ನಟ ಶರಣ್ 
ಸಿನಿಮಾ ಸುದ್ದಿ

ಉತ್ತರಾಖಂಡದ ಹಿಮಚ್ಛಾದಿತ ಶಿಖರ ಪ್ರಾಂತ್ಯದಲ್ಲಿ ನಟ ಶರಣ್ ಹಾರರ್ ಸಿನಿಮಾ ಚಿತ್ರೀಕರಣ

50 ದಿನಗಳ ಹಿಂದೆ ನವನೀತ್ ಅವರು ಶರಣ್ ಅವರಿಗೆ ಹೊಸ ಸಿನಿಮಾದ ಕಥೆ ಹೇಳಿದ್ದರಂತೆ. ಕಥೆ ಕೇಳುತ್ತಲೇ ಇಂಪ್ರೆಸ್ ಆದ ಶರಣ್ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದರು ಎಂದು ನಿರ್ದೇಶಕರು ಹೇಳಿಕೊಂಡಿದ್ದಾರೆ.

ಬೆಂಗಳೂರು: ಸದ್ಯ ಗುರು ಶಿಷ್ಯರು ಸಿನಿಮಾ ಚಿತ್ರೀಕರಣದಲ್ಲಿ ಬಿಝಿಯಾಗಿರುವ ನಟ ಶರಣ್, 'ಕರ್ವ' ನಿರ್ದೇಶಕ ನವನೀತ್ ಸಿನಿಮಾದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಇನ್ನೂ ಹೆಸರಿಡದ ಆ ಚಿತ್ರ ಸಂಪೂರ್ಣ ಹಾರರ್ ಸಿನಿಮಾ ಎನ್ನಲಾಗಿದೆ. ತರುಣ್ ಶಿವಪ್ಪ ಈ ಸಿನಿಮಾ ನಿರ್ಮಾಪಕರು. ನಿರ್ದೇಶಕ ಅವರ ರೋಸ್, ವಿಕ್ಟರಿ2 ಸಿನಿಮಾಗಳನ್ನು ಈ ಹಿಂದೆ ಅವರೇ ನಿರ್ಮಾಣ ಮಾಡಿದ್ದರು.

50 ದಿನಗಳ ಹಿಂದೆ ನವನೀತ್ ಅವರು ಶರಣ್ ಅವರಿಗೆ ಹೊಸ ಸಿನಿಮಾದ ಕಥೆ ಹೇಳಿದ್ದರಂತೆ. ಕಥೆ ಕೇಳುತ್ತಲೇ ಇಂಪ್ರೆಸ್ ಆದ ಶರಣ್ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದರು ಎಂದು ನಿರ್ದೇಶಕರು ಹೇಳಿಕೊಂಡಿದ್ದಾರೆ. ಈ ಹಿಂದೆ ಕರ್ವ ಮತ್ತು ಬಕಾಸುರ ಸಿನಿಮಾಗಳನ್ನು ನಿರ್ದೇಶಿಸಿರುವ ನವನೀತ್ ಅವರಿಗೆ ಇದು ಮೂರನೇ ಸಿನಿಮಾ.

ಸಿನಿಮಾದ ಶೇ.80ರಷ್ಟು ಭಾಗ ಉತ್ತರಾಖಂಡದ ಹಿಮಚ್ಛಾದಿತ ಪ್ರದೇಶಗಳಲ್ಲಿ ನಡೆಯುವುದು ಎಂದು ನಿರ್ದೇಶಕರು ಹೇಳಿದ್ದಾರೆ. ಸೆನಿಮೆಟೊಗ್ರಾಫರ್ ಆಗಿ ಅನುಪ್ ಕಟ್ಟುಕರನ್ ಅವರು ಆಯ್ಕೆಯಾಗಿದ್ದಾರೆ. ಅವರು ಈ ಹಿಂದೆ ಹಲವು ಜನಪ್ರಿಯ ಜಾಹೀರಾತುಗಳಿಗೆ ಸಿನಿಮೆಟೊಗ್ರಾಫರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಕನ್ನಡದಲ್ಲಿ ಇದು ಅವರ ಮೊದಲ ಸಿನಿಮಾ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT