ಸಿನಿಮಾ ಸುದ್ದಿ

'ಜೊತೆಜೊತೆಯಲಿ' ಧಾರಾವಾಹಿ: ಅನಿರುದ್ಧ್ ಪಾತ್ರಕ್ಕೆ ವಿಕ್ರಾಂತ್ ರೋಣ ನಿರ್ದೇಶಕ ಅನೂಪ್ ಭಂಡಾರಿ?

Sumana Upadhyaya

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಜೊತೆಜೊತೆಯಲಿ' ಧಾರಾವಾಹಿಯ ನಾಯಕ ನಟ ಅನಿರುದ್ಧ್ ಹಾಗೂ ನಿರ್ದೇಶಕ ಆರೂರು ಜಗದೀಶ್ ಮತ್ತು ವಾಹಿನಿ ನಡುವಿನ ಭಿನ್ನಾಭಿಪ್ರಾಯ ತಾರಕಕ್ಕೇರಿ ಇತ್ತೀಚೆಗೆ ಇಬ್ಬರೂ ಸುದ್ದಿಗೋಷ್ಠಿ ನಡೆಸಿ ಆರೋಪ-ಪ್ರತ್ಯಾರೋಪಗಳನ್ನು ಮಾಡಿದ್ದರು.

ಈ ಮಧ್ಯೆ ಅನಿರುದ್ಧ್ ಅವರು ನಿರ್ವಹಿಸುತ್ತಿದ್ದ ಪಾತ್ರಕ್ಕೆ ವಿಕ್ರಾಂತ್ ರೋಣ, ರಂಗಿತರಂಗ ಖ್ಯಾತಿಯ ನಿರ್ದೇಶಕ ಅನೂಪ್ ಭಂಡಾರಿಯರನ್ನು ಚಾನೆಲ್ ಕರೆತರಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಬಗ್ಗೆ ನಿರ್ದೇಶಕರು ಮತ್ತು ಜೀ ಕನ್ನಡ ವಾಹಿನಿ ಕಡೆಯಿಂದ ಅಧಿಕೃತ ಮಾಹಿತಿ ಸಿಗಬೇಕಿದೆ.

SCROLL FOR NEXT