ಕಬ್ಜ ಪೋಸ್ಚರ್ 
ಸಿನಿಮಾ ಸುದ್ದಿ

ಉಪೇಂದ್ರ ಹುಟ್ಟುಹಬ್ಬಕ್ಕೆ 'ಕಬ್ಜ' ಮೋಷನ್ ಪೋಸ್ಟರ್ ಬಿಡುಗಡೆ: ದೀಪಾವಳಿಗೆ ಟೀಸರ್ ರಿಲೀಸ್!

ಆರ್​.ಚಂದ್ರು ಹಾಗೂ ಉಪೇಂದ್ರ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ‘ಕಬ್ಜ’ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ.

ಆರ್​.ಚಂದ್ರು ಹಾಗೂ ಉಪೇಂದ್ರ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ‘ಕಬ್ಜ’ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ.

ಉಪೇಂದ್ರ ಅವರ ಜನ್ಮದಿನದ ಪ್ರಯುಕ್ತ ಅದ್ದೂರಿ ಮೋಷನ್ ಪೋಸ್ಟರ್ ಮುಖಾಂತರ ಚಿತ್ರದ ಕುರಿತ ಮಹತ್ವದ ಅಪ್ಡೇಟ್ ನೀಡುವುದಾಗಿ ನಿರ್ದೇಶಕ ಆರ್​.ಚಂದ್ರು ತಿಳಿಸಿದ್ದರು. 

ಅದರಂತೆ, ಆಯುಧ ಹಿಡಿದು ಅಬ್ಬರಿಸುತ್ತಿರುವ ಉಪ್ಪಿಯ ಪೋಸ್ಟರ್​ನೊಂದಿಗೆ ಚಿತ್ರದ ಕುರಿತ ಮಹತ್ವದ ಮಾಹಿತಿಗಳನ್ನೂ ಚಿತ್ರತಂಡ ನೀಡಿದೆ. ಚಿತ್ರದ ಟೀಸರ್ ದೀಪಾವಳಿಗೆ ಬಿಡುಗಡೆಯಾಗಲಿದೆ. ಹಾಗೆಯೇ ಈ ಪ್ಯಾನ್ ಇಂಡಿಯಾ ಚಿತ್ರ 2022ರಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿಸಲಾಗಿದೆ.

1980ರಲ್ಲಿ ಮಾಫಿಯಾ ಪ್ರಬಲವಾಗುವ ಕತೆಯನ್ನು ಚಿತ್ರವು ಒಳಗೊಂಡಿದೆ. ಈ ಕುರಿತಂತೆ ಪ್ರಸ್ತುತ ಬಿಡುಗಡೆಯಾಗಿರುವ ಪೋಸ್ಟರ್​ನಲ್ಲೂ ಮಾಹಿತಿ ನೀಡಲಾಗಿದೆ. ಹಾಗೆಯೇ ಚಿತ್ರದ ಅದ್ದೂರಿತನ, ಹಿನ್ನೆಲೆ, ಸಂಗೀತ, ಛಾಯಾಗ್ರಹಣ ಮೊದಲಾದವುಗಳ ಗುಣಮಟ್ಟವನ್ನು ಅಭಿಮಾನಿಗಳಿಗೆ ತಿಳಿಸುವಂತೆ ಮೋಷನ್ ಪೋಸ್ಟರ್ ಮೂಡಿಬಂದಿದೆ.

ನಾವು 40 ದಿನಗಳ ವೇಳಾಪಟ್ಟಿಯೊಂದಿಗೆ ಬೆಂಗಳೂರಿನಲ್ಲಿ ಚಿತ್ರೀಕರಣವನ್ನು ಪುನರಾರಂಭಿಸುತ್ತೇವೆ ಮತ್ತು ನಂತರ ನಾವು ಹೈದರಾಬಾದ್‌ಗೆ ಹೋಗಲಿದ್ದೇವೆ, ಅಲ್ಲಿ ನಾವು ಚಿತ್ರವನ್ನು ಮುಗಿಸಲು ಯೋಜಿಸುತ್ತಿದ್ದೇವೆ ಎಂದು ನಿರ್ದೇಶಕರು ಹೇಳುತ್ತಾರೆ

ಈ ಚಿತ್ರದಲ್ಲಿ ಸುದೀಪ್ ಕೂಡ ಕಾಣಿಸಿಕೊಳ್ಳಲಿದ್ದು, ಭಾರ್ಗವ್ ಭಕ್ಷಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಹಿಂದೆ ಬಿಡುಗಡೆಯಾಗಿದ್ದ ಪೋಸ್ಟರ್ ಎಲ್ಲರ ಮನಸೆಳೆದಿತ್ತು. ಕೆಜಿಎಫ್ ಖ್ಯಾತಿಯರವಿ ಬಸ್ರೂರ್ ಚಿತ್ರಕ್ಕೆ ಸಂಗೀತ ನೀಡಲಿದೆ, ಎಜೆ ಶೆಟ್ಟಿ ಛಾಯಾಗ್ರಹಣ ಮಾಡುತ್ತಿದ್ದಾರೆ. ಚಿತ್ರದಲ್ಲಿ ಬಹುದೊಡ್ಡ ತಾರಾಗಣವಿದ್ದು, ಶ್ರೀನಿವಾಸ್ ರಾವ್ ಕೋಟ, ಪ್ರಕಾಶ್ ರಾಜ್, ಜಗಪತಿ ಬಾಬು, ಕಬೀರ್ ದುಹಾನ್ ಸಿಂಗ್ , ಅನೂಪ್ ರೇವಣ್ಣ ಮೊದಲಾದವರು ಕಾಣಿಸಿಕೊಳ್ಳಲಿದ್ದಾರೆ. ಚಿತ್ರವನ್ನು ಆರ್​.ಚಂದ್ರಶೇಖರ್ ನಿರ್ಮಿಸುತ್ತಿದ್ದು, ಎಂಟಿಬಿ ನಾಗರಾಜ್ ಚಿತ್ರ ನಿರ್ಮಿಸುತ್ತಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT