ತ್ರಿಷಾ 
ಸಿನಿಮಾ ಸುದ್ದಿ

ರಾಜಕೀಯಕ್ಕೆ ತ್ರಿಷಾ ಕೃಷ್ಣನ್‌ ಎಂಟ್ರಿ: 'ಕೈ' ಹಿಡಿಯಲಿದ್ದಾರಾ 'ಪವರ್' ನಟಿ ! ಪಾಲಿಟಿಕ್ಸ್ ಗೆ ಸೇರಲು ತಮಿಳು ನಟ ಕಾರಣ?

ದಕ್ಷಿಣ ಭಾರತದ ಖ್ಯಾತ ನಟಿ ತ್ರಿಷಾ ಕೃಷ್ಣನ್‌ ರಾಜಕೀಯ ಪ್ರವೇಶ ಮಾಡಲು ಮುಂದಾಗಿದ್ದು, ಅವರು ಕಾಂಗ್ರೆಸ್‌ ಪಕ್ಷ ಸೇರಲಿದ್ದಾರೆ ಎಂದು ವರದಿಯಾಗಿದೆ.

ದಕ್ಷಿಣ ಭಾರತದ ಖ್ಯಾತ ನಟಿ ತ್ರಿಷಾ ಕೃಷ್ಣನ್‌ ರಾಜಕೀಯ ಪ್ರವೇಶ ಮಾಡಲು ಮುಂದಾಗಿದ್ದು, ಅವರು ಕಾಂಗ್ರೆಸ್‌ ಪಕ್ಷ ಸೇರಲಿದ್ದಾರೆ ಎಂದು ವರದಿಯಾಗಿದೆ.

ತ್ರಿಷಾ ಕಾಂಗ್ರೆಸ್‌ ಸೇರುವುದು ಬಹುತೇಕ ಖಚಿತವಾಗಿದ್ದು ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ ಎಂದು ತಮಿಳುನಾಡು ಕಾಂಗ್ರೆಸ್‌ ಪಕ್ಷದ ಮೂಲಗಳು ಖಚಿತಪಡಿಸಿವೆ. ಈ ನಡುವೆ ತ್ರಿಷಾ ಡಿಎಂಕೆ ಅಥವಾ ಎಐಎಡಿಎಂಕೆ ಬಿಟ್ಟು ಕಾಂಗ್ರೆಸ್ ಪಕ್ಷ ಯಾಕೆ ಸೇರುತ್ತಿದ್ದಾರೆ ಎಂದು ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಸದ್ಯ ತ್ರಿಷಾಗೆ ಚಿತ್ರರಂಗದಲ್ಲಿ ಅವಕಾಶಗಳು ಕಡಿಮೆಯಾಗಿರುವುದಕ್ಕೆ ಅವರು ಪೂರ್ಣ ಪ್ರಮಾಣದಲ್ಲಿ ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂದು ಎನ್ನಲಾಗಿದೆ. ಈಗಾಗಲೇ ಅವರು ದಕ್ಷಿಣ ಭಾರತದ ಸಿನಿಮಾಗಳಲ್ಲಿ ನಟಿಸಿ ಖ್ಯಾತರಾಗಿದ್ದಾರೆ. ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ.

ತ್ರಿಷಾಗೆ ತಮಿಳುನಾಡಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಇರುವುದರಿಂದ ಅವರು ತಮ್ಮ ರಾಜಕೀಯ ಜೀವನವನ್ನು ಇಲ್ಲಿಂದಲೇ ಪ್ರಾರಂಭ ಮಾಡಲಿದ್ದಾರೆ. ಇನ್ನು ಕೆಲವು ದಿನಗಳಲ್ಲಿ ಕಾಂಗ್ರೆಸ್‌ ಸೇರುವ ಬಗ್ಗೆ ತ್ರಿಷಾ ಖಚಿತಪಡಿಸಲಿದ್ದಾರೆ. ರಾಹುಲ್‌ ಗಾಂಧಿ ತಮಿಳುನಾಡು ಪ್ರವಾಸ ಮಾಡುವ ಸಂದರ್ಭದಲ್ಲಿ ಅವರು ಪಕ್ಷಕ್ಕೆ ಸೇರಲಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ತೆಲುಗು, ತಮಿಳು ಭಾಷೆಗಳಲ್ಲಿ ತ್ರಿಶಾ ಸ್ಟಾರ್ ಹೀರೋಯಿನ್ ಆಗಿ ಮಿಂಚಿದ್ದು ಗೊತ್ತೇ ಇದೆ. ಬಹುತೇಕ ಎಲ್ಲಾ ಸ್ಟಾರ್ ಹೀರೋಗಳ ಎದುರು ನಾಯಕಿಯಾಗಿ ತ್ರಿಷಾ ನಟಿಸಿದ್ದರು. ಈ ಹಿಂದೆ ಮಾರಾಟವಾಗುವ ಸಿನಿಮಾಗಳ ಆವೇಗ ಕೊಂಚ ಕಡಿಮೆಯಾಗಿದೆ ಎಂದೇ ಹೇಳಬೇಕು. ಇತ್ತೀಚೆಗೆ ತ್ರಿಷಾ ತೆಲುಗು ಚಿತ್ರಗಳಿಂದ ದೂರ ಉಳಿದಿದ್ದಾರೆ. ತಮಿಳಿನಲ್ಲಿ ಲೇಡಿ ಓರಿಯೆಂಟೆಡ್ ಸಿನಿಮಾಗಳನ್ನು ಮಾಡುವ ಮೂಲಕ ತ್ರಿಷಾ ರಂಜಿಸಿದ್ದಾರೆ.

ಅಲ್ಲದೇ ತ್ರಿಷಾ ರಾಜಕೀಯ ಪ್ರವೇಶದ ಹಿಂದೆ ದಳಪತಿ ವಿಜಯ್ ಕೈವಾಡವಿದೆ ಎಂಬ ಸುದ್ದಿ ಕೂಡ ಕಾಲಿವುಡ್ ನಲ್ಲಿ ಕೇಳಿ ಬರುತ್ತಿದೆ. ತ್ರಿಷಾಗೆ ರಾಜಕೀಯಕ್ಕೆ ಬರುವಂತೆ ಪ್ರೋತ್ಸಾಹ ನೀಡುತ್ತಿದ್ದಾರೆ ಎನ್ನಲಾಗಿದೆ. ಮತ್ತು ಈ ಸುದ್ದಿಯಲ್ಲಿ ಸತ್ಯ ಏನು ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

'ವೃದ್ಧ ಸಮಾಜದತ್ತ ಶ್ರೀಲಂಕಾ': ಅತ್ಯಂತ ವೇಗವಾಗಿ ಹೆಚ್ಚುತ್ತಿದೆ ಹಿರಿಯರ ಸಂಖ್ಯೆ; 40 ವರ್ಷಗಳಲ್ಲಿ ಮೂರು ಪಟ್ಟು ಜಾಸ್ತಿ!

ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ; ಸಂಸತ್ ಭವನದ ಬಳಿ ಪ್ರಧಾನಿ ಮೋದಿ-Rahul Gandhi ಅಪರೂಪದ ಮುಖಾಮುಖಿ! Video

SCROLL FOR NEXT