ಧನ್ಯಾ ರಾಮ್ ಕುಮಾರ್(ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

30 ವರ್ಷಗಳ ನಂತರ ಮತ್ತೆ ಬೆಳ್ಳಿತೆರೆಗೆ 'ಬೆಳ್ಳಿ ಕಾಲುಂಗುರ'; ಧನ್ಯಾ ರಾಮ್ ಕುಮಾರ್ ನಾಯಕಿ

ಡಾ ರಾಜ್ ಕುಮಾರ್ ಅವರ ಮೊಮ್ಮಗಳು ರಾಮ್ ಕುಮಾರ್ ಮತ್ತು ಪೂರ್ಣಿಮಾ ಅವರ ಪುತ್ರಿ ಧನ್ಯಾ ರಾಮ್ ಕುಮಾರ್ ನಾಯಕಿಯಾಗಿ ನಟಿಸುತ್ತಿರುವ 'ಬೆಳ್ಳಿ ಕಾಲುಂಗುರ' ಚಿತ್ರಕ್ಕೆ ಇಂದು ಬೆಂಗಳೂರಿನ ಕಂಠೀರವ ಸ್ಟುಡಿಯೊದಲ್ಲಿ ಮುಹೂರ್ತ ನೆರವೇರಿತು.

ಡಾ ರಾಜ್ ಕುಮಾರ್ ಅವರ ಮೊಮ್ಮಗಳು ರಾಮ್ ಕುಮಾರ್ ಮತ್ತು ಪೂರ್ಣಿಮಾ ಅವರ ಪುತ್ರಿ ಧನ್ಯಾ ರಾಮ್ ಕುಮಾರ್ ನಾಯಕಿಯಾಗಿ ನಟಿಸುತ್ತಿರುವ 'ಬೆಳ್ಳಿ ಕಾಲುಂಗುರ' ಚಿತ್ರಕ್ಕೆ ಇಂದು ಬೆಂಗಳೂರಿನ ಕಂಠೀರವ ಸ್ಟುಡಿಯೊದಲ್ಲಿ ಮುಹೂರ್ತ ನೆರವೇರಿತು.

ಇಡೀ ರಾಜ್ ಕುಮಾರ್ ಕುಟುಂಬ ಸದಸ್ಯರು ಈ ಸುಂದರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಚಿತ್ರಕ್ಕೆ ಸಾ ರಾ ಗೋವಿಂದ್ ಅವರು ಬಂಡವಾಳ ಹೂಡುತ್ತಿದ್ದು ಎಚ್ ವಾಸು ನಿರ್ದೇಶನ ಮಾಡುತ್ತಿದ್ದಾರೆ. 

ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಚಿತ್ರಕ್ಕೆ ಕ್ಲಾಪ್ ನೀಡಿದರು. ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಚಿತ್ರಕ್ಕೆ ಕ್ಲಾಪ್ ಮಾಡಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಾ ರಾ ಗೋವಿಂದ್ ಅವರು ನಮ್ಮ ಜಿಲ್ಲೆಯವರು, ಆತ್ಮೀಯರು. ಅವರು ಪ್ರೀತಿಯಿಂದ ಕರೆದಿದ್ದಕ್ಕೆ ಬಂದು ಮುಹೂರ್ತ ನೆರವೇರಿಸಿದೆ. ಚಿತ್ರಕ್ಕೆ ಗೆಲುವಾಗಲಿ ಎಂದು ಹಾರೈಸಿದರು.

ಇನ್ನು ಮುಖ್ಯಮಂತ್ರಿ ಬೊಮ್ಮಾಯಿಯವರ ಹೇಳಿಕೆಗೆ ರಾಜಕೀಯವಾಗಿ ಪ್ರತಿಕ್ರಿಯಿಸಿದ ಸಿದ್ದರಾಂಯ್ಯ ಇಷ್ಟು ದಿನ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ಗುರುತಿಸಿಕೊಳ್ಳುವಂತಹ ಕೆಲಸವೇನೂ ಮಾಡಿಲ್ಲ, ಇನ್ನು ಮುಂದೆ ಮಾಡುತ್ತಾರೆಯೇ, ಅವರು ಆರ್ ಎಸ್ಎಸ್ ನ ಕೈಗೊಂಬೆ ಎಂದು ಟೀಕಿಸಿದರು.

ಇನ್ನು ವಾಟಾಳ್ ನಾಗರಾಜ್ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಈ ನಾಡು ಕಂಡ ಅಪ್ರತಿಮ ಹೋರಾಟಗಾರ ವಾಟಾಳ್ ನಾಗರಾಜ್. ನಮ್ಮ ನಾಯಕರು ಎಂದು ನಾನು ಅವರನ್ನು ಕರೆಯುತ್ತೇನೆ, ವಯಸ್ಸಿನಲ್ಲಿ ನನಗಿಂತ ಕೊಂಚ ದೊಡ್ಡವರು, ವಿದ್ಯಾರ್ಥಿದೆಸೆಯಲ್ಲಿ ನಾನು ಅವರ ಭಾಷಣ ಕೇಳಲು ಟೌನ್ ಹಾಲ್ ನಲ್ಲಿ ಹೋಗುತ್ತಿದ್ದೆ. ಅವರ ವಯಸ್ಸನ್ನು ಯಾರಿಗೂ ಹೇಳುವುದಿಲ್ಲ. ಗುಟ್ಟಾಗಿ ಕಾಪಾಡಿಕೊಂಡಿದ್ದಾರೆ. ಆರೋಗ್ಯ ಕಾಪಾಡಿಕೊಂಡು ಬಂದಿದ್ದಾರೆ ಎಂದು ಹೊಗಳಿದರು. 

ಇನ್ನು ಬೆಳ್ಳಿಕಾಲುಂಗುರ ಚಿತ್ರದ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಚಿತ್ರದ ಹೀರೋ ಸಮರ್ಥ್ ಮತ್ತು ಹೀರೋಯಿನ್ ಧನ್ಯ ಅವರಿಗೆ ಚಿತ್ರದಿಂದ ಯಶಸ್ಸು ಸಿಗಲಿ. ಈ ಶೀರ್ಷಿಕೆ ಹೆಸರಿನಲ್ಲಿ ಮೂವತ್ತು ವರ್ಷಗಳ ಹಿಂದೆ ಚಿತ್ರ ತೆರೆಕಂಡು ಯಶಸ್ಸು ಆಗಿತ್ತು. ಈಗ ಮತ್ತೆ ಬೆಳ್ಳಿಕಾಲುಂಗುರ ತೆರೆಯ ಮೇಲೆ ಬರಲು ಸಿದ್ಧತೆ ನಡೆಯುತ್ತಿದೆ ಎಂದರು.

ಡಾ ರಾಜ್ ಕುಮಾರ್ ನಮ್ಮ ಜಿಲ್ಲೆಯವರೇ ಆಗಿದ್ದು, ಅವರ ಸಿಂಗನಲ್ಲೂರು ಚಾಮರಾಜನಗರ ಪಾಲಾಗಿದೆ. ಅವರು ನಮ್ಮ ಜಿಲ್ಲೆಯಲ್ಲಿ ಹುಟ್ಟಿದ್ದು ನಮಗೆಲ್ಲ ಹೆಮ್ಮೆ ಎಂದರು. ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಅವರನ್ನು ಸಿದ್ದರಾಮಯ್ಯ ಪ್ರಸ್ತಾಪಿಸಿದರು, ಪುನೀತ್ ಇತ್ತೀಚಿನ ವರ್ಷಗಳಲ್ಲಿ ಕಲಾವಿದರಾಗಿ ಬೆಳೆದರು. ಅವರು ನಿಧನರಾದಾಗ ಈ ನಾಡಿನಲ್ಲಿ ಪ್ರತಿಯೊಬ್ಬರೂ ತಮ್ಮ ಮನೆಯ ಸದಸ್ಯರೊಬ್ಬರು ಕಾಲವಾದ ರೀತಿಯಲ್ಲಿ ಭಾವಿಸಿಕೊಂಡಿದ್ದು ಅವರ ಜನಪ್ರಿಯತೆಗೆ ಸಾಕ್ಷಿ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT