ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ಕೇರಳ ಕೋರ್ಟ್ ವಿಘ್ನ ನಿವಾರಣೆ: ಕಾಂತಾರ ಚಿತ್ರಕ್ಕೆ 'ವರಾಹ ರೂಪಂ‌' ಹಾಡು ಮರುಸೇರ್ಪಡೆ

'ಕಾಂತಾರ' ಚಿತ್ರದ 'ವರಾಹ ರೂಪಂ' ಹಾಡಿನ ಕುರಿತು ಕೇರಳದ ಕೋರ್ಟ್​ ನೀಡಿದ್ದ ತಡೆಯಾಜ್ಞೆ ತೆರವುಗೊಂಡಿದ್ದು, ಈ ಹಿನ್ನೆಲೆಯಲ್ಲಿ ಆ ಹಾಡು ಇಂದಿನಿಂದ ಚಿತ್ರಮಂದಿರ, ಯೂಟ್ಯೂಬ್​, ಓಟಿಟಿ ಸೇರಿದಂತೆ ಎಲ್ಲೆಡೆ ಲಭ್ಯವಿದೆ.

ಪಾಲಕ್ಕಾಡ್ (ಕೇರಳ): 'ಕಾಂತಾರ' ಚಿತ್ರದ' ವರಾಹ ರೂಪಂ' ಹಾಡಿನ ಕುರಿತು ಕೇರಳದ ಕೋರ್ಟ್​ ನೀಡಿದ್ದ ತಡೆಯಾಜ್ಞೆ ತೆರವುಗೊಂಡಿದ್ದು, ಈ ಹಿನ್ನೆಲೆಯಲ್ಲಿ ಆ ಹಾಡು ಇಂದಿನಿಂದ ಚಿತ್ರಮಂದಿರ, ಯೂಟ್ಯೂಬ್​, ಓಟಿಟಿ ಸೇರಿದಂತೆ ಎಲ್ಲೆಡೆ ಲಭ್ಯವಿದೆ.

ಇದಕ್ಕೂ ಮುನ್ನ, ‘ವರಾಹ ರೂಪಂ’ ಹಾಡನ್ನು ಯೂಟ್ಯೂಬ್ ಸೇರಿದಂತೆ ಯಾವುದೇ ಪ್ಲಾಟ್‌ಫಾರ್ಮ್‌ಗಳಲ್ಲಿ ಒಪ್ಪಿಗೆ ಇಲ್ಲದೆ ಬಳಸಬಾರದು ಎಂದು ಕೇರಳದ ಕೋರ್ಟ್​ ಆದೇಶ ಹೊರಡಿಸಿತ್ತು.

ಕಾಂತಾರ ಸಿನಿಮಾದಲ್ಲಿ ʼವರಾಹ ರೂಪಂʼ ಗೀತೆಯನ್ನು ಬಳಕೆ ಮಾಡುವ ಮೂಲಕ ಹಕ್ಕುಸ್ವಾಮ್ಯ ಉಲ್ಲಂಘಿಸಲಾಗಿದೆ ಎಂದು ಆಕ್ಷೇಪಿಸಿ ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್‌ ವಿರುದ್ಧ ಮಾತೃಭೂಮಿ ಪ್ರಿಂಟಿಂಗ್‌ ಅಂಡ್‌ ಪಬ್ಲಿಷಿಂಗ್‌ ಲಿಮಿಟೆಡ್‌ (ಎಂಪಿಪಿಸಿಎಲ್) ದಾವೆ ಹೂಡಿತ್ತು. ಈ ದಾವೆಯನ್ನು ಕೇರಳ ನ್ಯಾಯಾಲಯವು ಶನಿವಾರ ಹಿಂದಿರುಗಿಸಿದೆ.

ಎಂಪಿಸಿಸಿಎಲ್‌ ಕಂಪೆನಿಯು ಕೋರಿಕ್ಕೋಡ್‌ನಲ್ಲಿ ನೋಂದಾಯಿತ ಕಚೇರಿ ಹೊಂದಿರುವುದರಿಂದ ಕೋರಿಕ್ಕೋಡ್‌ ಜಿಲ್ಲಾ ನ್ಯಾಯಾಲಯವು ವ್ಯಾಪ್ತಿ ಹೊಂದಿದೆ ಎಂದು ಪಾಲಕ್ಕಾಡ್‌ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ದೂರನ್ನು ಹಿಂದಿರುಗಿಸಿದೆ. ಹೀಗಾಗಿ, ಸದ್ಯಕ್ಕೆ ಕಾಂತಾರ ಸಿನಿಮಾದಲ್ಲಿ ʼವರಾಹ ರೂಪಂʼ ಗೀತೆ ಬಳಕೆಗೆ ಯಾವುದೇ ಪ್ರತಿಬಂಧಕಾದೇಶ ಉಳಿದಿಲ್ಲ.

