ಮೇಘನಾ ಗಾಂವ್ಕರ್ ಮತ್ತು ರಮೇಶ್ ಅರವಿಂದ್ 
ಸಿನಿಮಾ ಸುದ್ದಿ

ರಮೇಶ್ ಅರವಿಂದ್ ನಟನೆಯ ಶಿವಾಜಿ ಸುರತ್ಕಲ್-2: ಮೇಘನಾ ಗಾಂವ್ಕರ್ ಗೆ ದಕ್ಷ ಮಹಿಳಾ ಪೊಲೀಸ್ ಅಧಿಕಾರಿ ದೀಪಾ ಕಾಮತ್ ಪಾತ್ರ!

ಶಿವಾಜಿ ಸುರತ್ಕಲ್ 2 ಸಿನಿಮಾದಲ್ಲಿ ದಕ್ಷ ಪೊಲೀಸ್ ಅಧಿಕಾರಿಯಾಗಿ ಮೇಘನಾ ಗಾಂವ್ಕರ್ ಕಾಣಿಸಿಕೊಳ್ಳುತ್ತಿದ್ದಾರೆ.

2020ರಲ್ಲಿ ತೆರೆಕಂಡು ಯಶಸ್ವಿಯಾದ ಸಿನಿಮಾ‌ ಶಿವಾಜಿ ಸುರತ್ಕಲ್ ರಮೇಶ್ ಅರವಿಂದ್ ಮುಖ್ಯ ಭೂಮಿಕೆಯಲ್ಲಿದ್ದ ಈ‌ ಚಿತ್ರದ ಮುಂದಿನ ಸರಣಿ, ಶಿವಾಜಿ ಸುರತ್ಕಲ್ 2 ಸಿನಿಮಾದಲ್ಲಿ ದಕ್ಷ ಪೊಲೀಸ್ ಅಧಿಕಾರಿಯಾಗಿ ಮೇಘನಾ ಗಾಂವ್ಕರ್ ಕಾಣಿಸಿಕೊಳ್ಳುತ್ತಿದ್ದಾರೆ.

ಡಿಸಿಪಿ ದೀಪಾ ಕಾಮತ್ ಎಂಬ ಪಾತ್ರದಲ್ಲಿ ಮೇಘನಾ ಕಾಣಿಸಿಕೊಂಡಿದ್ದಾರೆ. ಸಾಕಷ್ಟು ಯುವ ಮಹಿಳಾ ಪೊಲೀಸ್ ಅಧಿಕಾರಿಗಳ ಬಗ್ಗೆ ಅಧ್ಯಯನ ನಡೆಸಿರುವ ನಿರ್ದೇಶಕ ಆಕಾಶ್ ಶ್ರೀವತ್ಸ ಈ ಪಾತ್ರವನ್ನು ಸೃಷ್ಟಿಸಿದ್ದಾರೆ.

ವಿಶೇಷವೇನೆಂದರೆ ನಿಜ ಜೀವನದಲ್ಲಿ ಮೇಘನಾ ಅವರ ತಂದೆ ಕೂಡ ಒಬ್ಬ ಪೊಲೀಸ್ ಅಧಿಕಾರಿಯಾಗಿದ್ದು, ಈ ಪಾತ್ರದ ತಯಾರಿಗೆ ಮತ್ತಷ್ಟು ಸಹಕಾರಿಯಾಯಿತು. ಇನ್ನು ಚಿತ್ರದಲ್ಲಿ ಮೇಘನಾ ಅವರದ್ದು ಶಿವಾಜಿಯ ಮೇಲಧಿಕಾರಿಯ ಪಾತ್ರವಾಗಿದ್ದು, ತನಿಖೆಯ ಪ್ರತಿ ಹಂತದಲ್ಲೂ ಶಿವಾಜಿಯ ಜೊತೆಗಿದ್ದು ಚಿತ್ರಕ್ಕೆ ನಿಜವಾದ ಪೊಲೀಸ್ ಪವರ್ ಸಿಗುವಂತೆ ಮಾಡಿದ್ದಾರೆ. ಶಿವಾಜಿ ಸುರತ್ಕಲ್ 2 ಚಿತ್ರತಂಡ ರಮೇಶ್ ಅರವಿಂದ್ ಅವರ ಹುಟ್ಟು ಹಬ್ಬದ(ಸೆ.10) ದಿನ ಟೀಸರ್ ಬಿಡುಗಡೆ ಮಾಡಲು ತಯಾರಿ ಮಾಡಿಕೊಳ್ಳುತ್ತಿದೆ. ಉಳಿದಂತೆ ಸಿನಿಮಾದ ಚಿತ್ರೀಕರಣ ಕೊನೆಯ ಹಂತದಲ್ಲಿದ್ದು, ಡಬ್ಬಿಂಗ್ ಕೆಲಸಗಳು ಶುರುವಾಗಿದೆ.

ಚಿತ್ರಕ್ಕೆ ಜೂಡ ಸ್ಯಾಂಡಿರವರ ಸಂಗೀತ ಮತ್ತು ದರ್ಶನ್ ಅಂಬಟ್, ಗುರು ಪ್ರಸಾದ್ ಎಂ ಜಿ ಛಾಯಾಗ್ರಹಣವಿದೆ. ಅಂಜನಾದ್ರಿ ಸಿನಿ ಕ್ರಿಯೇಶನ್ಸ್​ನಲ್ಲಿ ರೇಖಾ ಕೆ.ಎನ್ ಮತ್ತು ಅನುಪ್ ಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಆಕಾಶ್ ಶ್ರೀವತ್ಸ ಅವರು ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಶಿವಾಜಿ ಸುರತ್ಕಲ್ 2 ಚಿತ್ರದಲ್ಲಿ ರಘು ರಾಮನಕೊಪ್ಪ, ರಾಧಿಕಾ ನಾರಾಯಣ್, ಶೋಭರಾಜ್, ಶ್ರೀನಿವಾಸ ಪ್ರಭು ಮತ್ತು ಸುಮಂತ್ ಭಟ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರವು ಸೃಷ್ಟಿ ಶೆಟ್ಟಿ ಮತ್ತು ಮಧುರಾ ಗೌಡ ಅವರ ಚೊಚ್ಚಲ ಚಿತ್ರವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT