ಅನಿರುದ್ಧ್ 
ಸಿನಿಮಾ ಸುದ್ದಿ

ಜೊತೆ ಜೊತೆಯಲಿ ಸೀರಿಯಲ್​ ಸೆಟ್ ನಲ್ಲಿ 'ಆರ್ಯವರ್ಧನ್' ಕಿರಿಕ್: ಕಿರುತೆರೆಯಿಂದಲೇ ನಟ ಅನಿರುದ್ಧ್​ಗೆ ಗೇಟ್ ಪಾಸ್?

ಜೀ ಕನ್ನಡದಲ್ಲಿ ಚಾನೆಲ್ ನಲ್ಲಿ ಪ್ರಸಾರವಾಗುತ್ತಿರುವ ಜೊತೆ ಜೊತೆಯಲಿ ಧಾರಾವಾಹಿ  ಸೆಟ್​ನಲ್ಲಿ ನಡೆದ ಫೈಟಿಂಗ್​ ಕಥೆಗೆ ಇದೀಗ ಟ್ವಿಸ್ಟ್​ ಸಿಕ್ಕಿದೆ.  ನಟ ಅನಿರುದ್ಧ್​ಗೆ ಧಾರಾವಾಹಿಯಿಂದಲೇ ಗೇಟ್ ಪಾಸ್ ನೀಡಿದ್ದಾರೆ ಎನ್ನಲಾಗುತ್ತಿದೆ.

ಜೊತೆ ಜೊತೆಯಲ್ಲಿ ಸೆಟ್​ನಲ್ಲಿ ಅನಿರುದ್ಧ್​ ಮಾಡ್ತಿದ್ದ ಕಿರಿಕಿರಿಯಿಂದ ಇಡೀ ತಂಡವೇ ಬೇಸತ್ತು ಹೋಗಿತ್ತು. ಹೀಗಾಗಿ ಅನಿರುದ್ಧ್​ ವಿರುದ್ಧ ದೂರಿನ ಮಳೆಯಾಗಿದೆ. ಈ ಕುರಿತು ಸಭೆ ಕೂಡ ನಡೆದಿದ್ದು, ಸಭೆಯ ನಿರ್ಧಾರದಂತೆ ಅನಿರುದ್ಧ್​​ರನ್ನು ಸೀರಿಯಲ್​ನಿಂದ ಮಾತ್ರವಲ್ಲ ಕಿರುತೆರೆಯಿಂದಲೇ ಬ್ಯಾನ್ ಮಾಡಲಾಗಿದೆಯಂತೆ.

ಜೀ ಕನ್ನಡದಲ್ಲಿ ಚಾನೆಲ್ ನಲ್ಲಿ ಪ್ರಸಾರವಾಗುತ್ತಿರುವ ಜೊತೆ ಜೊತೆಯಲಿ ಧಾರಾವಾಹಿ  ಸೆಟ್​ನಲ್ಲಿ ನಡೆದ ಫೈಟಿಂಗ್​ ಕಥೆಗೆ ಇದೀಗ ಟ್ವಿಸ್ಟ್​ ಸಿಕ್ಕಿದೆ.  ನಟ ಅನಿರುದ್ಧ್​ಗೆ ಧಾರಾವಾಹಿಯಿಂದಲೇ ಗೇಟ್ ಪಾಸ್ ನೀಡಿದ್ದಾರೆ ಎನ್ನಲಾಗುತ್ತಿದೆ.

ನಟ ಅನಿರುದ್ಧ್​ ವಿರುದ್ಧ ದಾಖಲಾದ ದೂರಿನ ಹಿನ್ನೆಲೆ ಅನಿರುದ್ಧ್​ರನ್ನು  ಕೇವಲ ಧಾರಾವಾಹಿಯಿಂದ  ಮಾತ್ರವಲ್ಲ, ಕಿರುತೆರೆಯಿಂದಲೇ ಅವರನ್ನು ಬ್ಯಾನ್​ ಮಾಡಲಾಗಿದೆ ಎಂದು ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ, ಆದರೆ ಈ ಕುರಿತು ಯಾವುದೇ  ಅಧಿಕೃತ ಮಾಹಿತಿ ಹೊರಬಂದಿಲ್ಲ.

ಜೊತೆ ಜೊತೆಯಲಿ ಧಾರಾವಾಹಿ ಬಹಳ ಕಾಲ ಟಿಆರ್‌ಪಿಯಲ್ಲಿ ನಂಬರ್ ಒನ್‌ ಸ್ಥಾನದಲ್ಲೇ ಇತ್ತು. ಅದಾದ ಬಳಿಕವೂ ಇದರ ಟಿಆರ್‌ಪಿ ಚೆನ್ನಾಗಿಯೇ ಇತ್ತು. ಇದರೊಂದಿಗೆ ಈ ಧಾರಾವಾಹಿ ನಟ ಅನಿರುದ್ದ್ ಅವರಿಗೂ ಮರು ಜನ್ಮ ನೀಡಿತ್ತು.

150 ಸಂಚಿಕೆಗಳು ಪೂರ್ಣಗೊಂಡ ಬಳಿಕ ಈ ರೀತಿ ವರ್ತನೆ ಮರುಕಳಿಸಲು ಶುರುವಾಯಿತು. ಅದರ ನಡುವೆಯೂ ಸೀರಿಯಲ್​ ಕೆಲಸಗಳು ಮುಂದುವರಿಯುತ್ತಿದ್ದವು. ಆದರೆ ಈಗ ಎಲ್ಲವೂ ಮಿತಿ ಮೀರಿದ್ದರಿಂದ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಸಮಯ ಬಂದಿದೆ ಎಂದು ಮೂಲಗಳು ತಿಳಿಸಿವೆ.

ಅನಿರುದ್ಧ್​ ಅವರನ್ನು ಬ್ಯಾನ್​ ಮಾಡುವ ಬಗ್ಗೆ ಆಲೋಚನೆ ಮಾಡಲಾಗುತ್ತಿದೆ ಎಂದು ಕೆಲವೆಡೆ ಸುದ್ದಿ ಪ್ರಕಟ ಆಗಿದೆ. ಈ ಬಗ್ಗೆ ಜೀ ಕನ್ನಡ ವಾಹಿನಿ ಹಾಗೂ ಕಿರುತೆರೆ ನಿರ್ಮಾಪಕರ ಸಂಘ ಏನು ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT