ಗಾಳಿಪಟ 2 ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ಯೋಗರಾಜ್ ಭಟ್ ಸಿನಿಮಾದಲ್ಲಿ ಕೆಲಸ ಮಾಡಿದ್ದು ನನ್ನ ವೃತ್ತಿ ಜೀವನದ ಮೈಲಿಗಲ್ಲು: ಶರ್ಮಿಳಾ ಮಾಂಡ್ರೆ!

ನಾನು ಗಾಳಿಪಟ 2 ಸಿನಿಮಾ ಭಾಗವಾಗಿರುವುದು ದೇವರ ಅನುಗ್ರಹ, ಯೋಗರಾಜ್ ಭಟ್ ಸಿನಿಮಾದಲ್ಲಿ ಕೆಲಸ ಮಾಡಿದ್ದು ನನ್ನ ವೃತ್ತಿ ಜೀವನದಲ್ಲಿ ಒಂದು ಮೈಲಿಗಲ್ಲು ಎಂದು ಶರ್ಮಿಳಾ ಮಾಂಡ್ರೆ ಹೇಳಿದ್ದಾರೆ.

ನಾನು ಗಾಳಿಪಟ 2 ಸಿನಿಮಾ ಭಾಗವಾಗಿರುವುದು ದೇವರ ಅನುಗ್ರಹ, ಯೋಗರಾಜ್ ಭಟ್ ಸಿನಿಮಾದಲ್ಲಿ ಕೆಲಸ ಮಾಡಿದ್ದು ನನ್ನ ವೃತ್ತಿ ಜೀವನದಲ್ಲಿ ಒಂದು ಮೈಲಿಗಲ್ಲು ಎಂದು ಶರ್ಮಿಳಾ ಮಾಂಡ್ರೆ ಹೇಳಿದ್ದಾರೆ.

ನಾನು 2008 ರಲ್ಲಿ ಉದ್ಯಮಕ್ಕೆ ಸೇರಿಕೊಂಡೆ, ಇದಕ್ಕಾಗಿ ನಾನು 14 ವರ್ಷಗಳ ಕಾಲ ಕಾಯಬೇಕಾಯಿತು. ಎಲ್ಲಾ ಒಳ್ಳೆಯ ಕೆಲಸಗಳಿಗೆ ಸಮಯ ಹಿಡಿಯುತ್ತದೆ ಮತ್ತು ಈ ಅವಕಾಶ ಸಿಕ್ಕಿದ್ದಕ್ಕೆ ನನಗೆ ಖುಷಿಯಾಗಿದೆಎಂದು ಶರ್ಮಿಳಾ ಹೇಳಿದ್ದಾರೆ.

ಶರ್ಮಿಳಾ ಮಾಂಡ್ರೆ

ನಾನು ನಿರ್ದೇಶಕರ ಹಿಂದಿನ ಚಿತ್ರ ಗಾಳಿಪಟದಲ್ಲಿ ಕೆಲಸ ಮಾಡುವ ಅವಕಾಶ ಸಿಕ್ಕಿತ್ತು, ಆದರೆ ಡೇಟ್ಸ್ ಹೊಂದಾಣಿಕೆ ಸಮಸ್ಯೆಯಿಂದಾಗಿ ಕೆಲಸ ಮಾಡಲು ಸಾಧ್ಯವಾಗಲಿಲ್ಲ. ಈ ಅವಕಾಶ ಗಾಳಿಪಟ 2 ಸಿನಿಮಾದಲ್ಲಿ ಸಿಕ್ಕಿತು, ಈ ಸಿನಿಮಾದ ಭಾಗವಾಗಿರಲು ನಾನು ಖುಷಿಯಾಗಿದ್ದೇನೆ ಎಂದಿದ್ದಾರೆ.

ಗೋಲ್ಡನ್‌ ಸ್ಟಾರ್‌ ಗಣೇಶ್‌, ದೂದ್‌ಪೇಡಾ ದಿಗಂತ್‌ ಹಾಗೂ ಪವನ್‌ ಕುಮಾರ್‌ ಮುಖ್ಯಭೂಮಿಕೆಯಲ್ಲಿ ನಟಿಸಿದ್ದು, ವೈಭವಿ ಶಾಂಡಿಲ್ಯ, ಶರ್ಮಿಳಾ ಮಾಂಡ್ರೆ, ಸಂಯುಕ್ತಾ ಮೆನನ್‌, ನಿಶ್ವಿ‌ಕಾ ನಾಯ್ಡು ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ರಂಗಾಯಣ ರಘು, ಬುಲೆಟ್ ಪ್ರಕಾಶ್, ಅನಂತ್‌ ನಾಗ್‌, ಸುಧಾ ಬೆಳವಾಡಿ, ಪದ್ಮಜಾರಾವ್ ಸೇರಿದಂತೆ ಅನೇಕ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ.

ನಾನು ಈ ಸಿನಿಮಾದಲ್ಲಿ ಟೀಚರ್, ಪವನ್ ಕುಮಾರ್ ನನ್ನ ಸ್ಟೂಡೆಂಟ್, ನಾನು ನಿಜ ಜೀವನದಲ್ಲಿ ಪವನ್‌ಗಿಂತ ವಯಸ್ಸಿನಲ್ಲಿ ಚಿಕ್ಕವಳು, ಪವನ್ ಚಿಕ್ಕವರಾಗಿ ಕಾಣುವಂತೆ ಮಾಡುವುದು ಸವಾಲಾಗಿತ್ತು. ಅವರು ಬಹಳ ಶ್ರಮ ವಹಿಸಿ ವರ್ಕೌಟ್ ಮಾಡಿದ್ದಾರೆ. ನನ್ನ ವಿದ್ಯಾರ್ಥಿಯಂತೆ ಕಾಣಲು ಸಾಕಷ್ಟು ಕೆಜಿ ತೂಕ ಕಳೆದುಕೊಂಡಿದ್ದಾರೆ ಎಂದು ಶರ್ಮಿಳಾ ತಿಳಿಸಿದ್ದಾರೆ.

ಯೋಗರಾಜ್ ಭಟ್ ಅವರ ವರ್ಕಿಂಗ್ ಸ್ಟೈಲ್ ಬಗ್ಗೆ  ಮಾತನಾಡಿದ ಶರ್ಮಿಳಾ, “ಸಾಕಷ್ಟು ಪಾತ್ರಗಳಿದ್ದರೂ, ಪ್ರತಿಯೊಂದು ಪಾತ್ರವೂ ಸರಿಹೋಗುವಂತೆ ನಿರ್ದೇಶಕರು ನೋಡಿಕೊಂಡಿದ್ದಾರೆ. ಯೋಗರಾಜ್ ಭಟ್ ಅವರಲ್ಲಿ ನನಗೆ ಇಷ್ಟವಾದ ಒಂದು ವಿಷಯವೆಂದರೆ ಅವರು ನಾಯಕಿಯರನ್ನು ಸುಂದರವಾದ ಗೊಂಬೆಗಳಂತೆ ತೋರಿಸುವುದಿಲ್ಲ. ಅವರು ತಮ್ಮ ಪಾತ್ರಗಳಿಗೆ ಹೆಚ್ಚಿನ ಮೌಲ್ಯವನ್ನು ಸೇರಿಸುತ್ತಾರೆ.

ಯೋಗರಾಜ್ ಭಟ್ ನಿಜವಾದ ಅರ್ಥದಲ್ಲಿ 'ಹಡಗಿನ ಕ್ಯಾಪ್ಟನ್' ಮತ್ತು ಅವರು ನಮ್ಮ ಪಾತ್ರವನ್ನು ತುಂಬಾ ಗಂಭೀರವಾಗಿ ಪರಿಗಣಿಸುತ್ತಾರೆ. ಜೊತೆಗೆ ಇಡೀ ತಂಡವನ್ನು ಒಟ್ಟಿಗೆ ಹಿಡಿದಿಟ್ಟುಕೊಳ್ಳುವ ವ್ಯಕ್ತಿಯಾಗಿದ್ದಾರೆ. ಇಡೀ ಶೂಟಿಂಗ್ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ, ನಟಿಯಾಗಿ ಶರ್ಮಿಳಾ ದಸರಾ ಎಂಬ ಸಿನಿಮಾ ನಿರ್ಮಾಣಕ್ಕೂ ಕೈ ಹಾಕಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT