ಗುರು ಕಶ್ಯಪ್(ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

ಸ್ಯಾಂಡಲ್ ವುಡ್ ನ ಯುವ ಸಂಭಾಷಣೆಕಾರ ಗುರು ಕಶ್ಯಪ್ ನಿಧನ; ಕಲಾವಿದರ ಕಂಬನಿ

ಸ್ಯಾಂಡಲ್ ವುಡ್ ನ ಮತ್ತೊಬ್ಬ ಜನಪ್ರಿಯ ಸಂಭಾಷಣೆ ಬರಹಗಾರ ಗುರು ಕಶ್ಯಪ್ ನಿಧನರಾಗಿದ್ದಾರೆ. ಹೃದಯಾಘಾತದಿಂದ ಕಳೆದ ರಾತ್ರಿ ಗುರು ಕಶ್ಯಪ್ ಮೃತಪಟ್ಟಿದ್ದಾರೆ.

ಬೆಂಗಳೂರು: ಸ್ಯಾಂಡಲ್ ವುಡ್ ನ ಮತ್ತೊಬ್ಬ ಜನಪ್ರಿಯ ಸಂಭಾಷಣೆ ಬರಹಗಾರ ಗುರು ಕಶ್ಯಪ್ ನಿಧನರಾಗಿದ್ದಾರೆ. ಹೃದಯಾಘಾತದಿಂದ ಕಳೆದ ರಾತ್ರಿ ಗುರು ಕಶ್ಯಪ್ ಮೃತಪಟ್ಟಿದ್ದಾರೆ. ಹೃದಯಾಘಾತವಾದ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಹೋಗುವಾಗ ದಾರಿ ಮಧ್ಯದಲ್ಲೇ ವಿಧಿವಶರಾದರು. ಅವರಿಗೆ 45 ವರ್ಷ ವಯಸ್ಸಾಗಿತ್ತು.

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಸುಂದರಾಂಗ ಜಾಣ’, ರಮೇಶ್ ಅರವಿಂದ್ ನಟನೆಯ ‘ಪುಷ್ಪಕ ವಿಮಾನ’, ಪ್ರಿಯಾಂಕಾ ಉಪೇಂದ್ರ ನಟಿಸಿದ್ದ ‘ದೇವಕಿ’, 2ನೇ ಲಾಕ್ ಡೌನ್ ಗೆ ಮೊದಲು ಬಿಡುಗಡೆಯಾಗಿದ್ದ ಪ್ರಜ್ವಲ್ ದೇವರಾಜ್ ನಟನೆಯ ಇನ್ಸ್ ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಸಿನಿಮಾಗಳಿಗೆ ಗುರು ಕಶ್ಯಪ್ ಡೈಲಾಗ್ ಬರೆದಿದ್ದರು.

ಡಾಲಿ ಧನಂಜಯ್ ನಟನೆಯ ‘ಮಾನ್ಸೂನ್ ರಾಗ’, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ನಟನೆಯ ‘ಬೈರಾಗಿ’, ‘ವೀಲ್ ಚೇರ್ ರೋಮಿಯೋ’ ಮುಂತಾದ ಅನೇಕ ಚಿತ್ರಗಳಿಗೆ ಗುರು ಕಶ್ಯಪ್ ಸಂಭಾಷಣೆ ಬರೆಯುತ್ತಿದ್ದರು. ಯಶಸ್ಸಿನ ಏಣಿಯನ್ನು ಹತ್ತುತ್ತಿರುವಾಗಲೇ ಗುರು ಕಶ್ಯಪ್ ಬಾರದ ಲೋಕಕ್ಕೆ ತೆರಳಿದ್ದಾರೆ.

ಕಂಬನಿ ಮಿಡಿದ ಸ್ಯಾಂಡಲ್‌ವುಡ್: ಪತ್ನಿ ಹಾಗೂ ಪುತ್ರಿಯನ್ನು ಅಗಲಿರುವ ಗುರು ಕಶ್ಯಪ್ ನಿಧನಕ್ಕೆ ಸ್ಯಾಂಡಲ್ ವುಡ್ ಕಲಾವಿದರು ಕಂಬನಿ ಮಿಡಿದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

SCROLL FOR NEXT