ಪುನೀತ್ ರಾಜ್ ಕುಮಾರ್ 
ಸಿನಿಮಾ ಸುದ್ದಿ

ಅಪ್ಪು ಬಗ್ಗೆ ಭಾವನಾತ್ಮಕ ವಿಷಯ ಹಂಚಿಕೊಂಡು, ಪುನೀತನಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಎಂದ ಜಗ್ಗೇಶ್​

ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ಜೊತೆಗಿನ ದಿನಗಳನ್ನು ಎಲ್ಲಾ ನಟರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಅವರನ್ನು ಸ್ಮರಿಸುತ್ತಿದ್ದಾರೆ. ಇದರ ಬೆನ್ನಲ್ಲೇ...

ಬೆಂಗಳೂರು: ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ಜೊತೆಗಿನ ದಿನಗಳನ್ನು ಎಲ್ಲಾ ನಟರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಅವರನ್ನು ಸ್ಮರಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸಕ್ರಿಯರಾಗಿರುವ ನಟ ಜಗ್ಗೇಶ್​ ಕೂಡ ಭಾವನಾತ್ಮಕ ನೆನಪೊಂದನ್ನು ಹಂಚಿಕೊಂಡಿದ್ದಾರೆ.

ನನ್ನ ಪುಟ್ಟಗ್ರಾಮಕ್ಕೆ ನೀ ಬಂದು ಸಂಭ್ರಮಿಸಿದ ದಿನ ಹೇಗೆ ಮರೆಯಲಿ? ಮಾತು ಬಾರದ ನನ್ನ ತಮ್ಮನ ಕಂಡು ನೀ ಮರುಗಿದ್ದು ನೆನೆದು ನನ್ನ ಹೃದಯ ಛಿದ್ರವಾಗಿದೆ. ನೀ ಇಲ್ಲಾ ಎಂದರೆ ನಂಬಲಾಗುತ್ತಿಲ್ಲಾ. ಕರೆ ಮಾಡಿದರೆ, ‘ಅಣ್ಣ’ ಎಂದು ಕರೆ ಸ್ವೀಕರಿಸುವೆ ಎನ್ನುವಂತೆ ಭಾಸವಾಗುತ್ತಿದೆ,’ನೀ ಇಲ್ಲಾ ಎಂದರೆ ಮನ ನಂಬುತ್ತಿಲ್ಲಾ. ಎಂಥ ಸಾವು ಇದು. ಬದುಕಲ್ಲಿ ನಾನು ಪೂಜೆಯನ್ನೇ ಮಾಡದ ದಿನವಿದು’ ಎಂದು ಬರೆದುಕೊಂಡಿದ್ದಾರೆ. 

ರಾಜ್ಯೋತ್ಸವ ಪ್ರಶಸ್ತಿಯನ್ನು ನಮ್ಮ ಪುನೀತನಿಗೆ ಮರಣೋತ್ತರ ಪ್ರಶಸ್ತಿಯಾಗಿ ನೀಡಿ ಮಾನ್ಯ ಮುಖ್ಯಮಂತ್ರಿಗಳೆ. ಈ ಮೂಲಕ ಕನ್ನಡಿಗರ ಪ್ರೀತಿ ಗೆದ್ದ ರಾಜಣ್ಣನ ಮಗನ ಆತ್ಮಕ್ಕೆ ಗೌರವಿಸಿದಂತೆ ಆಗುತ್ತದೆ ಎಂಬುದು ನನ್ನ ವಿನಂತಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT