ಗುರು ಕಶ್ಯಪ್(ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

ಸ್ಯಾಂಡಲ್ ವುಡ್ ನ ಯುವ ಸಂಭಾಷಣೆಕಾರ ಗುರು ಕಶ್ಯಪ್ ನಿಧನ; ಕಲಾವಿದರ ಕಂಬನಿ

ಸ್ಯಾಂಡಲ್ ವುಡ್ ನ ಮತ್ತೊಬ್ಬ ಜನಪ್ರಿಯ ಸಂಭಾಷಣೆ ಬರಹಗಾರ ಗುರು ಕಶ್ಯಪ್ ನಿಧನರಾಗಿದ್ದಾರೆ. ಹೃದಯಾಘಾತದಿಂದ ಕಳೆದ ರಾತ್ರಿ ಗುರು ಕಶ್ಯಪ್ ಮೃತಪಟ್ಟಿದ್ದಾರೆ.

ಬೆಂಗಳೂರು: ಸ್ಯಾಂಡಲ್ ವುಡ್ ನ ಮತ್ತೊಬ್ಬ ಜನಪ್ರಿಯ ಸಂಭಾಷಣೆ ಬರಹಗಾರ ಗುರು ಕಶ್ಯಪ್ ನಿಧನರಾಗಿದ್ದಾರೆ. ಹೃದಯಾಘಾತದಿಂದ ಕಳೆದ ರಾತ್ರಿ ಗುರು ಕಶ್ಯಪ್ ಮೃತಪಟ್ಟಿದ್ದಾರೆ. ಹೃದಯಾಘಾತವಾದ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಹೋಗುವಾಗ ದಾರಿ ಮಧ್ಯದಲ್ಲೇ ವಿಧಿವಶರಾದರು. ಅವರಿಗೆ 45 ವರ್ಷ ವಯಸ್ಸಾಗಿತ್ತು.

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಸುಂದರಾಂಗ ಜಾಣ’, ರಮೇಶ್ ಅರವಿಂದ್ ನಟನೆಯ ‘ಪುಷ್ಪಕ ವಿಮಾನ’, ಪ್ರಿಯಾಂಕಾ ಉಪೇಂದ್ರ ನಟಿಸಿದ್ದ ‘ದೇವಕಿ’, 2ನೇ ಲಾಕ್ ಡೌನ್ ಗೆ ಮೊದಲು ಬಿಡುಗಡೆಯಾಗಿದ್ದ ಪ್ರಜ್ವಲ್ ದೇವರಾಜ್ ನಟನೆಯ ಇನ್ಸ್ ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಸಿನಿಮಾಗಳಿಗೆ ಗುರು ಕಶ್ಯಪ್ ಡೈಲಾಗ್ ಬರೆದಿದ್ದರು.

ಡಾಲಿ ಧನಂಜಯ್ ನಟನೆಯ ‘ಮಾನ್ಸೂನ್ ರಾಗ’, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ನಟನೆಯ ‘ಬೈರಾಗಿ’, ‘ವೀಲ್ ಚೇರ್ ರೋಮಿಯೋ’ ಮುಂತಾದ ಅನೇಕ ಚಿತ್ರಗಳಿಗೆ ಗುರು ಕಶ್ಯಪ್ ಸಂಭಾಷಣೆ ಬರೆಯುತ್ತಿದ್ದರು. ಯಶಸ್ಸಿನ ಏಣಿಯನ್ನು ಹತ್ತುತ್ತಿರುವಾಗಲೇ ಗುರು ಕಶ್ಯಪ್ ಬಾರದ ಲೋಕಕ್ಕೆ ತೆರಳಿದ್ದಾರೆ.

ಕಂಬನಿ ಮಿಡಿದ ಸ್ಯಾಂಡಲ್‌ವುಡ್: ಪತ್ನಿ ಹಾಗೂ ಪುತ್ರಿಯನ್ನು ಅಗಲಿರುವ ಗುರು ಕಶ್ಯಪ್ ನಿಧನಕ್ಕೆ ಸ್ಯಾಂಡಲ್ ವುಡ್ ಕಲಾವಿದರು ಕಂಬನಿ ಮಿಡಿದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT