ಅನುಶ್ರೀ 
ಸಿನಿಮಾ ಸುದ್ದಿ

ಡ್ರಗ್ಸ್ ಪ್ರಕರಣದ ಚಾರ್ಜ್​ಶೀಟ್​ನಲ್ಲಿ ಅನುಶ್ರೀ ಹೆಸರಿಲ್ಲ, ಕಿಶೋರ್ ಹೇಳಿಕೆಯಲ್ಲಷ್ಟೇ ಇದೆ: ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್

ಚಾರ್ಜ್​ಶೀಟ್​ನಲ್ಲಿ ಅನುಶ್ರೀ ಹೆಸರು ಉಲ್ಲೇಖವಾಗಿಲ್ಲ. ಆದರೆ, ಕಿಶೋರ್ ಅಮನ್​ ಹೇಳಿಕೆಯಲ್ಲಷ್ಟೇ ಅನುಶ್ರೀ ಹೆಸರಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು.

ಮಂಗಳೂರು: ಚಾರ್ಜ್​ಶೀಟ್​ನಲ್ಲಿ ಅನುಶ್ರೀ ಹೆಸರು ಉಲ್ಲೇಖವಾಗಿಲ್ಲ. ಆದರೆ, ಕಿಶೋರ್ ಅಮನ್​ ಹೇಳಿಕೆಯಲ್ಲಷ್ಟೇ ಅನುಶ್ರೀ ಹೆಸರಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾರ್ಜ್​ಶೀಟ್​ನಲ್ಲಿ ಆರೋಪಗಳಿದ್ದರೆ ವಕೀಲರ ಮೂಲಕ ಕೋರ್ಟ್​ಗೆ ತಿಳಿಸಬಹುದು. ಆದರೆ, ಚಾರ್ಜ್​ಶೀಟ್​ನಲ್ಲಿ ಅನುಶ್ರೀ ಹೆಸರು ಉಲ್ಲೇಖವಾಗಿಲ್ಲ. ಕಿಶೋರ್ ಹೇಳಿಕೆಯಲ್ಲಷ್ಟೇ ಅನುಶ್ರೀ ಹೆಸರಿದೆ. ಕಿಶೋರ್ ​ನನ್ನು ಮತ್ತೆ ಕರೆದು ವಿಚಾರಣೆ ನಡೆಸುವ ಅಗತ್ಯವಿಲ್ಲ. ಪ್ರಕರಣದ ಸಂಪೂರ್ಣ ತನಿಖೆ ಮಾಡಿ ಚಾರ್ಜ್​ಶೀಟ್​ ಸಲ್ಲಿಕೆ‌ ಮಾಡಿದ್ದೇವೆ ಎಂದರು.

ಅನುಶ್ರೀ

ನಾನು ಮಂಗಳೂರು ಆಯುಕ್ತನಾಗಿ ಅಧಿಕಾರ ಸ್ವೀಕರಿಸಿ 8 ತಿಂಗಳಾಗಿದೆ ಅಷ್ಟೇ. 9 ತಿಂಗಳ‌ ಹಿಂದೆಯೇ ಚಾರ್ಜ್​ಶೀಟ್​ ಸಲ್ಲಿಕೆಯಾಗಿದೆ. ಈಗ ಏಕೆ ಈ ವಿಚಾರ ಸುದ್ದಿಯಾಯಿತು ಗೊತ್ತಿಲ್ಲ. ಅನುಶ್ರೀ ಮೇಲೆ ಬಂದ ಆರೋಪಕ್ಕೆ ಪೂರಕ ಸಾಕ್ಷಿಗಳು ಲಭ್ಯವಾಗಿಲ್ಲ ಎಂದರು.

6 ಆರೋಪಿಗಳ ಮೇಲೆ ಅಂತಿಮ ವರದಿ ಸಲ್ಲಿಸಿದ್ದೇವೆ. ಇದರಲ್ಲಿ ಐದು ಆರೋಪಿಗಳಿಗೆ ಜಾಮೀನು ಲಭಿಸಿದೆ. ಓರ್ವ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ. 2020ರ ಸೆಪ್ಟಂಬರ್​ 19ರಂದು ಡ್ರಗ್ಸ್​ ಪ್ರಕರಣ ದಾಖಲಾಗಿತ್ತು. ಡಿಸೆಂಬರ್​ನಲ್ಲೇ ಅಂತಿಮ ವರದಿ ಸಲ್ಲಿಸಿದ್ದೇವೆ ಎಂದರು.

ಅನುಶ್ರೀ

ಚಾರ್ಜ್‌ಶೀಟ್‌ನಲ್ಲಿ ದಾಖಲಿಸಿದ ಅಂಶಗಳು ನನ್ನ ಹೇಳಿಕೆಯಲ್ಲಎಂದಿರುವ ಪ್ರಕರಣದ ಎ2 ಆರೋಪಿ ಕಿಶೋರ್ ಅಮನ್ ಶೆಟ್ಟಿ ಕುರಿತಂತೆ ಪ್ರತಿಕ್ರಿಯಿಸಿದ ಆಯುಕ್ತರು, ಚಾರ್ಜ್‌ಶೀಟ್‌ನಲ್ಲಿನ ಅಂಶಗಳನ್ನು ಓದಿ ಹೇಳಿಸಿ ನಂತರ ವ್ಯಕ್ತಿಯ ಸಹಿ ಪಡೆಯಲಾಗುತ್ತದೆ. ಪ್ರತಿಯೊಂದು ಪ್ರಕರಣದಲ್ಲಿ ನಡೆಯುವ ಸಾಮಾನ್ಯ ಪ್ರಕ್ರಿಯೆ ಇದಾಗಿದ್ದು, ಹೇಳಿಕೆ ಅವರದ್ದಲ್ಲ ಎಂದಾಗಿದ್ದರೆ, ಕಿಶೋರ್ ಶೆಟ್ಟಿ ಅಂದು ನ್ಯಾಯಾಲಯದಲ್ಲೇ ಹೇಳಬಹುದಿತ್ತು. ಆದರೆ, ಈಗ ಆ ವ್ಯಕ್ತಿ ತಾನು ಹೇಳಿಕೆ ನೀಡಿಲ್ಲ ಎಂಬುದು ತಪ್ಪು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT