ವೈಜನಾಥ್ ಬಿರಾದಾರ್ 
ಸಿನಿಮಾ ಸುದ್ದಿ

ವೈಜನಾಥ್ ಬಿರಾದಾರ್ ನಟನೆಯ 500 ನೇ ಚಿತ್ರ '90 ಬಿಡಿ ಮನಿಗ್ ನಡಿ: 70 ನೇ ವಯಸ್ಸಿನಲ್ಲಿ ನಾಯಕನಾದ ಹಾಸ್ಯನಟ!

ಎಪ್ಪತ್ತರ ವಯಸ್ಸಿನಲ್ಲೂ ಇಪ್ತತ್ತರ ಯುವಕನ ಉತ್ಸಾಹ ಹೊಂದಿರುವ, ತಮ್ಮ ಕಾಮಿಡಿ ಪಾತ್ರಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ ಬಿರಾದಾರ್ '90 ಬಿಡಿ ಮನೀಗ್ ನಡಿ' ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದಾರೆ.

ಎಪ್ಪತ್ತರ ವಯಸ್ಸಿನಲ್ಲೂ ಇಪ್ತತ್ತರ ಯುವಕನ ಉತ್ಸಾಹ ಹೊಂದಿರುವ, ತಮ್ಮ ಕಾಮಿಡಿ ಪಾತ್ರಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ ಬಿರಾದಾರ್ '90 ಬಿಡಿ ಮನೀಗ್ ನಡಿ' ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದಾರೆ.

ಇದು ಅವರ ನಟನೆಯ 500ನೇ ಚಿತ್ರವಾಗಿದ್ದು, ಇತ್ತೀಚೆಗೆ ಚಿತ್ರತಂಡ ಶೂಟಿಂಗ್ ಪೂರ್ಣಗೊಳಿಸಿದೆ. ಉಮೇಶ್ ಬಾದರದಿನ್ನಿ ಹಾಗೂ ನಾಗರಾಜ ಅರೆಹೊಳೆ ಕಥೆ ಬರೆದು, ಜಂಟಿಯಾಗಿ ನಿರ್ದೇಶಿಸಿರುವ ಈ ಚಿತ್ರಕ್ಕೆ ರತ್ನಮಾಲ ಬಾದರದಿನ್ನಿ ಬಂಡವಾಳ ಹೂಡಿದ್ದಾರೆ.

ಇತ್ತೀಚೆಗೆ ಈ ಸಿನಿಮಾದ ಸಿಂಗಲ್ ಕಣ್, ಡಬಲ್ ಹಾರ್ನ್, ಎಂಬ ಹಾಡಿಗೆ ಬಿರಾದಾರ್ ಹೆಜ್ಜೆ ಹಾಕಿದ್ದಾರೆ.  ಬಿರಾದಾರ್ ಜೊತೆಗೆ ನಾಯಕಿ ನೀತಾ ಮೈಂದರಗಿಗೆ ಭೂಷಣ್ ನೃತ್ಯ ಸಂಯೋಜನೆ ಮಾಡಿದ್ದಾರೆ. ಶಿವು ಬೆರಗಿ ರಚಿಸಿರುವ ಈ ಹಾಡಿಗೆ ಸ್ಟೆಪ್ ಹಾಕಲು ಬಿರಾದಾರ್‌ಗೆ ಐದು ದಿನಗಳ ಪ್ರಾಕ್ಟೀಸ್ ಮಾಡಿದ್ದಾರೆ.

ಸಾವಿರಕ್ಕೂ ಹೆಚ್ಚು ನಾಟಕಗಳಲ್ಲಿ ಅಭಿನಯಿಸಿ ಸೈ ಎನ್ನಿಸಿಕೊಂಡಿರುವ ರಂಗಭೂಮಿ ಕಲಾವಿದೆ ನೀತು. ಈ ಚಿತ್ರದಲ್ಲಿ ವೈಜನಾಥ್ ಬಿರಾದಾರ್ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಡ್ಯಾನ್ಸ್ ಜೊತೆಗೆ ಫೈಟ್ ಮಾಡಿರೋ ವೈಜನಾಥ್ ಬಿರಾದಾರ್ ಮಾತನಾಡಿ, ಈ ಚಿತ್ರದಲ್ಲಿ ನಾನು ಪೇಪರ್ ಆಯುವ ಪಾತ್ರ ಮಾಡಿದ್ದೀನಿ.

ಈ ಸಿನಿಮಾದಲ್ಲಿ ಸಂದೇಶ ಇದೆ. ನಿರ್ದೇಶಕರು ಹಾಗು ನಿರ್ಮಾಪಕರು ಇದ್ದರೆ ನಮ್ಮಂಥ ಕಲಾವಿದರು ಬೆಳೆಯೋದಿಕ್ಕೆ ಕಾರಣ. ಜೊತೆಗೆ ಕಲ್ಲಿನಂಥ ಕಲಾವಿದನನ್ನು ಶಿಲ್ಪಿ ಮಾಡುವ ತಾಖತ್ ಇರೋದು ನಿರ್ದೇಶಕನಿಗೆ ಎಂದು ಹೇಳಿದರು. ಚಿತ್ರದಲ್ಲಿ ರತ್ನಮಾಲ ಬಾದರದಿನ್ನಿ‌ ಈ ಚಿತ್ರವನ್ನ ನಿರ್ಮಾಣ ಮಾಡಿದ್ದಾರೆ. ಸದ್ಯ ಟ್ರೈಲರ್ ಹಾಗು ಹಾಡುಗಳಿಂದ ಗಮನ ಸೆಳೆಯುತ್ತಿದೆ.

ಉತ್ತಮ ಸಂದೇಶ ಹೇಳುವಂತ ಕಥಾಹಂದರವನ್ನಿಟ್ಟುಕೊಂಡು ಉತ್ತರ ಕರ್ನಾಟಕ ಶೈಲಿಯಲ್ಲಿ ಕಥೆ ಹೇಳಲು ಹೊರಟ್ಟಿದ್ದೇವೆ. ಎಂಭತ್ತು ಭಾಗದಷ್ಟು ಸಂಭಾಷಣೆ ಉತ್ತರ ಕರ್ನಾಟಕ ಶೈಲಿಯಲ್ಲಿರುತ್ತದೆ. ಹಾಗಾಗಿ ನಮಗೆ ಉತ್ತರ ಕರ್ನಾಟಕದ ಕಲಾವಿದನೇ ಬೇಕಾಗಿತ್ತು. ಆಗ ಬಿರಾದಾರ್ ಅವರನ್ನು ಆಯ್ಕೆ ಮಾಡಿಕೊಂಡೆವು.‌ ಅವರ 500 ನೇ ಚಿತ್ರವನ್ನು ನಿರ್ದೇಶಿಸುತ್ತಿರುವುದು ಸಂತೋಷವಾಗಿದೆ ಎನ್ನುತ್ತಾರೆ ನಿರ್ದೇಶಕರಾದ ಉಮೇಶ್ ಬಾದರದಿನ್ನಿ ಹಾಗೂ ನಾಗರಾಜ ಅರೆಹೊಳೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT