ಪುನೀತ್ ರಾಜ್ ಕುಮಾರ್ 
ಸಿನಿಮಾ ಸುದ್ದಿ

ಅಪ್ಪು ಅಗಲಿಕೆಗೆ ಸಂತಾಪ ಸೂಚಿಸಿದ ನಟ ಚಿರಂಜೀವಿ, ಮಹೇಶ್​​ ಬಾಬು, ಜೂ. ಎನ್​ಟಿಆರ್, ಪ್ರಕಾಶ್ ರೈ

ಕನ್ನಡಿಗರ ಕಣ್ಮಣಿಯಾಗಿದ್ದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರು ಶುಕ್ರವಾರ ವಿಧಿವಶರಾಗಿದ್ದಾರೆ. ಬಾರದ ಲೋಕಕ್ಕೆ ಪಯಾಣ ಬೆಳೆಸಿರುವ ಅವರಿಗೆ ಖ್ಯಾತ ನಟ ತೆಲಗು ಮೆಗಾಸ್ಟಾರ್​ ಚಿರಂಜೀವಿ...

ಹೈದರಾಬಾದ್​​: ಕನ್ನಡಿಗರ ಕಣ್ಮಣಿಯಾಗಿದ್ದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರು ಶುಕ್ರವಾರ ವಿಧಿವಶರಾಗಿದ್ದಾರೆ. ಬಾರದ ಲೋಕಕ್ಕೆ ಪಯಾಣ ಬೆಳೆಸಿರುವ ಅವರಿಗೆ ಖ್ಯಾತ ನಟ ತೆಲಗು ಮೆಗಾಸ್ಟಾರ್​ ಚಿರಂಜೀವಿ, ನಟ ಮಹೇಶ್​​ ಬಾಬು, ಜೂ. ಎನ್​ಟಿಆರ್​ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಇದು ಆಘಾತಕಾರಿ ಮತ್ತು ಹೃದಯವಿದ್ರಾವಕ ವಿಷಯವಾಗಿದೆ. ಪುನೀತ್ ರಾಜ್ ಕುಮಾರ್ ಬೇಗ ಹೋದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಸ್ಥರಿಗೆ ನನ್ನ ಕಣ್ಣೀರಿನ ಸಂತಾಪ. ಒಟ್ಟಾರೆಯಾಗಿ ಕನ್ನಡ/ಭಾರತೀಯ ಚಲನಚಿತ್ರ ಬಂಧುಗಳಿಗೆ ಒಂದು ದೊಡ್ಡ ನಷ್ಟ. ಈ ದುರಂತದ ನಷ್ಟವನ್ನು ನಿಭಾಯಿಸುವ ಶಕ್ತಿ ಎಲ್ಲರಿಗೂ ದೇವರು ನೀಡಲಿ ಎಂದು ನಟ ಚಿರಂಜೀವಿ ಟ್ವೀಟ್​ ಮಾಡಿದ್ದಾರೆ.

ಪುನೀತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ತಿಳಿದು ತುಂಬಾ ಆಘಾತ ಮತ್ತು ತೀವ್ರ ದುಃಖವಾಗಿದೆ. ನಾನು ಭೇಟಿಯಾದ ಮತ್ತು ಸಂವಾದ ನಡೆಸಿದ ಅತ್ಯಂತ ವಿನಮ್ರ ವ್ಯಕ್ತಿಗಳಲ್ಲಿ ಇವರು ಒಬ್ಬರು. ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ಸಂತಾಪಗಳು ಎಂದು ನಟ ಮಹೇಶ್​ ಬಾಬು ಟ್ವೀಟ್ ಮಾಡಿದ್ದಾರೆ.

ಹೃದಯ ಹೊಡೆದು ಚೂರಾಗಿದೆ, ನೀವು ಇಷ್ಟು ಬೇಗ ಹೋಗಿದ್ದೀರಿ ಎಂದು ನಂಬಲಾಗುತ್ತಿಲ್ಲ ಎಂದು ಜೂ. ಎನ್​ಟಿಆರ್ ಅವರು ಟ್ವೀಟ್ ಮಾಡಿದ್ದಾರೆ.

ಇನ್ನೂ ಸಂಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡುತ್ತಲೇ ರಿಯಲ್‌ ಹಿರೋ ಎನಿಸಿಕೊಂಡಿರುವ ಬಾಲಿವುಡ್ ನಟ ಸೋನು ಸೂದ್ ಅವರು, 'ಹೃದಯ ವಿದ್ರಾವಕ, ಯಾವಾಗಲೂ ನಿನ್ನನ್ನು ಮಿಸ್ ಮಾಡಿಕೊಳ್ಳುತ್ತೇನೆ ನನ್ನ ಸಹೋದರ' ಎಂದು ಟ್ವೀಟ್ ಮಾಡಿದ್ದಾರೆ.

ಬಹುಭಾಷಾ ನಟ ಪ್ರಕಾಶ್ ರೈ ಕೂಡ ಪನೀತ್ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದು, 'Ahh ನೋ .. ಬೇಗ ಹೋದೆ ನನ್ನ ಪ್ರೀತಿಯ ಅಪ್ಪು. ನಾನು ಛಿದ್ರಗೊಂಡಿದ್ದೇನೆ .. ಹೃದಯ ಒಡೆದಿದೆ .. ಇದು ಸರಿಯಲ್ಲ' ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT