ರವಿಚಂದ್ರನ್ ಪುತ್ರ ಮನೋರಂಜನ್- ಸಂಗೀತಾ ವಿವಾಹ ಕಾರ್ಯಕ್ರಮ 
ಸಿನಿಮಾ ಸುದ್ದಿ

ಗೃಹಸ್ಥಾಶ್ರಮಕ್ಕೆ ಕಾಲಿಟ್ಟ ನಟ ಮನೋರಂಜನ್- ಸಂಗೀತ 

ನಟ, ನಿರ್ದೇಶಕ, ವಿ ರವಿಚಂದ್ರನ್ ಪುತ್ರ ಮನೋರಂಜನ್- ಸಂಗೀತಾ ವಿವಾಹ ಇಂದು ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಿತು. 

ಬೆಂಗಳೂರು: ನಟ, ನಿರ್ದೇಶಕ, ವಿ ರವಿಚಂದ್ರನ್ ಪುತ್ರ ಮನೋರಂಜನ್- ಸಂಗೀತಾ ವಿವಾಹ ಇಂದು ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಿತು. 
 
ಪೋಷಕರು ನಿಶ್ಚಯಿಸಿದ ವಧುವನ್ನು ಮನೋರಂಜನ್ ವರಿಸಿದ್ದಾರೆ. ಮನೋರಂಜನ್-ಸಂಗೀತಾ ವಿವಾಹ ಕಾರ್ಯಕ್ರಮದ ಭಾಗವಾಗಿ ಆ.20 ರಂದು ನಡೆದ ಆರತಕ್ಷತೆ ಕಾರ್ಯಕ್ರಮದಲ್ಲಿ ನಟ ಡಾ.ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಹಂಸಲೇಖ ಸೇರಿದಂತೆ ಸ್ಯಾಂಡಲ್ ವುಡ್ ನ ಗಣ್ಯರು, ನಟ-ನಟಿಯರು, ಕಲಾವಿದರು ಭಾಗಿಯಾಗಿ ಶುಭಕೋರಿದರು. 

ಪುತ್ರನ ವಿವಾಹದ ಬಗ್ಗೆ ಮಾತನಾಡಿದ್ದ ರವಿಚಂದ್ರನ್ ಮಗಳು ಅಂಜಲಿ ರೀತಿಯಲ್ಲಿ ಮಗನ ಮದುವೆ ಮಾಡುತ್ತಿಲ್ಲ, ಹೆಣ್ಣಿನ ಕಡೆಯವರಿಗೆ ಆಡಂಬರ ಇಷ್ಟವಿಲ್ಲದ ಕಾರಣ ಸರಳವಾಗಿ ವಿವಾಹ ಮಾಡುತ್ತಿದ್ದೇವೆ ಎಂದು ಹೇಳಿದ್ದರು. 

ರವಿಚಂದ್ರನ್‌ ಚಿತ್ರರಂಗದವರು, ಆತ್ಮೀಯರಿಗಾಗಿ ಆಗಸ್ಟ್ 22ರಂದು ಕೂಡ ಮಗನ ಮದುವೆಯ ಆರತಕ್ಷತೆಯನ್ನು ಆಯೋಜಿಸಿದ್ದಾರೆ. ಆ ಆರತಕ್ಷತೆಗೆ ದೊಡ್ಡ ಮಟ್ಟದಲ್ಲಿ ಜನರು ಬರುವ ನಿರೀಕ್ಷೆಯಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT