ತಿಮ್ಮನ ಮೊಟ್ಟೆಗಳು ಸಿನಿಮಾದ ಪೋಸ್ಟರ್ 
ಸಿನಿಮಾ ಸುದ್ದಿ

ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ 'ತಿಮ್ಮನ ಮೊಟ್ಟೆಗಳು' ಸಿನಿಮಾ ಶೂಟಿಂಗ್ ಮುಕ್ತಾಯ

ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ ಮುಂಬರುವ ತಿಮ್ಮನ ಮೊಟ್ಟೆಗಳು ಸಿನಿಮಾದ ಚಿತ್ರೀಕರಣ ಮುಗಿದಿದೆ. ಈ ಹಿಂದೆ ಹೊಂಬಣ್ಣ ಮತ್ತು ಎಂಥಾ ಕಥೆ ಮಾರಾಯ ಚಿತ್ರಗಳನ್ನು ನಿರ್ದೇಶಿಸಿದ್ದ ನಿರ್ದೇಶಕರು ಇದೀದ ತಿಮ್ಮನ ಮೊಟ್ಟೆಗಳು ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ.

ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ ಮುಂಬರುವ ತಿಮ್ಮನ ಮೊಟ್ಟೆಗಳು ಸಿನಿಮಾದ ಚಿತ್ರೀಕರಣ ಮುಗಿದಿದೆ. ಈ ಹಿಂದೆ ಹೊಂಬಣ್ಣ ಮತ್ತು ಎಂಥಾ ಕಥೆ ಮಾರಾಯ ಚಿತ್ರಗಳನ್ನು ನಿರ್ದೇಶಿಸಿದ್ದ ನಿರ್ದೇಶಕರು ಇದೀದ ತಿಮ್ಮನ ಮೊಟ್ಟೆಗಳು ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ.

ತಿಮ್ಮನ ಮೊಟ್ಟೆಗಳು ಸಿನಿಮಾ ರಕ್ಷಿತ್ ತೀರ್ಥಹಳ್ಳಿ ಅವರ ಸ್ವರಚಿತ ಕಾಡಿನ ನೆಂಟರು ಕಾದಂಬರಿಯನ್ನು ಆಧರಿಸಿದ್ದು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ. ಬೆಟ್ಟಗುಡ್ಡಗಳಲ್ಲಿ ವಾಸಿಸುವ ಜನರ ಜೀವನಶೈಲಿ, ಸ್ವಭಾವ, ಮಾನವೀಯ ಮೌಲ್ಯಗಳನ್ನು ಚಿತ್ರ ಒಳಗೊಂಡಿದೆ.

ತಿಮ್ಮನ ಮೊಟ್ಟೆಗಳು ಸಿನಿಮಾವನ್ನು ಶಿವಮೊಗ್ಗ ಮೂಲದ ಅಮೆರಿಕ ನಿವಾಸಿ ಆದರ್ಶ ಅಯ್ಯಂಗಾರ್ ಅವರು ಶ್ರೀ ಕೃಷ್ಣ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ.

ತಿಮ್ಮನ ಮೊಟ್ಟೆಗಳು ತಾರಾಬಳಗದಲ್ಲಿ ಶೃಂಗೇರಿಯ ಕೇಶವ್ ಗುತ್ತಳಿಕೆ, ಸುಚೇಂದ್ರ ಪ್ರಸಾದ್, ಆಶಿಕಾ ಸೋಮಶೇಕರ್, ಪ್ರಗತಿ, ವಿನಯ್ ಕಣಿವೆ ಮತ್ತು ಮಾಸ್ಟರ್ ಶ್ರೀಹರ್ಷಾ ಮುಂತಾದವರು ನಟಿಸಿದ್ದಾರೆ.

ಪ್ರವೀಣ್ ಎಸ್ ಅವರ ಛಾಯಾಗ್ರಹಣ ಹಾಗೂ ಹೇಮಂತ್ ಜೋಯಿಸ್ ಅವರ ಸಂಗೀತ ಚಿತ್ರಕ್ಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!