ಸಿನಿಮಾ ಸುದ್ದಿ

ಪುನೀತ್ ನಿಧನದಿಂದ ದುಃಖವಾಗಿದೆ: ಕನ್ನಡದಲ್ಲಿ ಅಮಿತ್ ಶಾ ಸಂತಾಪ

Shilpa D

ನವದೆಹಲಿ: ಪುನೀತ್ ರಾಜ್‌ಕುಮಾರ್ ಅವರ ಅಕಾಲಿಕ ನಿಧನದಿಂದ ದುಃಖವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕಂಬನಿ ಮಿಡಿದಿದ್ದಾರೆ.

ಕನ್ನಡದಲ್ಲಿ ಟ್ವೀಟ್‌ ಮಾಡಿರುವ ಅವರು, 'ಪ್ರತಿಭಾನ್ವಿತ ನಟ ಪುನೀತ್ ರಾಜ್‌ಕುಮಾರ್ ಅವರ ಅಕಾಲಿಕ ನಿಧನದಿಂದ ದುಃಖವಾಗಿದೆ. ತಮ್ಮ ಬಹುಮುಖ ನಟನೆಯಿಂದ ಲಕ್ಷಾಂತರ ಹೃದಯಗಳನ್ನು ಗೆದ್ದ ಪುನೀತ್ ರಾಜ್‌ಕುಮಾರ್ ಅವರು ಕನ್ನಡ ಚಿತ್ರರಂಗಕ್ಕೆ ಹಲವು ಅಮೋಘ ನೆನಪುಗಳನ್ನು ನೀಡಿದ್ದಾರೆ. ಅವರ ಕುಟುಂಬ ಮತ್ತು ಅಪಾರ ಅಭಿಮಾನಿ ಬಳಗಕ್ಕೆ ನನ್ನ ಸಂತಾಪಗಳು' ಎಂದು ಹೇಳಿದ್ದಾರೆ.

ಪ್ರತಿಭಾನ್ವಿತ ನಟ ಪುನೀತ್ ರಾಜ್‌ಕುಮಾರ್ ಅವರ ಅಕಾಲಿಕ ನಿಧನದಿಂದ ದುಃಖವಾಗಿದೆ. ತಮ್ಮ ಬಹುಮುಖ ನಟನೆಯಿಂದ ಲಕ್ಷಾಂತರ ಹೃದಯಗಳನ್ನು ಗೆದ್ದ ಪುನೀತ್ ರಾಜ್‌ಕುಮಾರ್ ಅವರು ಕನ್ನಡ ಚಿತ್ರರಂಗಕ್ಕೆ ಹಲವು ಅಮೋಘ ನೆನಪುಗಳನ್ನು ನೀಡಿದ್ದಾರೆ. ಅವರ ಕುಟುಂಬ ಮತ್ತು ಅಪಾರ ಅಭಿಮಾನಿ ಬಳಗಕ್ಕೆ ನನ್ನ ಸಂತಾಪಗಳು ಎಂದು ಟ್ವೀಟ್ ಮಾಡಿದ್ದಾರೆ.

SCROLL FOR NEXT