ಮಾಫಿಯಾ ಚಿತ್ರತಂಡ 
ಸಿನಿಮಾ ಸುದ್ದಿ

'ಮಾಫಿಯಾ' ದಿಂದ ಗುರುದತ್ತ ಗಾಣಿಗ ಔಟ್: ಪ್ರಜ್ವಲ್ ಗೆ 'ದೇವಕಿ' ನಿರ್ದೇಶಕ ಲೋಹಿತ್ ಆ್ಯಕ್ಷನ್ ಕಟ್!

ಪ್ರಜ್ವಲ್ ದೇವರಾಜ್ ನಟನೆಯ 35ನೇ ಸಿನಿಮಾಗೆ ಗುರುದತ್ ಗಾಣಿಗ ನಿರ್ದೇಶನ ಮಾಡಬೇಕಿತ್ತು, ಆದರೆ ಇತ್ತೀಚಿನ ಮಾಹಿತಿಯ ಪ್ರಕಾರ, ಚಿತ್ರದಿಂದ ಗುರುದತ್ತ ಗಾಣಿಗ ಔಟ್ ಆಗಿದ್ದಾರೆ.

ಪ್ರಜ್ವಲ್ ದೇವರಾಜ್ ನಟನೆಯ 35ನೇ ಸಿನಿಮಾಗೆ ಗುರುದತ್ ಗಾಣಿಗ ನಿರ್ದೇಶನ ಮಾಡಬೇಕಿತ್ತು, ಆದರೆ ಇತ್ತೀಚಿನ ಮಾಹಿತಿಯ ಪ್ರಕಾರ, ಚಿತ್ರದಿಂದ ಗುರುದತ್ತ ಗಾಣಿಗ ಔಟ್ ಆಗಿದ್ದಾರೆ.

ಕಾರಣಾಂತರಗಳಿಂದ ಗುರುದತ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿಲ್ಲ. ಅವರ ಬದಲಿಗೆ, 'ಮಮ್ಮಿ' ಖ್ಯಾತಿಯ ಲೋಹಿತ್ ನಿರ್ದೇಶಕರಾಗಿ ಬಂದಿದ್ದಾರೆ. ಮಾಫಿಯಾ, ಆಕ್ಷನ್ ಎಂಟರ್ಟೈನರ್ ಆಗಿ ಬಿಲ್ ಮಾಡಲಾಗಿದೆ, ಪ್ರಜ್ವಲ್ ದೇವರಾಜ್  ಪೊಲೀಸ್ ಅಧಿಕಾರಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಪ್ರಿಯಾಂಕಾ ಉಪೇಂದ್ರ ಅವರೊಂದಿಗೆ 'ಮಮ್ಮಿ' ಸಿನಿಮಾ ಮಾಡಿ, ಮೊದಲ ಪ್ರಯತ್ನದಲ್ಲಿ ಎಲ್ಲರ ಗಮನಸೆಳೆದ ನಿರ್ದೇಶಕ ಲೋಹಿತ್. ಆನಂತರ ಅವರು ಮತ್ತೊಮ್ಮೆ ಪ್ರಿಯಾಂಕಾ ಅವರೊಂದಿಗೆ 'ದೇವಕಿ' ಮಾಡಿದ್ದರು. ಸದ್ಯ ನಿರ್ಮಾಣ ಮತ್ತು ನಿರ್ದೇಶನ ಅಂತ ಸಾಕಷ್ಟು ಬ್ಯುಸಿ ಆಗಿದ್ದಾರೆ. ಅಲ್ಲದೆ, ಶಿವರಾಜ್‌ಕುಮಾರ್ ಅವರೊಂದಿಗೆ 'ಸತ್ಯಮಂಗಳ' ಅನ್ನೋ ಸಿನಿಮಾವನ್ನೂ ಸಹ ಲೋಹಿತ್ ಮಾಡಬೇಕಿದೆ. ಆ ಸಿನಿಮಾ ಶುರುವಾಗುವುದು ಮುಂದಿನ ವರ್ಷದ ಆರಂಭದಲ್ಲಿ. ಹಾಗಾಗಿ, ಈಗ ಪ್ರಜ್ವಲ್ ಸಿನಿಮಾ ಕೈಗೆತ್ತಿಕೊಂಡಿದ್ದಾರೆ.

ಈ ಪ್ರಾಜೆಕ್ಟ್ ಕ್ಯಾಪ್ಟನ್ ಆಗಿ ಲೋಹಿತ್ ಒಳ್ಳೆಯ ಕೆಲಸ ಮಾಡುತ್ತಾರೆ ಎಂಬ ವಿಶ್ವಾಸ ನನಗಿದೆ, ಅವರಿಗೆ ನನ್ನ ಮತ್ತು ಪ್ರಜ್ವಲ್ ಅವರ ಸಂಪೂರ್ಣ ಬೆಂಬಲ ಮತ್ತು ಪ್ರೋತ್ಸಾಹವಿದೆ ಎಂದು ನಿರ್ಮಾಪಕರು ಹೇಳುತ್ತಾರೆ.

ಪ್ರಜ್ವಲ್‌ ಅವರಿಗೆ ಅದಿತಿ ಪ್ರಭುದೇವ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ನವೆಂಬರ್ 1ರಿಂದ ಬೆಂಗಳೂರು, ಮೈಸೂರು ಮತ್ತು ರಾಮೋಜಿ ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಣ ನಡೆಯಲಿದೆ' ಎಂದು ಮಾಹಿತಿ ನೀಡುತ್ತಾರೆ ಲೋಹಿತ್. ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ 'ಟಗರು' ಖ್ಯಾತಿಯ ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ. ಜೆಬಿನ್ ಜಾಕಬ್ ಈ ಚಿತ್ರದ ಛಾಯಾಗ್ರಹಕರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT