ಪವರ್ ಸ್ಟಾರ್ ಪುನೀತ್ 
ಸಿನಿಮಾ ಸುದ್ದಿ

ಜಿಮ್ ಗೆ ಹೋಗಿದ್ದೆ ಪವರ್ ಸ್ಟಾರ್ ಪುನೀತ್ ಜೀವಕ್ಕೆ ಮುಳುವಾಯ್ತೆ?

ಖ್ಯಾತನಟ ಪುನೀತ್ ರಾಜ್ ಕುಮಾರ್ ಅವರಿಗೆ ನಿನ್ನೆ ರಾತ್ರಿಯೇ ಆರೋಗ್ಯದಲ್ಲಿ ವ್ಯತ್ಯಾಸ ಕಾಣಿಸಿಕೊಂಡಿದೆ. ಆದರೂ ಅವರು ಬೆಳಗ್ಗೆ ಜಿಮ್ ಗೆ ಹೋಗಿ ವ್ಯಾಯಾಮ ಮಾಡಿದ್ದಾರೆ. ಅರೋಗ್ಯದಲ್ಲಿ ತುಸು ಏರುಪೇರು ಕಾಣಿಸಿಕೊಂಡಾಗಲೂ...

ಬೆಂಗಳೂರು: ಖ್ಯಾತನಟ ಪುನೀತ್ ರಾಜ್ ಕುಮಾರ್ ಅವರಿಗೆ ನಿನ್ನೆ ರಾತ್ರಿಯೇ ಆರೋಗ್ಯದಲ್ಲಿ ವ್ಯತ್ಯಾಸ ಕಾಣಿಸಿಕೊಂಡಿದೆ. ಆದರೂ ಅವರು ಬೆಳಗ್ಗೆ ಜಿಮ್ ಗೆ ಹೋಗಿ ವ್ಯಾಯಾಮ ಮಾಡಿದ್ದಾರೆ. ಅರೋಗ್ಯದಲ್ಲಿ ತುಸು ಏರುಪೇರು ಕಾಣಿಸಿಕೊಂಡಾಗಲೂ ಜಿಮ್ ನಲ್ಲಿ ವರ್ಕ್ ಔಟ್ ಮಾಡಿದ್ದೇ ತಪ್ಪಾಯ್ತಾ? ಎಂಬ ಪ್ರಶ್ನೆ ಈಗ ಉದ್ಬವಿಸಿದೆ.

ಪುನೀತ್ ರಾಜ್ ಕುಮಾರ್ ಮನೆಯಲ್ಲಿರಲಿ, ಶೂಟಿಂಗ್ ನಲ್ಲಿರಲಿ, ಪ್ರವಾಸದಲ್ಲಿರಲಿ ಎಂದಿಗೂ ವ್ಯಾಯಾಮವನ್ನು ತಪ್ಪಿಸುತ್ತಿರಲಿಲ್ಲ. ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಜಿಮ್ ಗಳು ಬಾಗಿಲು ಹಾಕಿದ್ದರೂ ಕೂಡ ಮನೆಯಲ್ಲಿಯೇ ಇರುವ ಸುಸಜ್ಜಿತ ವ್ಯಾಯಾಮಶಾಲೆಯಲ್ಲಿ ಅವರು ವರ್ಕ್ ಔಟ್ ಮಾಡುತ್ತಿದ್ದರು.

ಪುನೀತ್ ಅವರು ಸಮರಕಲೆಗಳನ್ನು ಕಲಿತವರು. ಇದರಿಂದಾಗಿ ಅವರ ಆರೋಗ್ಯ, ಮೈಕಟ್ಟು ಅತ್ಯುತ್ತಮವಾಗಿತ್ತು. ಸದಾ ಲವಲವಿಕೆಯಿಂದ ಇರುತ್ತಿದ್ದರು. ಇದರ ಗುಟ್ಟು ಅವರು ನಿತ್ಯ ಅನುಸರಿಸುತ್ತಿದ್ದ ವ್ಯಾಯಾಮಶೈಲಿಯೇ ಕಾರಣವಾಗಿತ್ತು. ಇವರು ವ್ಯಾಯಾಮ ಮಾಡುತ್ತಿರುವ ಚಿತ್ರಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಎಂಥವರಿಗೂ ಆರೋಗ್ಯದಲ್ಲಿ ಏರುಪೇರು ಉಂಟಾಗುವುದು ಸಹಜ. ಆದರೆ ಇಂಥ ಸನ್ನಿವೇಶದಲ್ಲಿ ಮುಂಜಾಗ್ರತೆ ಅಗತ್ಯ. ಪುನೀತ್ ಅವರು ಆರೋಗ್ಯದಲ್ಲಿ ತುಸು ಏರುಪೇರು ಕಾಣಿಸಿಕೊಂಡಾಗ ಜಿಮ್ ಗೆ ಹೋಗಬಾರದಾಗಿತ್ತು. ಇಂಥ ಸಂದರ್ಭದಲ್ಲಿ ತೀವ್ರ ವ್ಯಾಯಾಮ ಮಾಡುವುದರಿಂದ ದೇಹದ ಮೇಲೆ ಮತ್ತಷ್ಟೂ ಒತ್ತಡ ಉಂಟಾಗುತ್ತದೆ ಎಂದು ಹೇಳಲಾಗುತ್ತದೆ. ಇದು ಕೂಡ ಹೃದಯಾಘಾತಕ್ಕೆ ಕಾರಣವಾಗಿರಬಹುದು ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

SCROLL FOR NEXT