ಆದಿತ್ಯ 
ಸಿನಿಮಾ ಸುದ್ದಿ

ವಿಷ್ಣುವರ್ಧನ್ ಎವರ್ ಗ್ರೀನ್ ಸಿನಿಮಾ 'ಬಂಧನ' ಸೀಕ್ವೆಲ್ ನಲ್ಲಿ ಆದಿತ್ಯ; ಮಗನ ಚಿತ್ರಕ್ಕೆ ರಾಜೇಂದ್ರ ಸಿಂಗ್ ಬಾಬು ನಿರ್ದೇಶನ

ನಟ ವಿಷ್ಣುವರ್ಧನ್​ ಅಭಿನಯದ ದಿ ಬೆಸ್ಟ್​  ಸಿನಿಮಾ ಬಂಧನ. 1984 ರಲ್ಲಿ ತೆರೆಕಂಡ ಈ ಸಿನಿಮಾವನ್ನು ಜನರು ಇಂದಿಗೂ ಆಸಕ್ತಿಯಿಂದ ವೀಕ್ಷಿಸುತ್ತಾರೆ. 

ನಟ ವಿಷ್ಣುವರ್ಧನ್​ ಅಭಿನಯದ ದಿ ಬೆಸ್ಟ್​  ಸಿನಿಮಾ ಬಂಧನ. 1984 ರಲ್ಲಿ ತೆರೆಕಂಡ ಈ ಸಿನಿಮಾವನ್ನು ಜನರು ಇಂದಿಗೂ ಆಸಕ್ತಿಯಿಂದ ವೀಕ್ಷಿಸುತ್ತಾರೆ. 

ಸ್ಯಾಂಡಲ್  ವುಡ್ ನಲ್ಲಿ ಬಂಧನ ಸಿನಿಮಾ  ಅತಿ ದೊಡ್ಡ ಬ್ಲಾಕ್ ಬಸ್ಟರ್ ಸಿನಿಮಾವಾಗಿತ್ತು, ಅದರಲ್ಲಿನ ಪ್ರೇಮಕಥೆ ಮನಮುಟ್ಟುವಂತಿದೆ. ಕೌಟುಂಬಿಕ ಪ್ರೇಕ್ಷಕರನ್ನು ಭರಪೂರ ಸೆಳೆದುಕೊಂಡ ಆ ಚಿತ್ರದಲ್ಲಿ ವಿಷ್ಣುವರ್ಧನ್​ ಜೊತೆ ಸುಹಾಸಿನಿ, ಜೈ ಜಗದೀಶ್​ ಮೊದಲಾದವರು ನಟಿಸಿದ್ದರು. ಅಂದು ‘ಬಂಧನ’ ನಿರ್ದೇಶಿಸಿದ್ದ ಎಸ್​.ವಿ. ರಾಜೇಂದ್ರ ಸಿಂಗ್​ ಬಾಬು
ಅವರೇ ಈಗ ‘ಬಂಧನ 2’ ಚಿತ್ರಕ್ಕೆ ನಿರ್ದೇಶನ ಮಾಡಲಿದ್ದಾರೆ. 

ಚಂದನವನದಲ್ಲಿ ಹಲವು ಚಿತ್ರಗಳಿಗೆ ಛಾಯಾಗ್ರಾಹಕರಾಗಿ ಕೆಲಸ ಮಾಡಿ, ನಿರ್ಮಾಪಕನಾಗಿಯೂ ಗುರುತಿಸಿಕೊಂಡಿರುವ ಅಣಜಿ ನಾಗರಾಜ್ ಅವರು ‘ಬಂಧನ 2’ ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ ಎಂದು ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಹೇಳಿದ್ದಾರೆ. 

ಬಂಧನ ಸೀಕ್ವೆಲ್ ಮಾಡುವುದು ನನ್ನ ಮೇಲೆ ಅತಿ ಹೆಚ್ಚು ಜವಾಬ್ದಾರಿಯಿದೆ,  ಬಂಧನ ಸಿನಿಮಾ ಉಷಾ ನವರತ್ನರಾಮ್ ಅವರ ಕಾದಂಬರಿ ಆಧಾರಿತ ಸಿನಿಮಾವಾಗಿದೆ. 19985 ರಲ್ಲಿ ಇದಕ್ಕೆ ಉತ್ತಮ ಸಿನಿಮಾ ಎಂಬ ಕಾರಣಕ್ಕೆ ರಾಷ್ಟ್ರ ಪ್ರಶಸ್ತಿ ದೊರೆತಿತ್ತು. ಕನ್ನಡ ಸಿನಿಮಾ ರಂಗದಲ್ಲಿ ಇದೊಂದು ಮೈಲಿಗಲ್ಲಾಗಿತ್ತು. ಅದಾದ ನಂತರ ತಮಿಳಿಗು ಸಿನಿಮಾ ರಿಮೇಕ್ ಆಗಿತ್ತು.

ಬಂಧನ 2 ಸಿನಿಮಾದಲ್ಲಿ ನಂದಿನಿ ಪಾತ್ರ ಮುಂದುವರಿಯಲಿದೆ, ನಾಯಕನಾಗಿ ಆದಿತ್ಯ ನಟಿಸುತ್ತಿದ್ದು, ಸುಹಾಸಿನಿ ಮತ್ತು ಜೈ ಜಗದೀಶ್ ಈ ಸಿನಿಮಾದಲ್ಲಿಯೂ ಅಭಿನಯಿಸಲಿದ್ದಾರೆ. ಉಳಿದ ಪಾತ್ರವರ್ಗವನ್ನು ಇನ್ನೂ ಅಂತಿಮಗೊಳಿಸಿಲ್ಲ ಎಂದು ರಾಜೇಂದ್ರ ಸಿಂಗ್ ಬಾಬು ತಿಳಿಸಿದ್ದಾರೆ.

ಚಿತ್ರದ ಶೂಟಿಂಗ್ ವೇಳಾಪಟ್ಟಿಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಬಾಬು, ನಾನು ಪ್ರಸ್ತುತ ನನ್ನ ಕಂಬಳ ಪ್ರಾಜೆಕ್ಟ್ ನಲ್ಲಿ ಕೆಲಸ ಮಾಡುತ್ತಿದ್ದೇನೆ. ನಾನು ಏಕಕಾಲದಲ್ಲಿ ಬಂಧನ ಸೀಕ್ವೆಲ್‌ನ ಕೆಲಸಗಳನ್ನು ತೆಗೆದುಕೊಳ್ಳಲು ಯೋಜಿಸುತ್ತಿದ್ದೇನೆ  ಅಕ್ಟೋಬರ್‌ನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ ಎಂದು ಹೇಳಿದ್ದಾರೆ.

ರಾಜೇಂದ್ರ ಸಿಂಗ್ ಬಾಬು ದರ್ಶನ್ ನಟನೆಯ ರಾಜಾ ವೀರಮದಕರಿ ನಾಯಕ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ರಾಕ್ ಲೈನ್ ವೆಂಕಟೇಶ್ ನಿರ್ಮಾಣ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT