ್ ಡೈರೆಕ್ಟರ್ ಸುಶಾಂತ್ ಶ್ರೀರಾಮ್ ಹೇಳಿದ್ದಾರೆ. 

ಹಿಂದೆಂದೂ ಕೇಳಿರದ ಕಥೆಯನ್ನು ರತ್ನನ್ ಪ್ರಪಂಚ ಹೊಂದಿದೆ. ಅಮೆಜಾನ್ ಪ್ರೈಮ್ ವಿಡಿಯೋ ಮೂಲಕ ವಿಶ್ವಾದ್ಯಂತ ಪ್ರೇಕ್ಷಕರಿಗೆ ಈ ಕಥೆಯನ್ನು ಸಾದರ ಪಡಿಸಲು ತುಂಬಾ ಉತ್ಸುಕನಾಗಿದ್ದೇನೆ ಎಂದು ನಿರ್ದೇಶಕ ರೋಹಿತ್ ಪದಕಿ ಸಂತಸ ಹಂಚಿಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT