ಪ್ರುಭುದೇವಾ, ಬಾಲಕೃಷ್ಣ, ಶಿವಣ್ಣ 
ಸಿನಿಮಾ ಸುದ್ದಿ

ಪುನೀತ್  ಪಾರ್ಥಿವ ಶರೀರ ನೋಡಿ ಕಣ್ಣೀರು ಹಾಕಿದ ಸೂಪರ್ ಸ್ಟಾರ್ ಬಾಲಕೃಷ್ಣ, ಪ್ರಭುದೇವಾ

ತೆಲುಗು ಚಿತ್ರರಂಗದ ದಿಗ್ಗಜ ನಟರಾದ ನಂದಮೂರಿ ಬಾಲಕೃಷ್ಣ, ಪ್ರಭುದೇವಾ ಅವರ ಸಹೋದರ ಪ್ರಸಾದ್, ರಾಣಾ ದಗ್ಗುಬಾಟಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತಿತರರು ನಟ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. 

ಬೆಂಗಳೂರು: ಕಂಠೀರವ ಸ್ಟೇಡಿಯಂನಲ್ಲಿ  ಸ್ಯಾಂಡಲ್ ವುಡ್ ಸೇರಿ ಭಾರತೀಯ ಚಿತ್ರರಂಗದ  ವಿವಿಧ ಗಣ್ಯರು, ರಾಜಕೀಯ ನಾಯಕರು ಸೇರಿದಂತೆ ವಿವಿಧ ಕ್ಷೇತ್ರಗಳ ಪುನೀತ್ ಅವರ ಸ್ನೇಹಿತರು, ಅಭಿಮಾನಿಗಳು ಕ್ರೀಡಾಂಗಣಕ್ಕೆ ಆಗಮಿಸಿದ ಅಗಲಿದ ನಟನ ದರ್ಶನ ಪಡೆದು ಅಂತಿಮ ನಮನ ಸಲ್ಲಿಸುತ್ತಿದ್ದಾರೆ.

ತೆಲುಗು ಚಿತ್ರರಂಗದ ದಿಗ್ಗಜ ನಟರಾದ ನಂದಮೂರಿ ಬಾಲಕೃಷ್ಣ, ಪ್ರಭುದೇವಾ ಅವರ ಸಹೋದರ ಪ್ರಸಾದ್, ರಾಣಾ ದಗ್ಗುಬಾಟಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತಿತರರು ನಟ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. 

ಶಿವಣ್ಣರನ್ನು ತಬ್ಬಿಕೊಂಡು ಗೋಳಾಡಿದ ನಂದಬಾರಿ ಬಾಲಕೃಷ್ಣ, ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿಗೆ ಸಾಂತ್ವನ ಹೇಳಿದರು. ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಒಂದೇ ತಾಯಿ ಮಕ್ಕಳಲ್ಲಿದ್ದರೂ ಸಹೋದರರಂತೆ ಇದ್ದೇವು.  ದೇವರು ಏಕೆ ಇಂತಹ ಅನ್ಯಾಯ ಮಾಡಿದ ಅನಿಸುತ್ತಿದೆ.  ಪುನೀತ್ ಕಲಾ ಸೇವೆಗೆ ಜೊತೆಗೆ ಸಮಾಜ ಸೇವೆ ಮಾಡಿದ್ದಾರೆ, ಕುಣ್ಣು ಕೂಡಾ ದಾನ ಮಾಡಿದ್ದಾರೆ. ಲೇಪಾಕ್ಷಿಗೆ ಹಲವು ಬಾರಿ ಬಂದಿದ್ದರು. ಯಾವುದೇ ಕಾರ್ಯಕ್ರಮಕ್ಕೂ ಆಹ್ವಾನಿಸುತ್ತಿದ್ದರೂ ಬರುತ್ತಿದ್ದರು. ಇಂದು ಅವರು ನಮ್ಮನ್ನು ಆಗಲಿರಬಹುದು. ಆದರೆ,  ಮನಸ್ಸಿನಲ್ಲಿ ಶಾಶ್ವತವಾಗಿ  ಇರುತ್ತಾರೆ ಎಂದು ಕಂಬನಿ ಮಿಡಿದರು.

ಪುನೀತ್ ನನ್ನನ್ನು ಮಾಮ ಎಂದು ಕರೆಯುತ್ತಿದ್ದರು. ಮೈಸೂರಿನಲ್ಲಿ ರಾಜ ಕುಮಾರ್ ಚಿತ್ರವನ್ನು ನೋಡಿದ್ದೆ, ಅವರ ನಿಧನದಿಂದ ದೇಶ, ಹಾಗೂ ನಾಡಿಗೆ ಅಪಾರ ನೋವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT