ಧನು ಹರ್ಷಾ 
ಸಿನಿಮಾ ಸುದ್ದಿ

ದಿಗಂತ್ ನಟನೆಯ 'ಎಡಗೈಯೇ ಅಪಘಾತಕ್ಕೆ ಕಾರಣ' ಸಿನಿಮಾಗೆ ನಾಯಕಿಯಾಗಿ ಧನು ಹರ್ಷಾ ಆಯ್ಕೆ!

ಸ್ಯಾಂಡಲ್‌ವುಡ್‌ನ ಹೊಸ ಪ್ರತಿಭೆ ಧನು ಹರ್ಷ, ಸಮರ್ಥ್ ಬಿ ಕಡಕೋಳ್ ನಿರ್ದೇಶನದ 'ಎಡಗೈಯೇ ಅಪಘಾತಕ್ಕೆ ಕಾರಣ' ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಸುತ್ತುವ ಚಿತ್ರದಲ್ಲಿ ದಿಗಂತ್‌ ನಾಯಕನಟನಾಗಿ ನಟಿಸುತ್ತಿದ್ದು, ಇವರಿಗೆ ಜೋಡಿಯಾಗಿ ಧನು ಕಾಣಿಸಿಕೊಳ್ಳಲಿದ್ದಾರೆ.

ಸ್ಯಾಂಡಲ್‌ವುಡ್‌ನ ಹೊಸ ಪ್ರತಿಭೆ ಧನು ಹರ್ಷ, ಸಮರ್ಥ್ ಬಿ ಕಡಕೋಳ್ ನಿರ್ದೇಶನದ 'ಎಡಗೈಯೇ ಅಪಘಾತಕ್ಕೆ ಕಾರಣ' ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಸುತ್ತುವ ಚಿತ್ರದಲ್ಲಿ ದಿಗಂತ್‌ ನಾಯಕನಟನಾಗಿ ನಟಿಸುತ್ತಿದ್ದು, ಇವರಿಗೆ ಜೋಡಿಯಾಗಿ ಧನು ಕಾಣಿಸಿಕೊಳ್ಳಲಿದ್ದಾರೆ.

ಫ್ರೆಶ್ ಫೇಸ್ ಸೀಸನ್ 13 ರ ರನ್ನರ್ ಅಪ್ ಆಗಿರುವ ಧನು ಅವರು ಚಿತ್ರತಂಡಕ್ಕೆ ಸೇರಿಕೊಂಡಿರುವ ಬಗ್ಗೆ, ಅಂತರರಾಷ್ಟ್ರೀಯ ಲೆಫ್ಟ್‌ಹ್ಯಾಂಡರ್ಸ್ ದಿನದಂದೇ ಅಧಿಕೃತ ಪ್ರಕಟಣೆಯನ್ನು ಘೋಷಿಸಲಾಗಿದೆ. ಈ ಹಿಂದೆ ಇಂಗ್ಲಿಷ್ ಚಿತ್ರಗಳು, ತಮಿಳಿನ ಚಿತ್ರ ಇರಂಧ ಕಾಲಂ ಮತ್ತು ಕನ್ನಡದ ಅರಿಹ ಚಿತ್ರಗಳಲ್ಲಿ ಕೆಲಸ ಮಾಡಿರುವ ಧನು, ಇದೇ ಮೊದಲ ಬಾರಿಗೆ ತೆರೆಯ ಮೇಲೆ ಲೀಡ್ ರೋಲ್‌ನಲ್ಲಿ ಕಾಣಿಸಿಕೊಳ್ಳುತ್ತಿರುವುದಕ್ಕೆ ಉತ್ಸುಕರಾಗಿದ್ದಾರೆ.

'ಎಡಗೈಯೇ ಅಪಘಾತಕ್ಕೆ ಕಾರಣ' ಎಂಬ ಶೀರ್ಷಿಕೆಯು 'ಸಮಸ್ಯೆ ಸಂಭವಿಸಲು ಎಡಗೈ ಕಾರಣ' ಎಂದು ಅನುವಾದಿಸುತ್ತದೆ. ಇದು 'ಎಡಗೈಯವರನ್ನು' ಒಳಗೊಂಡ ಪರಿಕಲ್ಪನೆಯಾಗಿದೆ. 20ರ ದಶಕದಲ್ಲಿ ದುರದೃಷ್ಟಕರ ಘಟನೆಗಳನ್ನು ಎದುರಿಸುವ ಎಡಚರರಾದ ರಾಧಿಕಾ ಪಾತ್ರವನ್ನು ನಾನು ನಿರ್ವಹಿಸುತ್ತಿದ್ದೇನೆ ಎನ್ನುತ್ತಾರೆ ಧನು.

ಪಾತ್ರವು ಸವಾಲಿನದ್ದಾಗಿದೆ ಮತ್ತು ಇದು ನನಗೆ ಹೊಸದು. ವಿಭಿನ್ನವಾಗಿರುವುದೇ ನಾನು ಈ ಪಾತ್ರದಲ್ಲಿ ಅಭಿನಯಿಸಲು ಕಾರಣ' ಈ ತಿಂಗಳು ಚಿತ್ರದ ಚಿತ್ರೀಕರಣವನ್ನು ಪ್ರಾರಂಭಿಸಲಿರುವ ಚಿತ್ರದ ನಟ ಹೇಳುತ್ತಾರೆ. ಇನ್ನೂ ಶಿಕ್ಷಣವನ್ನು ಮುಂದುವರಿಸುತ್ತಿರುವ ಧನು, ಈ ವೃತ್ತಿಯನ್ನು ಪ್ರೀತಿಸಲು ಪ್ರಾರಂಭಿಸಿರುವುದಾಗಿ ತಿಳಿಸುತ್ತಾರೆ.

ಎಡಗೈಯೇ ಅಪಘಾತಕ್ಕೆ ಕಾರಣ ಚಿತ್ರವನ್ನು ಗುರುದತ್ತ ಗಾಣಿಗ ಮತ್ತು ಸಮರ್ಥ್ ಕಡಕೋಳ್ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಅಭಿಮನ್ಯು ಸದಾನಂದ್ ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಮ್ಮತ್ತ ಎಷ್ಟೇ ಬೆರಳು ತೋರಿದರೂ, ಅಲ್ಪಸಂಖ್ಯಾತರ ಮೇಲೆ ನಿಮ್ಮ ದೌರ್ಜನ್ಯ ಮುಚ್ಚಿಡಲು ಸಾಧ್ಯವಿಲ್ಲ- ಪಾಕ್ ಗೆ ಭಾರತದ ತಿರುಗೇಟು!

ಅನಧಿಕೃತ ಮನೆಗಳ ತೆರವು: ಕೋಗಿಲು ಲೇಔಟ್​​ಗೆ ಡಿ.ಕೆ ಶಿವಕುಮಾರ್ ಭೇಟಿ; ಡಿಸಿಎಂ ಹೇಳಿದ್ದೇನು? Video

ಬೆಂಗಳೂರು: ಕಿರುತೆರೆ ನಟಿ ನಂದಿನಿ ಆತ್ಮಹತ್ಯೆಗೆ ಶರಣು

ಮಾದಕ ವಸ್ತು ತಡೆ: ನಿರ್ಲಕ್ಷ್ಯಕ್ಕಾಗಿ ಮೂವರು ಇನ್ಸ್‌ಪೆಕ್ಟರ್‌ಗಳ ಅಮಾನತು

ಲಂಕಾ ಹನಿಮೂನ್ ನಲ್ಲಿ 'ಹಳೇ ಲವರ್' ವಿಚಾರಕ್ಕೆ ಜಗಳ! ನವದಂಪತಿ ಸೂಸೈಡ್ ಗೆ ಇದೇ ಕಾರಣನಾ? ಕಣ್ಣೀರಿನಲ್ಲಿ ಮುಳುಗಿದ ಕುಟುಂಬ!

SCROLL FOR NEXT