ಆಶಿಕಾ ರಂಗನಾಥ್ 
ಸಿನಿಮಾ ಸುದ್ದಿ

ಸುನಿ ನಿರ್ದೇಶನದ 'ಗತ ವೈಭವ'ದಲ್ಲಿ ಆಶಿಕಾ ರಂಗನಾಥ್ ದೇವಕನ್ಯೆ!

‘ಗತವೈಭವ’ ಒಂದು ರೊಮ್ಯಾಂಟಿಕ್ ಕಾಮಿಡಿ ಚಿತ್ರವಾಗಿದ್ದು, ಫ್ಯಾಂಟಸಿ ಅಂಶಗಳೂ ಇವೆಯಂತೆ. ಆಶಿಕಾ ಈ ಚಿತ್ರದಲ್ಲಿ ದೇವಕನ್ಯೆ ಮತ್ತು ಪೋರ್ಚುಗೀಸ್ ಯುವತಿಯ ಪಾತ್ರ ಮಾಡುತ್ತಿದ್ದಾರಂತೆ.

ವರ್ಷದ ಆರಂಭದಲ್ಲಿ ದುಶ್ಯಂತ್ ಅಭಿನಯದಲ್ಲಿ ‘ಗತವೈಭವ’ ಎಂಬ ಹೊಸ ಚಿತ್ರವನ್ನು ಘೋಷಿಸಿದ್ದರು ಸಿಂಪಲ್ ಸುನಿ. ದುಶ್ಯಂತ್ ಎಂಬ ಹೊಸ ಹುಡುಗನನ್ನು ಈ ಚಿತ್ರದ ಮೂಲಕ ಪರಿಚಯಿಸುತ್ತಿರುವ ಸುನಿ, ನಾಯಕನ ಪರಿಚಯದ ವಿಡಿಯೋವನ್ನು ಬಿಡುಗಡೆ ಮಾಡಿದ್ದರು.

ಈಗ ಚಿತ್ರಕ್ಕೆ ನಾಯಕಿಯಾಗಿ ಆಶಿಕಾ ರಂಗನಾಥ್ ಆಯ್ಕೆಯಾಗಿರುವ ಸುದ್ದಿ ಬಂದಿದ್ದು, ನಾಯಕಿಯನ್ನು ಪರಿಚಯಿಸುವ ವಿಡಿಯೋ, ಸೋಷಿಯಲ್ ಮೀಡಿಯಾದಲ್ಲಿ ಅಧಿಕೃತವಾಗಿ ಬಿಡುಗಡೆಯಾಗಲಿದೆ.

‘ಗತವೈಭವ’ ಒಂದು ರೊಮ್ಯಾಂಟಿಕ್ ಕಾಮಿಡಿ ಚಿತ್ರವಾಗಿದ್ದು, ಫ್ಯಾಂಟಸಿ ಅಂಶಗಳೂ ಇವೆಯಂತೆ. ಆಶಿಕಾ ಈ ಚಿತ್ರದಲ್ಲಿ ದೇವಕನ್ಯೆ ಮತ್ತು ಪೋರ್ಚುಗೀಸ್ ಯುವತಿಯ ಪಾತ್ರ ಮಾಡುತ್ತಿದ್ದಾರಂತೆ.

ಆಶಿಕಾ ರಂಗನಾಥ್

ಕಳೆದ ಮೇ ತಿಂಗಳಲ್ಲಿ ತೆರೆಕಂಡಿದ್ದ ಸುನಿ ನಿರ್ದೇಶನದ ‘ಅವತಾರ ಪುರುಷ’ದಲ್ಲೂ ಆಶಿಕಾ ನಾಯಕಿಯಾಗಿದ್ದರು. ಇದೀಗ ಯುವನಟ ದುಷ್ಯಂತ್‌ ಅವರ ಚೊಚ್ಚಲ ಸಿನಿಮಾ ‘ಗತವೈಭವ’ಕ್ಕೂ ಆಶಿಕಾ ಜೋಡಿಯಾಗಿದ್ದಾರೆ. ಫ್ಯಾಂಟಸಿ ರೊಮ್ಯಾಂಟಿಕ್‌ ಕಾಮಿಡಿ ಕಥಾಹಂದರದ ಈ ಸಿನಿಮಾದಲ್ಲಿ ವಿಎಫ್‌ಎಕ್ಸ್‌ ಕಲಾವಿದನ ಪಾತ್ರದಲ್ಲಿ ದುಷ್ಯಂತ್‌ ಕಾಣಿಸಿಕೊಳ್ಳುತ್ತಿದ್ದಾರೆ.

ಹೀಗಾಗಿ ಸಿನಿಮಾದಲ್ಲಿ ಅವರೆತ್ತುವ ಅವತಾರಕ್ಕೆ ಪೂರಕವಾಗಿ ಆಶಿಕಾ ಕೂಡಾ ಹಲವು ಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ದೇವಕನ್ಯೆಯಾಗಿ, ಪೋರ್ಚುಗೀಸ್‌ ಮರ್ಚೆಂಟ್‌ ಆಗಿ ಹೀಗೆ ನಾನಾ ಪಾತ್ರಗಳಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ ಆಶಿಕಾ.

‘ಗತವೈಭವ’ ಚಿತ್ರದ ಶೂಟಿಂಗ್ ಅರ್ಧಕ್ಕೆ ನಿಂತಿದ್ದು, ಆಶಿಕಾ ಶೇಕಡ 30ರಷ್ಟು ಚಿತ್ರೀಕರಣ ಈಗಾಗಲೇ ಮುಗಿಸಿದ್ದಾರೆ.  ಸುನಿ ನಿರ್ದೇಶನದ ಜತೆಗೆ ಕಥೆ-ಚಿತ್ರಕಥೆ ಮತ್ತು ಸಂಭಾಷಣೆಯನ್ನೂ ಬರೆದಿದ್ದಾರೆ. ಅಷ್ಟೇ ಅಲ್ಲ, ದೀಪಕ್ ಜತೆಗೆ ಸೇರಿ ಸುನಿ ಸಿನಿಮಾಸ್ ಸಂಸ್ಥೆಯಡಿ ಚಿತ್ರವನ್ನೂ ನಿರ್ವಿುಸುತ್ತಿದ್ದಾರೆ. ‘ವಿಕ್ರಾಂತ್ ರೋಣ’ ಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದ ವಿಲಿಯಂ ಡೇವಿಡ್ ಛಾಯಾಗ್ರಹಣ ಮತ್ತು ಜೂಡಾ ಸ್ಯಾಂಡಿ ಸಂಗೀತ ಈ ಚಿತ್ರಕ್ಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT