ಶುಗರ್ ಫ್ಯಾಕ್ಟರಿ ಸ್ಟಿಲ್ 
ಸಿನಿಮಾ ಸುದ್ದಿ

ಡಾರ್ಲಿಂಗ್ ಕೃಷ್ಣ 'ಶುಗರ್ ಫ್ಯಾಕ್ಟರಿ' ಯಲ್ಲಿ ಬಾಬಾ ಸೆಹಗಲ್ 'ಹ್ಯಾಂಗೋವರ್'!

ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ, ದೀಪಕ್ ಅರಸ್ ನಿರ್ದೇಶನದ “ಶುಗರ್ ಫ್ಯಾಕ್ಟರಿ” ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದೆ. 7 ವರ್ಷಗಳ ನಂತರ ಬಾಬಾ ಸೆಹಗಲ್ ಮತ್ತೆ ಕನ್ನಡದಲ್ಲಿ ಹಾಡಿದ್ದಾರೆ.

ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ, ದೀಪಕ್ ಅರಸ್ ನಿರ್ದೇಶನದ “ಶುಗರ್ ಫ್ಯಾಕ್ಟರಿ” ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದೆ. 7 ವರ್ಷಗಳ ನಂತರ ಬಾಬಾ ಸೆಹಗಲ್ ಮತ್ತೆ ಕನ್ನಡದಲ್ಲಿ ಹಾಡಿದ್ದಾರೆ.

ಜೇಮ್ಸ್ ನಿರ್ದೇಶಕ ಚೇತನ್ ಅವರು ಬರೆದಿರುವ ಈ ಹಾಡಿಗೆ ಖ್ಯಾತ ಗಾಯಕ ಬಾಬಾ ಸೆಹಗಲ್ ಧ್ವನಿಯಾಗಿದ್ದಾರೆ. ಕಫಿರ್ ರಫಿ ಸಂಗೀತ ನೀಡಿದ್ದಾರೆ. ಡಾರ್ಲಿಂಗ್ ಕೃಷ್ಣ ಅವರೊಡನೆ ಈ‌ ಹಾಡಿಗೆ ಸೋನಾಲ್ ಮಾಂಟೆರೊ ಹೆಜ್ಜೆ ಹಾಕಿದ್ದಾರೆ. ಗಜಕೇಸರಿ ಸಿನಿಮಾದ ಮನೇಲಿ ಅಪ್ಪ ಹಾಡಿಗೆ ಬಾಬಾ ಸೆಹಗಲ್ ಧ್ವನಿಯಾಗಿದ್ದರು.

ಸಿನಿಮಾದಲ್ಲಿ 7 ಹಾಡುಗಳಿದ್ದು, ಹ್ಯಾಂಗೋವರ್ ಸಾಂಗ್ ಅತ್ಯದ್ಭುತವಾಗಿದ್ದು, ಈ ಹಾಡನ್ನು ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಮಾಡಿದ್ದಾರೆ ಎಂದು ನಿರ್ದೇಶಕ ದೀಪಕ್ ಅರಸ್ ಹೇಳಿದ್ದಾರೆ. 

ಹೈದರಾಬಾದ್ ನಲ್ಲಿ ಹಾಡಿನ ಶೂಟಿಂಗ್ ನಡೆದಿದೆ,  ಧನಂಜಯ್ ನೃತ್ಯ ನಿರ್ದೇಶನದ ಹಾಡಿಗೆ ಕೃಷ್ಣ ಮತ್ತು ಸೋನಾಲ್ ಮಾಂಟೆರಿಯೋ ಹೆಜ್ಜೆ ಹಾಕಿದ್ದಾರೆ. ಸೆಪ್ಟೆಂಬರ್ 10 ಗಣೇಶ ಚತುರ್ಥಿಯ ಶುಭದಿನದಂದು “ಶುಗರ್ ಫ್ಯಾಕ್ಟರಿ” ಚಿತ್ರದ ಲಿರಿಕಲ್ ಹಾಡು ಬಿಡುಗಡೆಯಾಗಲಿದೆ.  ಅದಕ್ಕೂ ಮುನ್ನ ಸಾಂಗ್ ಟೀಸರ್‌ ಬರಲಿದೆ.

ಹಾಸ್ಯ ಮನರಂಜನೆ ಸಿನಿಮಾವನ್ನು ಬಾಲಮಣಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಗಿರೀಶ್ ಆರ್ ನಿರ್ಮಿಸಿದ್ದಾರೆ ಮತ್ತು ಚಿತ್ರದಲ್ಲಿ ಮೆಹಬೂಬ ನಟ ಶಶಿಕುಮಾರ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅದ್ವಿತಿ ಶೆಟ್ಟಿ ಮತ್ತು ಶಿಲ್ಪಾ ಶೆಟ್ಟಿ ನಟಿಸಿದ್ದಾರೆ. ಶುಗರ್ ಫ್ಯಾಕ್ಟರಿ ಕಥೆಯನ್ನು ಬರೆದಿರುವ ನಿರ್ದೇಶಕ ದೀಪಕ್ ಅರಸ್, ಶೇ.80 ರಷ್ಟು ಚಿತ್ರೀಕರಣವನ್ನು ಮುಗಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಂಕಿತ ದಾಳಿಕೋರ 'ನರಕ ದೇಶ' ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ: ಸಿಎಂ ಆಪ್ತ ಗುಂಪಿನಿಂದ ಸ್ಪೋಟಕ ಸಂದೇಶ, ಡಾ. ಜಿ. ಪರಮೇಶ್ವರ್ ಹೇಳಿದ್ದೇನು?

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

SCROLL FOR NEXT