ನಟ ಧ್ರುವನ್ ಮತ್ತು ನಟಿ ಸೋನಾಲ್ 
ಸಿನಿಮಾ ಸುದ್ದಿ

'ಭಗವಾನ್ ಶ್ರೀ ಕೃಷ್ಣ ಪರಮಾತ್ಮ' ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯ

ನಟ ಧ್ರುವನ್ ಅವರು ಈ ಹಿಂದೆ ಐರಾವತ ಮತ್ತು ತಾರಕ್  ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಇದೀಗ ಭಗವಾನ್ ಶ್ರೀಕೃಷ್ಣ ಪರಮಾತ್ಮ ಚಿತ್ರದ ಮೂಲಕ ಪಾದಾರ್ಪಣೆ ಮಾಡಲು ಹೊರಟಿರುವ ನಟ ಧ್ರುವನ್ ಬೆಂಗಳೂರಿನಲ್ಲಿ ಚಿತ್ರದ ಮೊದಲ ಶೆಡ್ಯೂಲ್ ಅನ್ನು ಪೂರ್ಣಗೊಳಿಸಿದ್ದಾರೆ. 

ಧ್ರುವನ್ ನಟನೆಯ ಚೊಚ್ಚಲ ಚಿತ್ರ ಭಗವಾನ್ ಶ್ರೀ ಕೃಷ್ಣ ಪರಮಾತ್ಮ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದೆ. 

ನಟ ಧ್ರುವನ್ ಅವರು ಈ ಹಿಂದೆ ಐರಾವತ ಮತ್ತು ತಾರಕ್  ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಇದೀಗ ಭಗವಾನ್ ಶ್ರೀಕೃಷ್ಣ ಪರಮಾತ್ಮ ಚಿತ್ರದ ಮೂಲಕ ಪಾದಾರ್ಪಣೆ ಮಾಡಲು ಹೊರಟಿರುವ ನಟ ಧ್ರುವನ್ ಬೆಂಗಳೂರಿನಲ್ಲಿ ಚಿತ್ರದ ಮೊದಲ ಶೆಡ್ಯೂಲ್ ಅನ್ನು ಪೂರ್ಣಗೊಳಿಸಿದ್ದಾರೆ. 

"ನಾವು 10 ದಿನಗಳ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದೇವೆ, ಇದು ಉತ್ತಮ ಅನುಭವವಾಗಿದೆ" ಎಂದು ಧ್ರುವನ್ ಹೇಳುತ್ತಾರೆ.

ಈ ಹಿಂದೆ ಕಥಾ ವಿಚಿತ್ರ ಮತ್ತು ಚಿತ್ರದಲ್ಲಿ ನಿರ್ದೇಶನ ಮಾಡಿದ್ದ ಅನುಪ್ ಆಂಟನಿ ಅವರ ಮೂರನೇ ನಿರ್ದೇಶನದ ಚಿತ್ರ ಇದು. ಭಾರತ್ ಸಿನಿ ಕ್ರಿಯೇಷನ್ಸ್ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಭಗವಾನ್ ಶ್ರೀ ಕೃಷ್ಣ ಪರಮಾತ್ಮ ಚಿತ್ರದಲ್ಲಿ ರಾಬರ್ಟ್-ಫೇಮ್ ಸೋನಾಲ್ ಮೊಂಟೆರೋ ನಟಿಸಿದ್ದಾರೆ. ಚಿತ್ರದ ಕೆಲವು ಸ್ಟಿಲ್‌ಗಳನ್ನು ಅನುಪ್ ಹಂಚಿಕೊಂಡಕೊಂಡಿದ್ದಾರೆ.

ಉಳಿದಂತೆ ಶೋಭರಾಜ್, ಯಶ್ ಶೆಟ್ಟಿ, ಯಶಸ್ ಸೂರ್ಯ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್, ಸ್ವಾತಿ ಮತ್ತು ಬಾಲರಾಜವಾಡಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.  ನಮ್ಮ ಮುಂದಿನ ವೇಳಾಪಟ್ಟಿ ಮೈಸೂರಿನಲ್ಲಿ ನಡೆಯಲಿದೆ,

"ಭಗವಾನ್ ಶ್ರೀ ಕೃಷ್ಣ ಪರಮಾತ್ಮರ  ಲೋಕಲ್ ಕಥೆಯಾಗಿದ್ದು, ನಮ್ಮ ಸುತ್ತಮುತ್ತಲೇ ನಡೆಯುವ ಕಥೆಯಾಗಿದೆ. ಲೋಕಲ್ ಹುಡುಗನ ಪಾತ್ರದಲ್ಲಿ ಧ್ರುವನ್ ನಟಿಸಿದ್ದು, ಸೋನಾಲ್ ಕಾಲೇಜು ವಿದ್ಯಾರ್ಥಿನಿಯಾಗಿ ನಟಿಸಿದ್ದಾರೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಜೇಮ್ಸ್ ನಿರ್ದೇಶಕ ಚೇತನ್ ಕುಮಾರ್ ಚಿತ್ರಕ್ಕೆ ಸಂಭಾಷಣೆ ಬರೆದಿದ್ದು, ಅರ್ಜುನ್ ಜನ್ಯ ಸಂಗೀತ ನೀಡಲಿದ್ದಾರೆ. ಛಾಯಾಗ್ರಹಣ ಮತ್ತು ಸಂಕಲನವನ್ನು ಕ್ರಮವಾಗಿ ಅರುಣ್ ಸುರೇಶ್ ಮತ್ತು ಮನು ಗೌಡ ನಿರ್ವಹಿಸಲಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

Street Dog attack: ಬೀದಿ ನಾಯಿ ಸಮಸ್ಯೆಗೆ ಉಪಾಯ ಕಂಡುಕೊಂಡ ಗದಗ ಜನತೆ, ಕಾಟದಿಂದ ಮುಕ್ತಿಗೆ ಬಣ್ಣ ನೀರಿನ ಪ್ರಯೋಗ..!

ನಮ್ಮವರು ಬೇರೆ ಧರ್ಮದವರ ಪ್ರಾರ್ಥನೆ ಸ್ಥಳಗಳಿಗೆ ಹೋಗುವುದಿಲ್ಲವೇ? ಯದುವೀರ್ ಬಿಜೆಪಿ ಜೊತೆ ಸೇರಿ ಇತಿಹಾಸ ಮರೆತಿದ್ದಾರೆ: DKS

SCROLL FOR NEXT