ಬನಾರಸ್ ಸಿನಿಮಾ ಪೋಸ್ಟರ್ 
ಸಿನಿಮಾ ಸುದ್ದಿ

ಜಮೀರ್ ಪುತ್ರ ಝೈದ್ ಖಾನ್ ಸಿನಿಮಾ ಆಡಿಯೋ ದಾಖಲೆ ಮೊತ್ತಕ್ಕೆ ಮಾರಾಟ: ಲಹರಿ ಪಾಲಾದ 'ಬನಾರಸ್'

ನಾಯಕ‌‌ ನಟ ಹಾಗೂ‌ ನಿರ್ಮಾಣ ಸಂಸ್ಥೆಯೂ ಸೇರಿದಂತೆ ಕನ್ನಡ ಚಿತ್ರರಂಗದ ಲ್ಲಿ ಅನೇಕ ಕಾರಣಕ್ಕೆ ಸಾಕಷ್ಟು ನಿರೀಕ್ಷೆ ಮೂಡಿಸಿರುವ ' ಬನಾರಸ್ ' ಚಿತ್ರದ ಆಡಿಯೋ- ವಿಡಿಯೋ ಹಕ್ಕುಗಳು ಕನ್ನಡದ ಪ್ರತಿಷ್ಠಿತ ಆಡಿಯೋ ಸಂಸ್ಥೆ ಲಹರಿ ಪಾಲಾಗಿವೆ.

ಬೆಂಗಳೂರು: ನಾಯಕ‌‌ ನಟ ಹಾಗೂ‌ ನಿರ್ಮಾಣ ಸಂಸ್ಥೆಯೂ ಸೇರಿದಂತೆ ಕನ್ನಡ ಚಿತ್ರರಂಗದ ಲ್ಲಿ ಅನೇಕ ಕಾರಣಕ್ಕೆ ಸಾಕಷ್ಟು ನಿರೀಕ್ಷೆ ಮೂಡಿಸಿರುವ ' ಬನಾರಸ್ ' ಚಿತ್ರದ ಆಡಿಯೋ- ವಿಡಿಯೋ ಹಕ್ಕುಗಳು ಕನ್ನಡದ ಪ್ರತಿಷ್ಠಿತ ಆಡಿಯೋ ಸಂಸ್ಥೆ ಲಹರಿ ಪಾಲಾಗಿವೆ.

ಈ ಚಿತ್ರವು ಕನ್ನಡ, ತೆಲುಗು,ತಮಿಳು ಸೇರಿದಂತೆ ಐದು ಭಾಷೆಗಳಲ್ಲಿ‌ಬರುತ್ತಿದ್ದು, ಆ ಎಲ್ಲಾ ಭಾಷೆಯ ಆಡಿಯೋ‌ಮತ್ತು ವಿಡಿಯೋ ಹಕ್ಕುಗಳನ್ನು ಲಹರಿ‌ಸಂಸ್ಥೆ ಖರೀದಿಸಿದೆ. ಸದ್ಯಕ್ಕೆ ಅದರ‌ ಮೊತ್ತ ರಿವೀಲ್ ಆಗಿಲ್ಲವಾದರೂ, ಚೊಚ್ಚಲ ನಾಯಕ‌ ನಟರೊಬ್ಬರ ಸಿನಿಮಾಗಳ ಇತಿಹಾಸದಲ್ಲಿಯೇ ಅತ್ಯಧಿಕ ಮೊತ್ತಕ್ಕೆ ಲಹರಿ ಸಂಸ್ಥೆ ಈ ಚಿತ್ರದ ಆಡಿಯೋ ಹಕ್ಕುಗಳನ್ನು ಖರೀದಿಸಿದ್ದಾಗಿ ಅಧಿಕೃತ ಮಾಹಿತಿ ಹೊರ ಬಿದ್ದಿದೆ. 

ಈ‌ ‌ಕುರಿತು‌ ಲಹರಿ ಸಂಸ್ಥೆಯೂ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡುವ ಮೂಲಕ, ಹಲವು ಕಾರಣಕ್ಕೆ ಸುದ್ದಿಯಲ್ಲಿರುವ ಬನಾರಸ್ ಚಿತ್ರದ ಆಡಿಯೋ - ವಿಡಿಯೋ ಹಕ್ಕುಗಳನ್ನು ಖರೀದಿಸಿದ್ದಕ್ಕೆ ಹೆಮ್ಮೆ ಇದೆ ಎಂದಿದೆ. 

' ಬನಾರಸ್' ' ಒಲವೇ ಮಂದಾರ ಹಾಗೂ ಬೆಲ್ ಬಾಟಮ್ ಖ್ಯಾತಿಯ ನಿರ್ದೇಶಕ ಜಯತೀರ್ಥ ಡೈರೆಕ್ಟ್ ಮಾಡಿರುವ ಚಿತ್ರ. ಕಾಂಗ್ರೆಸ್ ಶಾಸಕರಾದ ಜಮೀರ್ ಅಹಮ್ಮದ್ ಪುತ್ರ ಝೈದ್ ಖಾನ್ ಈ‌ ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಗ್ರ್ಯಾಂಡ್ ಎಂಟ್ರಿಕೊಡ್ತಿದ್ದಾರೆ. ಅಚ್ಚರಿ ಅಂದರೆ ಝೈದ್ ಡೆಬ್ಯೂ ಚಿತ್ರ ಹೊಸ ದಾಖಲೆ ಬರೆದಿದೆ. 

ಇದಕ್ಕೆ ಮೊದಲ ಕಾರಣ ಹಾಡುಗಳು, ಎರಡನೇ ಕಾರಣ ಲಹರಿ ಸಂಸ್ಥೆ. ಲಹರಿ ಬರೀ ದೊಡ್ಡವರ ಸಿನಿಮಾಗಳಿಗಷ್ಟೇ ಸೀಮಿತವಾಗಿಲ್ಲ, ಸ್ಟಾರ್ ನಟರುಗಳಿಗಷ್ಟೇ ಮಣೆ ಹಾಕಲ್ಲ‌. ಕಲಾವಿದರು ಯಾರೇ ಇರಲಿ, ಸಿನಿಮಾ ಯಾವುದೇ ಇರಲಿ ಸಂಗೀತದಲ್ಲಿ ಹೊಸತನವಿದೆ, ಸಾಹಿತ್ಯ ಕೇಳುಗರನ್ನು‌ ಆಕರ್ಷಿಸುತ್ತದೆ, ಹಾಡುಗಾರನ ಕಂಠದಲ್ಲಿ ನಾವೀನ್ಯತೆಯಿದೆ ಎಂತಾದರೆ ತಾರಾವರ್ಚಸ್ಸು ನೋಡಲ್ಲ. ಬದಲಾಗಿ ಕಲೆಗೆ ಬೆಲೆಕೊಡ್ತಾರೆ, ದಾಖಲೆ‌ ಬೆಲೆ ಕೊಟ್ಟು ಪ್ರೋತ್ಸಾಹಿಸ್ತಾರೆ.ಇದಕ್ಕೆ ಹಲವಾರು ನಿದರ್ಶನಗಳಿವೆ. 

ಸದ್ಯ, ಬನಾರಸ್ ಚಿತ್ರ ತಾಜಾ ಉದಾಹರಣೆ' ಬನಾರಸ್ ಚಿತ್ರ' ಬನಾರಸ್ ಪ್ಯಾನ್ ಇಂಡಿಯಾ ಚಿತ್ರವಾಗಿದ್ದು,ಐದು ಭಾಷೆಯ ಆಡಿಯೋ ‌ಹಾಗೂ ವಿಡಿಯೋ ರೈಟ್ಸ್ ನ ದುಬಾರಿ ಮೊತ್ತ ಕೊಟ್ಟೆ ಲಹರಿ ಹಾಗೂ ಟಿ ಸೀರೀಸ್ ಜಂಟಿಯಾಗಿ ಖರೀದಿಸಿದೆ. ಹಿಂದೆಂದೂ ಕೂಡ‌ ಡೆಬ್ಯೂ ಹೀರೋನ ಸಿನಿಮಾದ ಎಲ್ಲಾ ಭಾಷೆಯ ಆಡಿಯೋ ಹಕ್ಕುಗಳ ರೈಟ್ಸ್ ಪಡೆದುಕೊಂಡಿರಲಿಲ್ಲ. ಇದೇ ಮೊದಲ ಭಾರಿಗೆ ಪ್ರತಿಷ್ಠಿತ ಆಡಿಯೋ ಕಂಪೆನಿಗಳು ಯುವನಟನ ಚೊಚ್ಚಲ ಚಿತ್ರದ ಆಡಿಯೋ ಹಕ್ಕುಗಳನ್ನು ಖರೀದಿ ಮಾಡಿವೆ. ಹೀಗಾಗಿ, ಝೈದ್ ಖಾನ್ ನಟನೆಯ ಬನಾರಸ್ ಸಿನಿಮಾ ಇಂಡಿಯನ್ ಸಿನ್ಮಾ ಇಂಡಸ್ಟ್ರಿಯಲ್ಲೇ ಹೊಸ ದಾಖಲೆ ಬರೆದಂತಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT