ರಶ್ಮಿಕಾ ಮಂದಣ್ಣ 
ಸಿನಿಮಾ ಸುದ್ದಿ

ವೈಯಕ್ತಿಕ ವಿಚಾರವನ್ನು ಕ್ಯಾಮರಾ ಮುಂದೆ ಹೇಳಲು ಆಗಲ್ಲ; ಕಾಂತಾರ ಸಿನಿಮಾ ನೋಡಿ ಟೀಮ್ ಗೆ ಮೆಸೇಜ್ ಮಾಡಿದ್ದೆ: ರಶ್ಮಿಕಾ ಮಂದಣ್ಣ

ಆಂಗ್ಲ ಮಾಧ್ಯಮದ ಸಂದರ್ಶನವೊಂದರಲ್ಲಿ ಮೊದಲ ಸಿನಿಮಾದ ಪ್ರೊಡಕ್ಷನ್ ಹೌಸ್ ಹೆಸರು ಹೇಳದೆ ಸನ್ನೆ ಮೂಲಕ ಮಾತನಾಡಿದ್ದ ರಶ್ಮಿಕಾ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದರು.

ನಟಿ ರಶ್ಮಿಕಾ ಮಂದಣ್ಣ ಇತ್ತೀಚಿಗನ ದಿನಗಳಲ್ಲಿ ಮತ್ತೆ ಹಿಗ್ಗಾಮುಗ್ಗಾ ಟ್ರೋಲ್ ಆಗುತ್ತಿದ್ದಾರೆ. ಆಂಗ್ಲ ಮಾಧ್ಯಮದ ಸಂದರ್ಶನವೊಂದರಲ್ಲಿ ಮೊದಲ ಸಿನಿಮಾದ ಪ್ರೊಡಕ್ಷನ್ ಹೌಸ್ ಹೆಸರು ಹೇಳದೆ ಸನ್ನೆ ಮೂಲಕ ಮಾತನಾಡಿದ್ದ ರಶ್ಮಿಕಾ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದರು.

ರಶ್ಮಿಕಾ ತಮ್ಮ ವೃತ್ತಿಜೀವನವನ್ನು ಕನ್ನಡ ಚಿತ್ರರಂಗದಲ್ಲಿ ಕಿರಿಕ್ ಪಾರ್ಟಿ ಮೂಲಕ ಆರಂಭಿಸಿದರು.  ಕಾಂತಾರ ಚಿತ್ರವನ್ನು ನೋಡಿದ್ದೀರಾ ಎಂದು ರಶ್ಮಿಕಾ ಅವರನ್ನು ಕೆಲದಿನಗಳ ಹಿಂದೆ ಕೇಳಿದಾಗ, ಸಿನಿಮಾ ವೀಕ್ಷಿಸಿಲ್ಲ ಎಂದು ಉತ್ತರಿಸಿದರು. ಕನ್ನಡದವರಾಗಿ ತಮಗೆ ವೃತ್ತಿಜೀವನ ಆರಂಭಿಸಲು ಅವಕಾಶ ಕೊಟ್ಟಿದ್ದ ನಿರ್ದೇಶಕನ ಸಿನಿಮಾ ನೋಡಿಲ್ಲ ಎಂಬ ಕಾರಣಕ್ಕೆ ರಶ್ಮಿಕಾ ಅವರನ್ನು ಸಾಕಷ್ಟು ಟ್ರೋಲ್‌ ಮಾಡಲಾಗಿತ್ತು. ಕನ್ನಡ ಚಲನಚಿತ್ರೋದ್ಯಮವು ನಟಿಯ ಮೇಲೆ ಬ್ಯಾನ್‌ ಹೇರಲು ಯೋಜಿಸುತ್ತಿದೆ ಎಂಬ ಊಹಾಪೋಹಗಳು ಸಹ ಕೇಳಿಬಂದಿದ್ದವು.

ಹೈದರಾಬಾದ್‌ನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ, ರಶ್ಮಿಕಾ ಇದಕ್ಕೆ ಸ್ಪಷ್ಟನೆಯನ್ನು ನೀಡಿದ್ದಾರೆ. "ಬಿಡುಗಡೆಯಾದ ಎರಡು ದಿನಗಳ ನಂತರ ಕಾಂತಾರ ಚಿತ್ರವನ್ನು ನೋಡಿದ್ದೀರಾ ಎಂದು ನನ್ನನ್ನು ಕೇಳಿದರು ಮತ್ತು ನಾನು ಆಗ ನೋಡಿರಲಿಲ್ಲ. ಅದಕ್ಕೆ ನಾನು ಪ್ರಾಮಾಣಿಕವಾಗಿ ಉತ್ತರಿಸಿದೆ.

ಆದರೆ, ನಾನು ಇತ್ತೀಚೆಗೆ ಕಾಂತಾರ ಸಿನಿಮಾ ನೋಡಿದ್ದೇನೆ. ಅಲ್ಲದೇ ಟೀಂಗೆ ಮೆಸೇಜ್‌ ಮಾಡಿ ಅಭಿನಂದಿಸಿದೆ" ಆ ಕಡೆಯಿಂದಲೂ ನನಗೆ ರಿಪ್ಲೈ ಬಂದಿತ್ತು ಎಂದು ರಶ್ಮಿಕಾ ಹೇಳಿದರು.

ಇದೇ ವೇಳೆ ಬ್ಯಾನ್‌ ವಿಚಾರವಾಗಿ ಕೇಳಿದಾಗ, ಒಳಗಡೆ ಏನಾಗ್ತಿದೆ ಎಂದು ಈ  ಪ್ರಪಂಚಕ್ಕೆ ಗೊತ್ತಿಲ್ಲ. ಇಲ್ಲಿ ಏನಾಗಿದೆ ಎನ್ನುವುದು ದೇವರಿಗೆ ಗೊತ್ತು. ನಾನು ಎಲ್ಲಾ ವೈಯಕ್ತಿಕ ವಿಚಾರಗಳನ್ನು ಕ್ಯಾಮರಾ ಮುಂದೆ ಬಂದು ಹೇಳಲು ಸಾಧ್ಯವಿಲ್ಲ.

ನನ್ನ ವೈಯಕ್ತಿಕ ಜೀವನದ ಬಗ್ಗೆ ಜನ ಏನು ಹೇಳುತ್ತಾರೋ ಅದು ಮ್ಯಾಟರ್ ಆಗಲ್ಲ. ವೃತ್ತಿಪರ ಜೀವನದ ಬಗ್ಗೆ ಮಾತನಾಡಿದ್ರೆ ನಾವು ಅದರ ಬಗ್ಗೆ ಗಮನ ಕೊಡಬಹುದು. ಬ್ಯಾನ್ ಮಾಡುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ' ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT