ಅನಿರುದ್ಧ್ 
ಸಿನಿಮಾ ಸುದ್ದಿ

ಜೊತೆ ಜೊತೆಯಲಿ ಸೀರಿಯಲ್​ ಸೆಟ್ ನಲ್ಲಿ 'ಆರ್ಯವರ್ಧನ್' ಕಿರಿಕ್: ಕಿರುತೆರೆಯಿಂದಲೇ ನಟ ಅನಿರುದ್ಧ್​ಗೆ ಗೇಟ್ ಪಾಸ್?

ಜೀ ಕನ್ನಡದಲ್ಲಿ ಚಾನೆಲ್ ನಲ್ಲಿ ಪ್ರಸಾರವಾಗುತ್ತಿರುವ ಜೊತೆ ಜೊತೆಯಲಿ ಧಾರಾವಾಹಿ  ಸೆಟ್​ನಲ್ಲಿ ನಡೆದ ಫೈಟಿಂಗ್​ ಕಥೆಗೆ ಇದೀಗ ಟ್ವಿಸ್ಟ್​ ಸಿಕ್ಕಿದೆ.  ನಟ ಅನಿರುದ್ಧ್​ಗೆ ಧಾರಾವಾಹಿಯಿಂದಲೇ ಗೇಟ್ ಪಾಸ್ ನೀಡಿದ್ದಾರೆ ಎನ್ನಲಾಗುತ್ತಿದೆ.

ಜೊತೆ ಜೊತೆಯಲ್ಲಿ ಸೆಟ್​ನಲ್ಲಿ ಅನಿರುದ್ಧ್​ ಮಾಡ್ತಿದ್ದ ಕಿರಿಕಿರಿಯಿಂದ ಇಡೀ ತಂಡವೇ ಬೇಸತ್ತು ಹೋಗಿತ್ತು. ಹೀಗಾಗಿ ಅನಿರುದ್ಧ್​ ವಿರುದ್ಧ ದೂರಿನ ಮಳೆಯಾಗಿದೆ. ಈ ಕುರಿತು ಸಭೆ ಕೂಡ ನಡೆದಿದ್ದು, ಸಭೆಯ ನಿರ್ಧಾರದಂತೆ ಅನಿರುದ್ಧ್​​ರನ್ನು ಸೀರಿಯಲ್​ನಿಂದ ಮಾತ್ರವಲ್ಲ ಕಿರುತೆರೆಯಿಂದಲೇ ಬ್ಯಾನ್ ಮಾಡಲಾಗಿದೆಯಂತೆ.

ಜೀ ಕನ್ನಡದಲ್ಲಿ ಚಾನೆಲ್ ನಲ್ಲಿ ಪ್ರಸಾರವಾಗುತ್ತಿರುವ ಜೊತೆ ಜೊತೆಯಲಿ ಧಾರಾವಾಹಿ  ಸೆಟ್​ನಲ್ಲಿ ನಡೆದ ಫೈಟಿಂಗ್​ ಕಥೆಗೆ ಇದೀಗ ಟ್ವಿಸ್ಟ್​ ಸಿಕ್ಕಿದೆ.  ನಟ ಅನಿರುದ್ಧ್​ಗೆ ಧಾರಾವಾಹಿಯಿಂದಲೇ ಗೇಟ್ ಪಾಸ್ ನೀಡಿದ್ದಾರೆ ಎನ್ನಲಾಗುತ್ತಿದೆ.

ನಟ ಅನಿರುದ್ಧ್​ ವಿರುದ್ಧ ದಾಖಲಾದ ದೂರಿನ ಹಿನ್ನೆಲೆ ಅನಿರುದ್ಧ್​ರನ್ನು  ಕೇವಲ ಧಾರಾವಾಹಿಯಿಂದ  ಮಾತ್ರವಲ್ಲ, ಕಿರುತೆರೆಯಿಂದಲೇ ಅವರನ್ನು ಬ್ಯಾನ್​ ಮಾಡಲಾಗಿದೆ ಎಂದು ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ, ಆದರೆ ಈ ಕುರಿತು ಯಾವುದೇ  ಅಧಿಕೃತ ಮಾಹಿತಿ ಹೊರಬಂದಿಲ್ಲ.

ಜೊತೆ ಜೊತೆಯಲಿ ಧಾರಾವಾಹಿ ಬಹಳ ಕಾಲ ಟಿಆರ್‌ಪಿಯಲ್ಲಿ ನಂಬರ್ ಒನ್‌ ಸ್ಥಾನದಲ್ಲೇ ಇತ್ತು. ಅದಾದ ಬಳಿಕವೂ ಇದರ ಟಿಆರ್‌ಪಿ ಚೆನ್ನಾಗಿಯೇ ಇತ್ತು. ಇದರೊಂದಿಗೆ ಈ ಧಾರಾವಾಹಿ ನಟ ಅನಿರುದ್ದ್ ಅವರಿಗೂ ಮರು ಜನ್ಮ ನೀಡಿತ್ತು.

150 ಸಂಚಿಕೆಗಳು ಪೂರ್ಣಗೊಂಡ ಬಳಿಕ ಈ ರೀತಿ ವರ್ತನೆ ಮರುಕಳಿಸಲು ಶುರುವಾಯಿತು. ಅದರ ನಡುವೆಯೂ ಸೀರಿಯಲ್​ ಕೆಲಸಗಳು ಮುಂದುವರಿಯುತ್ತಿದ್ದವು. ಆದರೆ ಈಗ ಎಲ್ಲವೂ ಮಿತಿ ಮೀರಿದ್ದರಿಂದ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಸಮಯ ಬಂದಿದೆ ಎಂದು ಮೂಲಗಳು ತಿಳಿಸಿವೆ.

ಅನಿರುದ್ಧ್​ ಅವರನ್ನು ಬ್ಯಾನ್​ ಮಾಡುವ ಬಗ್ಗೆ ಆಲೋಚನೆ ಮಾಡಲಾಗುತ್ತಿದೆ ಎಂದು ಕೆಲವೆಡೆ ಸುದ್ದಿ ಪ್ರಕಟ ಆಗಿದೆ. ಈ ಬಗ್ಗೆ ಜೀ ಕನ್ನಡ ವಾಹಿನಿ ಹಾಗೂ ಕಿರುತೆರೆ ನಿರ್ಮಾಪಕರ ಸಂಘ ಏನು ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT