ಸಿನಿಮಾ ಸುದ್ದಿ

ಗೃಹಸ್ಥಾಶ್ರಮಕ್ಕೆ ಕಾಲಿಟ್ಟ ನಟ ಮನೋರಂಜನ್- ಸಂಗೀತ 

Srinivas Rao BV

ಬೆಂಗಳೂರು: ನಟ, ನಿರ್ದೇಶಕ, ವಿ ರವಿಚಂದ್ರನ್ ಪುತ್ರ ಮನೋರಂಜನ್- ಸಂಗೀತಾ ವಿವಾಹ ಇಂದು ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಿತು. 
 
ಪೋಷಕರು ನಿಶ್ಚಯಿಸಿದ ವಧುವನ್ನು ಮನೋರಂಜನ್ ವರಿಸಿದ್ದಾರೆ. ಮನೋರಂಜನ್-ಸಂಗೀತಾ ವಿವಾಹ ಕಾರ್ಯಕ್ರಮದ ಭಾಗವಾಗಿ ಆ.20 ರಂದು ನಡೆದ ಆರತಕ್ಷತೆ ಕಾರ್ಯಕ್ರಮದಲ್ಲಿ ನಟ ಡಾ.ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಹಂಸಲೇಖ ಸೇರಿದಂತೆ ಸ್ಯಾಂಡಲ್ ವುಡ್ ನ ಗಣ್ಯರು, ನಟ-ನಟಿಯರು, ಕಲಾವಿದರು ಭಾಗಿಯಾಗಿ ಶುಭಕೋರಿದರು. 

ಪುತ್ರನ ವಿವಾಹದ ಬಗ್ಗೆ ಮಾತನಾಡಿದ್ದ ರವಿಚಂದ್ರನ್ ಮಗಳು ಅಂಜಲಿ ರೀತಿಯಲ್ಲಿ ಮಗನ ಮದುವೆ ಮಾಡುತ್ತಿಲ್ಲ, ಹೆಣ್ಣಿನ ಕಡೆಯವರಿಗೆ ಆಡಂಬರ ಇಷ್ಟವಿಲ್ಲದ ಕಾರಣ ಸರಳವಾಗಿ ವಿವಾಹ ಮಾಡುತ್ತಿದ್ದೇವೆ ಎಂದು ಹೇಳಿದ್ದರು. 

ರವಿಚಂದ್ರನ್‌ ಚಿತ್ರರಂಗದವರು, ಆತ್ಮೀಯರಿಗಾಗಿ ಆಗಸ್ಟ್ 22ರಂದು ಕೂಡ ಮಗನ ಮದುವೆಯ ಆರತಕ್ಷತೆಯನ್ನು ಆಯೋಜಿಸಿದ್ದಾರೆ. ಆ ಆರತಕ್ಷತೆಗೆ ದೊಡ್ಡ ಮಟ್ಟದಲ್ಲಿ ಜನರು ಬರುವ ನಿರೀಕ್ಷೆಯಿದೆ. 

SCROLL FOR NEXT