ನಿರ್ದೇಶಕ ಎಸ್ಎಸ್ ರಾಜಮೌಳಿ 
ಸಿನಿಮಾ ಸುದ್ದಿ

ಆರ್‌ಆರ್‌ಆರ್: ನ್ಯೂಯಾರ್ಕ್ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್‌ನಿಂದ ರಾಜಮೌಳಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ

ಟಾಲಿವುಡ್‌ನ ಖ್ಯಾತ ನಿರ್ದೇಶಕ ಎಸ್ಎಸ್ ರಾಜಮೌಳಿ ಅವರಿಗೆ ತಮ್ಮ ಆರ್‌ಆರ್‌ಆರ್ ಸಿನಿಮಾಗಾಗಿ ನ್ಯೂಯಾರ್ಕ್ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್ (ಎನ್‌ವೈಎಫ್‌ಸಿಸಿ) ನಿಂದ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಗೆದ್ದಿದ್ದಾರೆ ಎಂದು 'ವೆರೈಟಿ' ಮ್ಯಾಗಜಿನ್ ವರದಿ ಮಾಡಿದೆ.

ನ್ಯೂಯಾರ್ಕ್: ಟಾಲಿವುಡ್‌ನ ಖ್ಯಾತ ನಿರ್ದೇಶಕ ಎಸ್ಎಸ್ ರಾಜಮೌಳಿ ಅವರಿಗೆ ತಮ್ಮ ಆರ್‌ಆರ್‌ಆರ್ ಸಿನಿಮಾಗಾಗಿ ನ್ಯೂಯಾರ್ಕ್ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್ (ಎನ್‌ವೈಎಫ್‌ಸಿಸಿ) ನಿಂದ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಗೆದ್ದಿದ್ದಾರೆ ಎಂದು 'ವೆರೈಟಿ' ಮ್ಯಾಗಜಿನ್ ವರದಿ ಮಾಡಿದೆ.

ಶುಕ್ರವಾರ ನಡೆದ ಗಾಲಾ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ರಾಜಮೌಳಿ ಅವರಿಗೆ ಪ್ರಶಸ್ತಿಯನ್ನು ನೀಡಲಾಗಿದೆ.

ಅಕಾಡೆಮಿ ಪ್ರಶಸ್ತಿಗಳ ಅಂತರರಾಷ್ಟ್ರೀಯ ಫೀಚರ್ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಲು 'ಆರ್‌ಆರ್‌ಆರ್' ಸಿನಿಮಾ ಆಯ್ಕೆಯಾಗದಿದ್ದರೂ, ಅತ್ಯುತ್ತಮ ಚಿತ್ರ ಸೇರಿದಂತೆ ಸಾಮಾನ್ಯ ವಿಭಾಗಗಳಲ್ಲಿ ಗುರುತಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಮತ್ತು 'ವೆರೈಟಿ' ಮ್ಯಾಗಜಿನ್ ಹೇಳುವಂತೆ, ಇದೊಂದು ಯಶಸ್ವಿ ಸಿನಿಮಾದಂತೆ ತೋರುತ್ತದೆ. ರಾಜಮೌಳಿ ಅವರ ಗೆಲುವು ಬಲವಾದ ಪ್ರಭಾವವನ್ನುಂಟು ಮಾಡುತ್ತದೆ ಎಂದು ಎಂದು ಬಣ್ಣಿಸಲಾಗಿದೆ.

‘ಆರ್​ಆರ್​ಆರ್’ ಸಿನಿಮಾದಲ್ಲಿ ಜೂನಿಯರ್ ಎನ್​ಟಿಆರ್​, ರಾಮ್ ಚರಣ್, ಆಲಿಯಾ ಭಟ್, ಅಜಯ್ ದೇವಗನ್, ಶ್ರಿಯಾ ಶರಣ್​ ಸೇರಿದಂತೆ ಬಹುದೊಡ್ಡ ತಾರಾಗಣವೇ ಇದೆ. ಈ ವರ್ಷದ ಮಾರ್ಚ್ ತಿಂಗಳಲ್ಲಿ ಬಿಡುಗಡೆಯಾದ ಈ ಸಿನಿಮಾವನ್ನು ತೆಲುಗಿನ ಸ್ವಾತಂತ್ರ್ಯ ಹೋರಾಟಗಾರರಾದ ಅಲ್ಲೂರಿ ಸೀತಾರಾಮ ರಾಜು ಮತ್ತು ಕೊಮರಂ ಭೀಮ್ ಅವರನ್ನಿಟ್ಟುಕೊಂಡು ಮಾಡಿದ ಕಾಲ್ಪನಿಕ ಕಥೆಯಾಗಿದೆ. ಈ ಸಿನಿಮಾವು ಬಾಕ್ಸ್ ಆಪೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿತ್ತು.

‘ಫಾರ್ ಯುವರ್ ಕನ್ಸಿಡರೇಷನ್’ ಅಡಿಯಲ್ಲಿ 14 ವಿಭಾಗಗಳಲ್ಲಿ ‘ಆರ್‌ಆರ್‌ಆರ್’ ಚಿತ್ರಕ್ಕಾಗಿ ಅರ್ಜಿ ಸಲ್ಲಿಸಲಾಗಿತ್ತು. ಅತ್ಯುತ್ತಮ ನಿರ್ಮಾಪಕ (ಡಿವಿವಿ ದಾನಯ್ಯ), ಅತ್ಯುತ್ತಮ ನಿರ್ದೇಶಕ (ಎಸ್‌ಎಸ್ ರಾಜಮೌಳಿ), ಅತ್ಯುತ್ತಮ ನಟ (ಜೂನಿಯರ್ ಎನ್‌ಟಿಆರ್ ಮತ್ತು ರಾಮ್ ಚರಣ್), ಅತ್ಯುತ್ತಮ ಪೋಷಕ ನಟ (ಅಜಯ್ ದೇವಗನ್), ಅತ್ಯುತ್ತಮ ಪೋಷಕ ನಟಿ (ಆಲಿಯಾ ಭಟ್) ಅವರನ್ನು ಪರಿಗಣಿಸುವಂತೆ ಹೇಳಲಾಗಿತ್ತು ಎಂದು ನಿರ್ದೇಶಕ ರಾಜಮೌಳಿ ಅವರು ಟ್ವೀಟ್ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza deal: ಹಮಾಸ್‌ಗೆ ಮೂರ್ನಾಲ್ಕು ದಿನಗಳ ಗಡುವು, ನಕಾರ ಮಾಡಿದ್ರೆ 'ನರಕ'ಕ್ಕೆ ದಾರಿ ತೋರಿಸ್ತಿವಿ! ಟ್ರಂಪ್ ಗುಡುಗು

ನಾನು ಜೋಕರ್ ರೀತಿ ನಿಂತಿದ್ದೆ: ಏಷ್ಯಾಕಪ್ ಟ್ರೋಫಿ ಖಾಸಗಿ ವ್ಯಕ್ತಿಯ ಆಸ್ತಿಯಲ್ಲ, BCCI ಉಪಾಧ್ಯಕ್ಷರ ಪ್ರಶ್ನೆಗೆ ನಖ್ವಿ ತತ್ತರ!

Rahul Security: ರಾಹುಲ್, ಸೋನಿಯಾ, ಪ್ರಿಯಾಂಕಾ ಜೀವಕ್ಕೆ ಅಪಾಯ: ಭದ್ರತೆ ಹೆಚ್ಚಳಕ್ಕೆ ಕಾಂಗ್ರೆಸ್ ಒತ್ತಾಯ

ಬೆಂಗಳೂರಿನ ಐದು ಹೊಸ ಪಾಲಿಕೆಗಳಿಗೆ 368 ವಾರ್ಡ್ ರಚನೆ: ಪಶ್ಚಿಮ ಪಾಲಿಕೆಗೆ ಗರಿಷ್ಠ 111 ವಾರ್ಡ್

ಬಿಹಾರ SIR ನಂತರ ಚುನಾವಣಾ ಆಯೋಗದಿಂದ ಅಂತಿಮ ಮತದಾರರ ಪಟ್ಟಿ ಬಿಡುಗಡೆ

SCROLL FOR NEXT