ಈ ಹಿಂದೆ, ʼವರಾಹ ರೂಪಂʼ ಗೀತೆ ಬಳಸದಂತೆ ಕೋರಿಕ್ಕೋಡ್‌ ಮತ್ತು ಪಾಲಕ್ಕಾಡ್‌ ಜಿಲ್ಲಾ ನ್ಯಾಯಾಲಯಗಳು ಪ್ರತ್ಯೇಕವಾಗಿ ಪ್ರತಿಬಂಧಕಾದೇಶ ಮಾಡಿದ್ದವು. ವ್ಯಾಪ್ತಿಯ ಕಾರಣ ನೀಡಿ ಮೊದಲಿಗೆ ಕೋರಿಕ್ಕೋಡ್‌ ನ್ಯಾಯಾಲಯವು ದಾವೆ ಹಿಂದಿರುಗಿಸಿತ್ತು. ಈಗ ಪಾಲಕ್ಕಾಡ್‌ ನ್ಯಾಯಾಲಯವೂ ದೂರನ್ನು ಹಿಂದಿರುಗಿಸಿರುವುದರಿಂದ ಸಿನಿಮಾ ನಿರ್ಮಾಪಕರು ʼವರಾಹ ರೂಪಂʼ ಗೀತೆಯನ್ನು ಚಿತ್ರದಲ್ಲಿ ಬಳಕೆ ಮಾಡಬಹುದಾಗಿದೆ.

ಇದಕ್ಕೂ ಮೊದಲು ಈ ನ್ಯಾಯಾಲಯಗಳು ನೀಡಿದ್ದ ತಾತ್ಕಾಲಿಕ ಪ್ರತಿಬಂಧಕಾಜ್ಞೆಯನ್ನು ಪ್ರಶ್ನಿಸಿ ಹೊಂಬಾಳೆ ಸಿನಿಮಾ ಕೇರಳ ಹೈಕೋರ್ಟ್ ಮೆಟ್ಟಿಲೇರಿತ್ತು. ಆದರೆ, ಕೇರಳ ಹೈಕೋರ್ಟ್‌ ಇದನ್ನು ವಜಾಗೊಳಿಸಿತ್ತು. ಮುಂದೆ ಕೋರಿಕ್ಕೋಡ್‌ ನ್ಯಾಯಾಲಯವು ಥೈಕ್ಕುಡಂ ಬ್ರಿಜ್‌ ಸಲ್ಲಿಸಿದ್ದ ಅರ್ಜಿಯು ನಿರ್ವಹಣೆಗೆ ಯೋಗ್ಯವಲ್ಲ ಎಂದು ವಜಾಗೊಳಿಸಿತ್ತು. ಆದರೆ, ಈ ಆದೇಶಕ್ಕೆ ಡಿ.1ರಂದು ಕೇರಳ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಈ ವೇಳೆ ಮಾರನೆಯ ದಿನ ನ್ಯಾಯಾಲಯವು ಥೈಕ್ಕುಡಂ ಬ್ರಿಜ್‌ ಅರ್ಜಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಹಿಂದಿರುಗಿಸಲಾಗಿದೆ ಎಂದ ಮಾತ್ರಕ್ಕೆ ವರಾಹರೂಪಂ ಹಾಡಿಗೆ ವಿಚಾರಣಾ ನ್ಯಾಯಾಲಯ ನೀಡಿದ್ದ ಪ್ರತಿಬಂಧಕಾಜ್ಞೆ ಪುನರುಜ್ಜೀವನಗೊಂಡಿದೆ ಎಂದಲ್ಲ ಎಂದು ಸ್ಪಷ್ಟಪಡಿಸಿತ್ತು.

ಅಂತಿಮವಾಗಿ ಈಗ ಎರಡೂ ವಿಚಾರಣಾ ನ್ಯಾಯಾಲಯಗಳು ಥೈಕ್ಕುಡಂ ಅರ್ಜಿಯನ್ನು ವಿಚಾರಣಾ ವ್ಯಾಪ್ತಿಯ ಸಮಸ್ಯೆಯಿಂದಾಗಿ ಹಿಂದಿರುಗಿಸಿರುವುದರಿಂದ ಹಾಡನ್ನು ಈ ಮೊದಲಿನಂತೆಯೇ ಕಾಂತಾರ ಸಿನಿಮಾದಲ್ಲಿ ಅಳವಡಿಸಲು ಹೊಂಬಾಳೆ ಸಂಸ್ಥೆಗೆ ಯಾವುದೇ ಅಡ್ಡಿ ಇಲ್ಲದಂತಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT