ನಟ ಸುದೀಪ್ 
ಸಿನಿಮಾ ಸುದ್ದಿ

ನಿರ್ದೇಶನಕ್ಕೆ ಮರಳಿದ ಕಿಚ್ಚ ಸುದೀಪ್: ಸಲ್ಲು ಭಾಯ್'ಗೆ ಆ್ಯಕ್ಷನ್ ಕಟ್ ಹೇಳಲು ಸಿದ್ಧತೆ!

ಕಿಚ್ಚ ಸುದೀಪ್ ಮತ್ತೆ ನಿರ್ದೇಶನಕ್ಕೆ ಬರುತ್ತಾರೆ ಎಂಬ ವದಂತಿಗಳು ಕೆಲವು ದಿನಗಳಿಂದ ಹರಿದಾಡುತ್ತಿದ್ದು, ಈ ನಡುವೆ ದೊಡ್ಡದೊಂದು ಸುದ್ದಿ ಹೊರಗೆ ಬಂದಿದೆ. ಈ ಸುದ್ದಿ ಸಿನಿಪ್ರಿಯರಿಗೆ ಹಾಗೂ ಕಿಚ್ಚನ ಅಭಿಮಾನಿಗಳಿಗೆ ಭರ್ಜರಿ ಭೋಜನವಾಗಲಿದೆ.

ಕಿಚ್ಚ ಸುದೀಪ್ ಮತ್ತೆ ನಿರ್ದೇಶನಕ್ಕೆ ಬರುತ್ತಾರೆ ಎಂಬ ವದಂತಿಗಳು ಕೆಲವು ದಿನಗಳಿಂದ ಹರಿದಾಡುತ್ತಿದ್ದು, ಈ ನಡುವೆ ದೊಡ್ಡದೊಂದು ಸುದ್ದಿ ಹೊರಗೆ ಬಂದಿದೆ. ಈ ಸುದ್ದಿ ಸಿನಿಪ್ರಿಯರಿಗೆ ಹಾಗೂ ಕಿಚ್ಚನ ಅಭಿಮಾನಿಗಳಿಗೆ ಭರ್ಜರಿ ಭೋಜನವಾಗಲಿದೆ. 

ಬಾಲಿವುಡ್ ನಟ ಸಲ್ಮಾನ್ ಖಾನ್'ಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಆ್ಯಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ. 

ಈಗಾಗಲೇ ಸಿನಿಮಾ ಕಥೆ ಸಿದ್ಧವಾಗಿದ್ದು, ಹಿಂದಿಯಲ್ಲಿ ಮಾತ್ರ ಸಲ್ಮಾನ್ ಖಾನ್ ನಟಿಸಲಿದ್ದು, ದಕ್ಷಿಣ ಭಾರತದ ಕನ್ನಡ, ತೆಲುಗು ಹಾಗೂ ತಮಿಳು ಭಾಷೆಯಲ್ಲಿ ಸುದೀಪ್ ಅವರ ನಟಿಸಲಿದ್ದಾರೆಂದು ತಿಳಿದುಬಂದಿದೆ. 

ಹಿಂದಿಯಲ್ಲಿ ಸನ್ಮಾನ್ ಖಾನ್ ನಟಿಸುವಂತೆ ಮಾಡಲು ಯೋಜಿಸಲಾಗಿದೆ. ದಕ್ಷಇಣ ಭಾರತದ ಭಾಷೆಗಳಲ್ಲಿ ನಾನೇ ನಟಿಸುತ್ತಿದ್ದೇನೆ. ಈಗಾಗಲೇ ಚಿತ್ರ ಕುರಿತು ಮಾತುಕತೆ ಆರಂಭಿಸಲಾಗಿದೆ. ಸೆಪ್ಟೆಂಬರ್ ತಿಂಗಳಿನಲ್ಲೇ ಸಲ್ಮಾನ್ ಖಾನ್ ಅವರ ಜೊತೆಗೆ ಮಾತುಕತೆ ನಡೆಸಬೇಕಿತ್ತು. ಆದರೆ, ಕಾರಣಾಂತರಗಳಿಂದ ಅದು ಸಾಧ್ಯವಾಗಲಿಲ್ಲ. ಶೀಘ್ರದಲ್ಲೇ ಭೇಟಿಯಾಗುತ್ತೇನೆಂದು ಸುದೀಪ್ ಹೇಳಿದ್ದಾರೆ. 

ಚಿತ್ರದ ಕಥೆಗೆ ಸಲ್ಮಾನ್ ಖಾನ್ ಅವರಂತಹ ನಟರೇ ಬೇಕಿದೆ. ಚಿತ್ರದ ಯಾವುದೇ ಅವಕಾಶವನ್ನಾದರೂ ಸದ್ಭಳಕೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಚಿತ್ರದ ಸಂಪೂರ್ಣ ಆಯ್ಕೆ, ನಿರ್ಧಾರ ನನ್ನ ಮೇಲಿದೆ ಚಿತ್ರದ ಕಥೆಗೆ ನ್ಯಾಯ ದೊರಕಿಸುವುದು ನನ್ನ ಮೊದಲ ಆದ್ಯತೆಯಾಗಿದೆ. ಒಬ್ಬ ನಿರ್ದೇಶಕನಾಗಿ ಚಿತ್ರದ ಕಥೆಗೆ ಪ್ರಾಮುಖ್ಯತೆ ನೀಡುತ್ತೇನೆಂದು ತಿಳಿಸಿದ್ದಾರೆ. 

ಸುದೀಪ್ ಅವರು ಕೋಟಿಗೊಬ್ಬ 3 ಚಿತ್ರದಲ್ಲಿ ನಟಿಸಿದ್ದು, ಚಿತ್ರವು ಅಕ್ಟೋಬರ್ 14 ರಂದು ಬಿಡುಗಡೆಗೊಳ್ಳಲುತ್ತಿದೆ. ವಿಕ್ರಾಂತ್ ರೋಣಾದಲ್ಲಿ ಸುದೀಪ್ ನಟಿಸಿದ್ದು, ಚಿತ್ರವು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT