ಉಪೇಂದ್ರ 
ಸಿನಿಮಾ ಸುದ್ದಿ

ಕೋವಿಡ್ ಪರಿಸ್ಥಿತಿಗೆ ಅನುಗುಣವಾಗಿ ಚಿತ್ರ ನಿರ್ದೇಶನ: ನಟ ಉಪೇಂದ್ರ

ಸಿನಿಮಾ ಚಿತ್ರೀಕರಣ ಹಾಗೂ ರಾಜಕೀಯ ಚಟುವಟಿಕೆಗಳಲ್ಲಿ ಕಾರ್ಯನಿರತರಾಗಿರುವ ಸೂಪರ್ ಸ್ಟಾರ್ ಉಪೇಂದ್ರ ಅವರು ಮತ್ತೆ ನಿರ್ದೇಶನಕ್ಕಿಳಿಯಲು ಸಜ್ಜಾಗುತ್ತಿದ್ದಾರೆ.

ಸಿನಿಮಾ ಚಿತ್ರೀಕರಣ ಹಾಗೂ ರಾಜಕೀಯ ಚಟುವಟಿಕೆಗಳಲ್ಲಿ ಕಾರ್ಯನಿರತರಾಗಿರುವ ಸೂಪರ್ ಸ್ಟಾರ್ ಉಪೇಂದ್ರ ಅವರು ಮತ್ತೆ ನಿರ್ದೇಶನಕ್ಕಿಳಿಯಲು ಸಜ್ಜಾಗುತ್ತಿದ್ದಾರೆ. 

ಲಗಾಮ್ ಚಿತ್ರೀಕರಣದಲ್ಲಿ ಬಿಝಿಯಾಗಿದ್ದ ಉಪೇಂದ್ರ ಅವರು, ಇದೀಗ ಒಂದು ಸಣ್ಣ ವಿರಾಮ ತೆಗೆದುಕೊಂಡಿದ್ದು, ಚಿತ್ರ ನಿರ್ದೇಶನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಆದರೆ, ಕೋವಿಡ್ ಪರಿಸ್ಥಿತಿಗೆ ಅನುಗುಣವಾಗಿ ನಿರ್ದೇಶನಕ್ಕಿಳಿಯುವುದಾಗಿ ನಟ ಉಪೇಂದ್ರ ಅವರು ಹೇಳಿದ್ದಾರೆ. 

ಕಳೆದ ವರ್ಷವೇ ಸಿನಿಮಾವೊಂದನ್ನು ನಿರ್ದೇಶಿಸಲು ನಿರ್ಧರಿಸಿದ್ದೆ. ಈ ವರ್ಷ ಕೂಡ ಪ್ರಯತ್ನ ಮಾಡಿದ್ದೆ. ಆದರೆ, ಪ್ರಸ್ತುತದ ಕೋವಿಡ್ ಪರಿಸ್ಥಿತಿಗಳು ಅದಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಚಿತ್ರರಂಗ ಮರಳಿ ಮೊದಲಿನಂತಾಗಲು ಕಾಯುತ್ತಿದ್ದೇನೆ. ಬಳಿಕ ಮುಂದಿನ ನಿರ್ದೇಶಿತ ಚಿತ್ರ ಕುರಿತು ಮಾಹಿತಿ ನೀಡುತ್ತೇನೆ. ನವೆಂಬರ್ ವೇಳೆಗೆ ಸ್ಪಷ್ಟ ಚಿತ್ರಣ ದೊರೆಯುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. 

ಸೆಪ್ಟೆಂಬರ್ 18 ರಂದು ಉಪೇಂದ್ರ ಅವರ ಹುಟ್ಟುಹಬ್ಬವಿದ್ದು, ಈ ಸಂದರ್ಭದಲ್ಲಿ ಸೂಪರ್ ಸ್ಟಾರ್ ಉಪ್ಪಿ, ನಗರದಿಂದ ಹೊರ ಹೋಗಿ ಕುಟುಂಬದೊಂದಿಗೆ ಕಾಲ ಕಳೆಯಲು ನಿರ್ಧರಿಸಿದ್ದಾರೆ. ಪ್ರಸ್ತುತ ಉಪೇಂದ್ರ ಅವರು ಲಗಾಮ್ ಹಾಗೂ ಕಬ್ಜಾ ಚಿತ್ರಗಳ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. 

ಕಬ್ಜಾ ಚಿತ್ರದ ಚಿತ್ರೀಕರಣ ಇದೇ ಸೆಪ್ಟೆಂಬರ್ 20 ರಿಂದ ಮರಳಿ ಆರಂಭಗೊಳ್ಳಲಿದ್ದು, ಮುಂದಿನ ವಾರದಿಂದ ಚಿತ್ರೀಕರಣದಲ್ಲಿ ಭಾಗಿಯಾಗುತ್ತಿದ್ದೇನೆಂದು ಉಪೇಂದ್ರ ಅವರು ಮಾಹಿತಿ ನೀಡಿದ್ದಾರೆ. 

ಎರಡೂ ಚಿತ್ರಗಳ ಚಿತ್ರೀಕರಣದಲ್ಲಿ ಮುಂದಿನ ಕೆಲವು ತಿಂಗಳು ಕಾಲ ತೊಡಗಿಕೊಳ್ಳುತ್ತಿದ್ದೇನೆ. ಇತರೆ ಚಿತ್ರಗಳ ಕುರಿತು ಚರ್ಚೆಗಳು ನಡೆಯುತ್ತಿವೆ. ಚಿತ್ರೀಕರಣ ಆರಂಭವಾಗುವ ಸಂದರ್ಭದಲ್ಲಿ ಈ ಕುರಿತು ಮಾಹಿತಿ ನೀಡುತ್ತೇನೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT