ಸಲಗ ಮತ್ತು ಕೋಟಿಗೊಬ್ಬ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಆಯುಧ ಪೂಜೆ ದಿನ ಬಂದ 'ಸಲಗ'; ಪ್ರದರ್ಶನ ಕಾಣದ ಕೋಟಿಗೊಬ್ಬ-3, ಅಭಿಮಾನಿಗಳ ನಿರಾಸೆ-ಆಕ್ರೋಶ

ಕೊರೋನಾ ಎರಡನೇ ಅಲೆ ತಗ್ಗಿದ ನಂತರ ಸರ್ಕಾರ ಥಿಯೇಟರ್ ಗಳಲ್ಲಿ ಶೇಕಡಾ 100ರ ಆಸನ ಭರ್ತಿಗೆ ಅನುಮತಿ ನೀಡಿದ ಬಳಿಕ ಸ್ಯಾಂಡಲ್ ವುಡ್ ನಲ್ಲಿ ಕಳೆದ ವಾರ 'ನಿನ್ನ ಸನಿಹಕೆ' ಚಿತ್ರ ಬಿಡುಗಡೆಯಾಗಿ ಇಂದು ನವರಾತ್ರಿಯ ಆಯುಧ ಪೂಜೆಯ ಶುಭದಿನ ಎರಡೆರಡು ಚಿತ್ರಗಳು ತೆರೆಗೆ ಬರುತ್ತಿವೆ.

ಬೆಂಗಳೂರು: ಕೊರೋನಾ ಎರಡನೇ ಅಲೆ ತಗ್ಗಿದ ನಂತರ ಸರ್ಕಾರ ಥಿಯೇಟರ್ ಗಳಲ್ಲಿ ಶೇಕಡಾ 100ರ ಆಸನ ಭರ್ತಿಗೆ ಅನುಮತಿ ನೀಡಿದ ಬಳಿಕ ಸ್ಯಾಂಡಲ್ ವುಡ್ ನಲ್ಲಿ ಕಳೆದ ವಾರ 'ನಿನ್ನ ಸನಿಹಕೆ' ಚಿತ್ರ ಬಿಡುಗಡೆಯಾಗಿ ಇಂದು ನವರಾತ್ರಿಯ ಆಯುಧ ಪೂಜೆಯ ಶುಭದಿನ ಎರಡೆರಡು ಚಿತ್ರಗಳು ತೆರೆಗೆ ಬರುತ್ತಿವೆ.

ಅದು ಕಿಚ್ಚ ಸುದೀಪ್ ನಟನೆಯ ಕೋಟಿಗೊಬ್ಬ 3 ಮತ್ತು ದುನಿಯಾ ವಿಜಯ್ ಅಭಿನಯದ ಸಲಗ ಚಿತ್ರಗಳು. ದುನಿಯಾ ವಿಜಯ್ ಅಭಿಮಾನಿಗಳು ಮುಂಜಾನೆಯಿಂದಲೇ ಥಿಯೇಟರ್ ಗಳ ಮುಂದೆ ಚಿತ್ರ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿರುವ ಸಂದರ್ಭದಲ್ಲಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಚಿತ್ರ ಗೆಲ್ಲಲಿ ಎಂದು ಆಶಿಸಿ ಹಾರೈಸುತ್ತಿದ್ದಾರೆ.

ಕೋಟಿಗೊಬ್ಬ-3 ಬಿಡುಗಡೆ ಸಂಶಯ?: ಆದರೆ ಕೋಟಿಗೊಬ್ಬ-3 ಚಿತ್ರಕ್ಕೆ ಥಿಯೇಟರ್ ಗಳ ಮುಂದೆ ಬೆಳ್ಳಂಬೆಳಗ್ಗೆ ಬಂದ ಕಿಚ್ಚನ ಅಭಿಮಾನಿಗಳಿಗೆ ನಿರಾಶೆಯಾಗಿದೆ. ಕೋಟಿಗೊಬ್ಬ-3 ಬೆಳಗಿನ ಶೋ ಪ್ರದರ್ಶನವಾಗಿಲ್ಲ, ಪ್ರೇಕ್ಷಕರಿಗೆ ಟಿಕೆಟ್ ಸಿಕ್ಕಿಲ್ಲ. ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ.

ಚಿತ್ರದ ನಿರ್ಮಾಪಕ ಸೂರಪ್ಪ ಬಾಬು ಅವರ ಗಾಂಧಿನಗರ ಬಳಿಯಿರುವ ಕಚೇರಿಗೆ ಮುತ್ತಿಗೆ ಹಾಕಲು ಅಭಿಮಾನಿಗಳು ಮುಂದಾಗಿದ್ದಾರೆ. ಡಾ ವಿಷ್ಣುವರ್ಧನ್ ಮತ್ತು ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಅವಮಾನ ಎಂದು ಆಕ್ರೋಶ ಹೊರಹಾಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT