ಕೈ ಕೈ ಹಿಡಿದುಕೊಂಡು ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕಾಣಿಸಿಕೊಂಡಿದ್ದ ವಸಿಷ್ಠ ಸಿಂಹ-ಹರಿಪ್ರಿಯಾ 
ಸಿನಿಮಾ ಸುದ್ದಿ

ವಸಿಷ್ಠ ಸಿಂಹ- ಹರಿಪ್ರಿಯಾ ದುಬೈಯಲ್ಲಿ ಸದ್ಯದಲ್ಲೇ ಹಸೆಮಣೆಗೆ?: ಸ್ಯಾಂಡಲ್ ವುಡ್ ನಲ್ಲಿ ದಟ್ಟವಾಗಿದೆ ವದಂತಿ

ಸ್ಯಾಂಡಲ್ ವುಡ್ ನಲ್ಲಿ ಈಗ ಮದುವೆ ಸೀಸನ್ ಆರಂಭವಾಗಿದೆ ಎಂಬ ಮಾತುಗಳು ದಟ್ಟವಾಗಿ ಕೇಳಿಬರುತ್ತಿವೆ. ಇತ್ತೀಚೆಗೆ ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್ ನಲ್ಲಿ ಉದ್ಯಮಿ ಯಶಸ್ವಿ ಪಟ್ಲ ಜೊತೆ ನಟಿ ಅದಿತಿ ಪ್ರಭುದೇವ ಹಸೆಮಣೆ ಏರಿದರು.

ಸ್ಯಾಂಡಲ್ ವುಡ್ ನಲ್ಲಿ ಈಗ ಮದುವೆ ಸೀಸನ್ ಆರಂಭವಾಗಿದೆ ಎಂಬ ಮಾತುಗಳು ದಟ್ಟವಾಗಿ ಕೇಳಿಬರುತ್ತಿವೆ. ಇತ್ತೀಚೆಗೆ ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್ ನಲ್ಲಿ ಉದ್ಯಮಿ ಯಶಸ್ವಿ ಪಟ್ಲ ಜೊತೆ ನಟಿ ಅದಿತಿ ಪ್ರಭುದೇವ ಹಸೆಮಣೆ ಏರಿದರು.

ನಂತರ ಹಿರಿಯ ನಟ, ರಾಜಕಾರಣಿ ದಿವಂಗತ ಅಂಬರೀಷ್, ಸಂಸದೆ ಸುಮಲತಾ ಪುತ್ರ ನಟ ಅಭಿಷೇಕ್ ಮದುವೆ ಸಿದ್ದತೆಗಳು ನಡೆಯುತ್ತಿವೆ. ಶೀಘ್ರದಲ್ಲಿಯೇ ಮಾಡೆಲ್ ಅವಿವಾ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ.

ಇತ್ತೀಚೆಗೆ ಮೂಗುತಿ ಚುಚ್ಚಿಸಿಕೊಂಡ ನಟಿ ಹರಿಪ್ರಿಯಾ ಇನ್ಸ್ಟಾಗ್ರಾಂನಲ್ಲಿ ವಿಡಿಯೊ ಹಂಚಿಕೊಂಡಾಗ ಅವರ ಮದುವೆ ಸುದ್ದಿ ಗುಸುಗುಸು ಕೇಳಿಬಂತು. ವಿಡಿಯೊದಲ್ಲಿ ನಟ ವಸಿಷ್ಠ ಸಿಂಹ ಇದ್ದರು, ಅವರು ಹರಿಪ್ರಿಯಾಗೆ ಮೂಗು ಚುಚ್ಚಿದಾಗ ನೋವಾದಾಗ ಸಮಾಧಾನ ಮಾಡಿದರು ಎಂದು ಹೇಳಲಾಗುತ್ತಿತ್ತು. ಈ ವದಂತಿಗಳ ಮಧ್ಯೆ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಇಬ್ಬರೂ ಕೈಕೈ ಹಿಡಿದು ನಡೆದುಕೊಂಡು ಹೋಗಿದ್ದು ಕ್ಯಾಮರಾ ಕಣ್ಣಿಗೆ ಬಿದ್ದರು. ಸ್ಯಾಂಡಲ್ ವುಡ್ ನ ಈ ಜೋಡಿ ದುಬೈಗೆ ರಜೆ ಕಳೆಯಲೆಂದು ಹೋಗಿದ್ದಾರೆ ಎಂದು ಹೇಳಲಾಗುತ್ತಿತ್ತು.

ಆದರೆ ಈಗ ಕೇಳಿಬರುತ್ತಿರುವ ಮತ್ತೊಂದು ಸುದ್ದಿಯೆಂದರೆ, ದುಬೈಯಲ್ಲಿ ಈ ತಾರಾ ಜೋಡಿ ಸದ್ಯದಲ್ಲಿಯೇ ಹಸೆಮಣೆಗೆ ಏರಲಿದ್ದಾರೆ ಎಂಬುದು. ಅದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಂಡು ಬರಲು ದುಬೈಗೆ ಹೋಗಿದ್ದರು ಎಂದು ಹೇಳಲಾಗುತ್ತಿದೆ. ಈಗಷ್ಟೇ ಇವರಿಬ್ಬರೂ ದುಬೈ ಪ್ರವಾಸ ಮುಗಿಸಿಕೊಂಡು ಬಂದಿದ್ದು ಇಷ್ಟೆಲ್ಲಾ ರೂಮರ್ ಗಳು ಕೇಳಿಬರುತ್ತಿದ್ದರೂ ಗುಟ್ಟುಬಿಟ್ಟುಕೊಟ್ಟಿಲ್ಲ.

ಇತ್ತೀಚೆಗೆ ಇಬ್ಬರೂ ಹುಟ್ಟುಹಬ್ಬ ಶುಭಾಶಯಗಳನ್ನು ಪರಸ್ಪರ ತಿಳಿಸುವ ಸಂದರ್ಭದಲ್ಲಿ ಪಾರ್ಟ್ನರ್ ಎಂದು ಸಂಬೋಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT