ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

ನಟಿ, ಸಂಸದೆ ಸುಮಲತಾ ಅಂಬರೀಷ್ ಹುಟ್ಟುಹಬ್ಬ: ಪುತ್ರ ಅಭಿಷೇಕ್ ನ ಮುಂದಿನ ಚಿತ್ರದ ಪೋಸ್ಟರ್ ಬಿಡುಗಡೆ

ಬಹುಭಾಷಾ ನಟಿ, ಸಂಸದೆ ಸುಮಲತಾ ಅಂಬರೀಶ್ ಇಂದು ಶನಿವಾರ ತಮ್ಮ 59ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಸಂದರ್ಭದಲ್ಲಿ ಅವರ ಪುತ್ರ ಅಭಿಷೇಕ್ ನ ಹೊಸ ಸಿನಿಮಾದ ಪೋಸ್ಟರ್ ಬಿಡುಗಡೆಯಾಗಿದ್ದು ಡಬಲ್ ಸಂಭ್ರಮ ನೀಡಿದೆ.

ಬಹುಭಾಷಾ ನಟಿ, ಸಂಸದೆ ಸುಮಲತಾ ಅಂಬರೀಶ್ ಇಂದು ಶನಿವಾರ ತಮ್ಮ 59ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಸಂದರ್ಭದಲ್ಲಿ ಅವರ ಪುತ್ರ ಅಭಿಷೇಕ್ ನ ಹೊಸ ಸಿನಿಮಾದ ಪೋಸ್ಟರ್ ಬಿಡುಗಡೆಯಾಗಿದ್ದು ಡಬಲ್ ಸಂಭ್ರಮ ನೀಡಿದೆ.

ಅಯೋಗ್ಯ ಚಿತ್ರ ಖ್ಯಾತಿಯ ಮಹೇಶ್ ಕುಮಾರ್ ನಿರ್ದೇಶನದ ಚಿತ್ರದಲ್ಲಿ ಅಭಿಷೇಕ್ ನಾಯಕ ನಟನಾಗಿ ನಟಿಸಲಿದ್ದು, ಚಿತ್ರದ ಹೊಸ ಪೋಸ್ಟರ್ ಇಂದು ಬಿಡುಗಡೆಯಾಗಿದೆ. ಪೋಸ್ಟರ್ ನಲ್ಲಿ ಖಡಕ್ ಲುಕ್ ನಲ್ಲಿ ಅಭಿಷೇಕ್ ಕಾಣಿಸಿಕೊಂಡಿದ್ದಾರೆ. 

ಅಂಬರೀಶ್ ಅವರ ಹುಟ್ಟು ಹಬ್ಬದಂದು ಘೋಷಣೆಯಾಗಿದ್ದ ಅಭಿಷೇಕ್ ಅಂಬರೀಶ್ ಅವರ ಈ ಸಿನಿಮಾದ ಮುಹೂರ್ತ ಇಂದು ಅಂಬರೀಶ್ ಅವರ ಸಮಾಧಿ ಹತ್ತಿರ ನೆರವೇರಿತು. ಸುಮಲತಾ ಅಂಬರೀಶ್ ಅವರ ಹುಟ್ಟು ಹಬ್ಬವಾಗಿದ್ದರಿಂದ ಈ ಸಂದರ್ಭವನ್ನು ಸಿನಿಮಾ ತಂಡ ಬಳಸಿಕೊಂಡು, ಮೋಷನ್ ಪೋಸ್ಟರ್ ಬಿಡುಗಡೆ ಮತ್ತು ನಿರ್ಮಾಪಕರ ಹೆಸರು ಘೋಷಣೆ ಮಾಡಲಾಯಿತು.

ರಾಕ್ ಲೈನ್ ವೆಂಕಟೇಶ್ ಅವರ ರಾಕ್ ಲೈನ್ ಪ್ರೊಡಕ್ಷನ್ ಈ ಚಿತ್ರವನ್ನು ತಯಾರು ಮಾಡಲಿದೆ. ಈ ವರ್ಷ ಈಗಾಗಲೇ ಎರಡು ಸಿನಿಮಾಗಳನ್ನು ಘೋಷಣೆ ಮಾಡಿರುವ ರಾಕ್ ಲೈನ್ ಸಂಸ್ಥೆ, ಸುಮಲತಾ ಅವರ ಹುಟ್ಟು ಹಬ್ಬಕ್ಕಾಗಿ ಅವರ ಪುತ್ರ ಅಭಿಷೇಕ್ ಅವರ ಹೊಸ ಸಿನಿಮಾವನ್ನೂ ತಯಾರು ಮಾಡುತ್ತಿರುವುದಾಗಿ ತಿಳಿಸಿದೆ.

ದುನಿಯಾ ಸೂರಿ ನಿರ್ದೇಶನದ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾದ ನಂತರ ಅಭಿಷೇಕ್ ಅವರ ಮುಂದಿನ ಚಿತ್ರ ಇದಾಗಿದ್ದು, ಸದ್ಯಕ್ಕೆ ‘AA04’ ಎಂದು ಪೋಸ್ಟರ್ ನಲ್ಲಿ ಪ್ರಿಂಟ್ ಹಾಕಿಸಲಾಗಿದ್ದು ಮುಂದಿನ ದಿನಗಳಲ್ಲಿ ಚಿತ್ರತಂಡ ಶೀರ್ಷಿಕೆಯನ್ನು ಘೋಷಣೆ ಮಾಡಲಿದೆ. ಒಬ್ಬ ಹೋರಾಟಗಾರನ ಕಥೆಯನ್ನು ಹೇಳುವ ಚಿತ್ರ ಇದಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT