ದುನಿಯಾ ವಿಜಯ್ 
ಸಿನಿಮಾ ಸುದ್ದಿ

ಕೋವಿಡ್ ಸಮಯದಲ್ಲಿಯೂ 'ಸಲಗ' ಯಶಸ್ವಿಯಾಗಿರುವುದು ಪವಾಡ!

ದುನಿಯಾ ವಿಜಯ್ ಚೊಚ್ಚಲ ನಿರ್ದೇಶನದ ಸಲಗ ಸಿನಿಮಾ ರಿಲೀಸ್ ಆಗಿ ಒಂದು ವಾರ ಕಳೆದಿದ್ದು, ಬರುತ್ತಿರುವ ಉತ್ತಮ ಪ್ರತಿಕ್ರಿಯೆಗೆ ನಟ ವಿಜಯ್ ಗೆ ಹೃದಯ ತುಂಬಿ ಬಂದಿದೆ.

ದುನಿಯಾ ವಿಜಯ್ ಚೊಚ್ಚಲ ನಿರ್ದೇಶನದ ಸಲಗ ಸಿನಿಮಾ ರಿಲೀಸ್ ಆಗಿ ಒಂದು ವಾರ ಕಳೆದಿದ್ದು, ಬರುತ್ತಿರುವ ಉತ್ತಮ ಪ್ರತಿಕ್ರಿಯೆಗೆ ನಟ ವಿಜಯ್ ಗೆ ಹೃದಯ ತುಂಬಿ ಬಂದಿದೆ.

ಪ್ರೇಕ್ಷಕರು ಮತ್ತು ಚಿತ್ರತಂಡದ ಸಹಾಯವಿಲ್ಲದೇ ಯಶಸ್ಸು ಸಾಧ್ಯವಿಲ್ಲ ಎಂದು ವಿಜಯ್ ತಿಳಿಸಿದ್ದಾರೆ.  ನನ್ನ ವೃತ್ತಿ ಜೀವನದಲ್ಲಿ ಹಿಟ್ ಸಿಕ್ಕು  ಬಹಳ ಸಮಯವಾಗಿದೆ. ಪ್ರತಿ ಬಾರಿಯೂ ಒಂದು ಚಲನಚಿತ್ರವು ಫ್ಲಾಪ್ ಆದಾಗ ಬ್ಲೇಮ್ ಗೇಮ್ ಆಗುತ್ತಿತ್ತು. ಆ ಪಟ್ಟಿಯಲ್ಲಿ ನಾಯಕ ಮೊದಲಿಗನಾಗಿದ್ದನು. ಅದರಿಂದ ನಾನು ಈ ನಿರ್ದೇಶಕರ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಮುಂದಾದೆ.  ನಿರ್ಮಾಪಕ ಕೆ ಪಿ ಶ್ರೀಕಾಂತ್ ಅವರ ಬೆಂಬಲವು ಕೂಡ ಒಂದು ಪ್ರಮುಖ ಅಂಶವಾಗಿದೆ.

ಮಾಸ್ ಪ್ರೇಕ್ಷಕರ ಮನಸೂರೆಗೊಂಡಿರುವ ಈ ಚಿತ್ರವು ಕೌಟುಂಬಿಕ ಪ್ರೇಕ್ಷಕರಿಗೂ ಇಷ್ಟವಾಗಿದೆ. ಇದರಿಂದ ವಿಜಯ್ ಖುಷಿಯಾಗಿದ್ದಾರೆ. "ಸಾಮಾನ್ಯವಾಗಿ ರೌಡಿಸಂ ಕುರಿತ ಸಿನಿಮಾವನ್ನು ಕೇವಲ ಮಚ್ಚು ಮತ್ತು ಬಂದೂಕು ಹಿಡಿದಿರುವ ಚಿತ್ರ ಎಂದು ನಿರ್ಧರಿಸಲಾಗುತ್ತದೆ. ಹೀಗಿದ್ದರೂ, ಸಲಗ ತಯಾರಿಕೆಯು ವಿಭಿನ್ನವಾಗಿದ್ದು ಹಲವು ಪ್ರಮುಖ ಅಂಶಗಳನ್ನು ಹೊಂದಿದೆ ಎಂದು ವಿಜಯ್ ತಿಳಿಸಿದ್ದಾರೆ.

ವಿಜಯ್ ಮತ್ತು ತಂಡ ಶೀಘ್ರದಲ್ಲೇ ಸಕ್ಸಸ್ ಟೂರ್ ಆರಂಭಿಸಲಿದೆ.  ನಾವು ತುಮಕೂರಿನಿಂದ ಆರಂಭಿಸಿ ಕರ್ನಾಟಕದಾದ್ಯಂತ ಪ್ರಯಾಣಿಸಲಿದ್ದೇವೆ, ಚಿತ್ರದ ಯಶಸ್ಸಿಗೆ ಅಪಾರ ಕೊಡುಗೆ ನೀಡಿದ ನನ್ನ ಪ್ರೇಕ್ಷಕರಿಗೆ ಅಭಿನಂದನೆ ಸಲ್ಲಿಸಲು ನಾವು ಈ ಪ್ರವಾಸವನ್ನು ಮಾಡುತ್ತಿದ್ದೇವೆ. ಸಾಂಕ್ರಾಮಿಕ ಸಮಯದಲ್ಲಿ ಬರುವ ಈ ರೀತಿಯ ಪ್ರತಿಕ್ರಿಯೆ ಹೆಚ್ಚು ಕಡಿಮೆ ಪವಾಡವಾಗಿದೆ ಎಂದು ವಿಜಯ್ ಅಭಿಪ್ರಾಯ ಪಟ್ಟಿದ್ದಾರೆ.

ಲಾಕ್ ಡೌನ್, ನನ್ನ ತಾಯಿಯ ಸಾವು ಹಾಗೂ ರಿಲೀಸ್ ಟೆನ್ಸನ್ ನಿಂದ ನಾನು ಸಾಕಷ್ಟು ಒತ್ತಡದಲ್ಲಿದ್ದೆ. ನನ್ನ ಮುಂದಿನ ಪ್ರಾಜೆಕ್ಟ್ ಆರಂಭಿಸುವ ಮುನ್ನ ನಾನು ಮಾನಸಿಕವಾಗಿ ಸಿದ್ಧವಾಗಬೇಕು ಎಂದು ವಿಜಯ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2nd PUC exam 2026-ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ-1: 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ, ಸಾವಿರಕ್ಕೂ ಅಧಿಕ ಮಕ್ಕಳಿಗೆ ನಿರಾಕರಣೆ

Bolivia ರಾಜಧಾನಿ ಸಮೀಪ ಕಾರ್ಗೊ ವಿಮಾನ ಪತನ: ಕನಿಷ್ಠ 15 ಮಂದಿ ಸಾವು-Video

ಅಹಿಂದ ಉತ್ತರಾಧಿಕಾರಕ್ಕೆ ಜಾರಕಿಹೊಳಿ ಸಿದ್ದತೆ: ಹಿಂದುಳಿದ ವರ್ಗಗಳ ಚ್ಯಾಂಪಿಯನ್ ಪಟ್ಟಕ್ಕೆ 'ಸಾಹುಕಾರ್' ಸಮರ್ಥರೇ?

ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ: ಯಾವ ಶಕ್ತಿ ಪ್ರದರ್ಶನವೂ ಇಲ್ಲ; ಡಿ.ಕೆ. ಶಿವಕುಮಾರ್

'ಕುಮಾರಸ್ವಾಮಿ ಸಿಎಂ ಆಗುವುದು ನನ್ನ ಕೈಯಲ್ಲಿಲ್ಲ, ಅದು ಮೋದಿ, ಶಾ ತೀರ್ಮಾನ, ಇಷ್ಟು ಕೆಟ್ಟ ಆಡಳಿತ ನೀಡಿರುವ ರಾಜ್ಯ ಸರ್ಕಾರ ನಾನು ನೋಡಿಲ್ಲ': H D ದೇವೇಗೌಡ

SCROLL FOR NEXT